ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಬುಧವಾರ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 2.52 ಕೋಟಿ ರೂ ಸಂಗ್ರಹವಾಗಿದೆ.
ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಬುಧವಾರ ಬೆಳಿಗ್ಗೆ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೋಲಿಸ್ ಬಂದೋಬಸ್ತ್ ನಲ್ಲಿ ಎಣಿಕೆ ಕಾರ್ಯ ಪ್ರಾರಂಭ ಮಾಡಲಾಯಿತು ಎಣಿಕೆ ಕಾರ್ಯವು ಸಂಜೆ 10 ಗಂಟೆಯ ವರೆಗೂ ನಡೆಯಿತು.

ಈ ಬಾರಿ ಅಯ್ಯಪ್ಪ, ಓಂ ಶಕ್ತಿ ಭಕ್ತಾದಿಗಳು ಸರ್ಕಾರಿ ರಜಾ ದಿನಗಳಂದು ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಜನರು ಆಗಮಿಸಿದ್ದರು ಕಳೆದ 42 ದಿನಗಳ ಅವಧಿಯಲ್ಲಿ 2.ಕೋಟಿ 52 ಲಕ್ಷದ 55 ಸಾವಿರದ 599 ರೂ 72 ಗ್ರಾಂ ಚಿನ್ನ ಹಾಗೂ 3.100 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.
ಶ್ರೀ ಮಲೆ ಮಹದೇಶ್ವರಸ್ವಾಮಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ, ಉಪಕಾರ್ಯದರ್ಶಿ ಬಸವರಾಜು, ದ್ವಿತೀಯ ದರ್ಜೆ ಸಹಾಯಕ ಮಹದೇವಸ್ವಾಮಿ ಎಸ್ ಬಿಐ ಬ್ಯಾಂಕ್ ವ್ಯವಸ್ಥಾಪಕರು ,ಮ,ಬೆಟ್ಟ ಪೊಲೀಸ್ ಸಿಬ್ಬಂದಿಗಳು ಸೇರಿದಂತೆ ಪ್ರಾಧಿಕಾರದ ಸಿಬ್ಬಂದಿ ವರ್ಗದವರು ಹಾಜರಿದ್ದರು.




