ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪವಾಡ ಪುರುಷ ನೆಲೆಸಿರುವ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಪ್ರವೇಶಕ್ಕೆ ಅರಣ್ಯ ಇಲಾಖೆ ಬಿಗ್ ಪ್ಲಾನ್ ರೂಪಿಸಿದೆ.
ನಾಗಮಲೆ ಪ್ರವೇಶಕ್ಕೆ ಅರಣ್ಯ ಇಲಾಖೆಯು ಇನ್ನುಮುಂದೆ ಆನ್ಲೈನ್ ಟಿಕೆಟ್ ವ್ಯವಸ್ಥೆ ಜಾರಿ ಮಾಡಲು ಸಿದ್ಧತೆ ಕೈಗೊಂಡಿರುವುದು ಸಾರ್ವಜನಿಕರು ಹಾಗೂ ಚಾರಣ ಪ್ರಿಯರಿಗೆ ಸಂತಸ ತಂದಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಅರಣ್ಯ ಇಲಾಖೆ ಅಧಿಕಾರಿಗಳು, ನಾಗಮಲೆ ಕ್ಷೇತ್ರದ ಪಾವಿತ್ರ್ಯಕ್ಕೆ ಯಾವುದೇ ರೀತಿಯ ಧಕ್ಕೆಯಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಅಲ್ಲಿ ಎಲ್ಲರೂ ಸ್ವಚ್ಛತೆ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ.
ಇನ್ನೂ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪರಿಸರ ಪ್ರೇಮಿಗಳು, ನಾಗಮಲೆ ಕ್ಷೇತ್ರ ಭಕ್ತಿ ಸಮರ್ಪಣೆಗೆ ಮೀಸಲಾಗಿದೆ. ಇಲ್ಲಿ ಅಕ್ರಮ ಮದ್ಯ ಹಾಗೂ ಗಾಂಜಾ ಮಾರಾಟ ಮಾಡಬಾರದು. ಈ ಕ್ಷೇತ್ರದಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಹದ್ದಿನ ಕಣ್ಣಿಡಬೇಕು ಎಂದು ಒತ್ತಾಯಿಸಿದ್ದಾರೆ.
ಕೆಲವು ತಿಂಗಳ ಹಿಂದೆಯಷ್ಟೇ ಚಾರಣ ಪ್ರದೇಶಗಳಿಗೆ ಪ್ರವಾಸಿಗರ ನಿರ್ಬಂಧ ಹೇರಿದ್ದ ಬೆನ್ನಲ್ಲೇ ನಾಗಮಲೆಗೂ ಪ್ರವೇಶ ನಿರ್ಬಂಧಿಸಲಾಗಿತ್ತು.
ಇದೀಗ ನಾಗಮಲೆಗೆ ಸಾರ್ವಜನಿಕರ ಪ್ರವೇಶಕ್ಕೆ ಪದೇ ಪದೇ ಒತ್ತಾಯ ಕೇಳಿಬಂದಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಆನ್ಲೈನ್ ಟಿಕೆಟ್ ವ್ಯವಸ್ಥೆ ಜಾರಿ ಮಾಡಲು ಕ್ರಮ ಕೈಗೊಂಡಿದ್ದು, ಚಾರಣಿಗರಿಗೆ ಭಾರೀ ಸಂತಸವಾಗಿದೆ.
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…