ಚಾಮರಾಜನಗರ

ಬೆಟ್ಟಳ್ಳಿ ಮಾರಮ್ಮ ಜಾತ್ರೆಯನ್ನು ಯಶಸ್ವಿಗೊಳಿಸಿ: ತಹಶೀಲ್ದಾರ್‌ ಚೈತ್ರಾ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಹನೂರು ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವವನ್ನು ಈ ಬಾರಿಯೂ ಎಲ್ಲಾ ಸಮುದಾಯದವರು ಶಾಂತಿ ಸೌಹಾರ್ದತೆಯಿಂದ ಯಶಸ್ವಿಗೊಳಿಸಲು ಸಹಕಾರ ನೀಡಬೇಕು ಎಂದು ತಹಸಿಲ್ದಾರ್ ಚೈತ್ರ ತಿಳಿಸಿದರು.

ಹನೂರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ ಸಂಬಂಧ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಹನೂರು ಪಟ್ಟಣದಲ್ಲಿ ನಾಲ್ಕು ದಿನಗಳ ಕಾಲ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವವನ್ನು ಹಲವಾರು ವರ್ಷಗಳಿಂದ ಎಲ್ಲಾ ಸಮುದಾಯದವರು ಒಟ್ಟುಗೂಡಿ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಅದೇ ರೀತಿ ಪಟ್ಟಣದ ಸರ್ವ ಜನಾಂಗದವರು ಈ ಬಾರಿಯೂ ಶ್ರೀ ಬೆಟ್ಟಳಿ ಮಾರಮ್ಮ ಜಾತ್ರಾ ಮಹೋತ್ಸವವನ್ನು ಯಶಸ್ವಿಯಾಗಿ ಆಚರಣೆ ಮಾಡಲು ಸಹಕಾರ ನೀಡಬೇಕು.

ಫೆಬ್ರವರಿ.24 ರಂದು ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುತ್ತಿದ್ದು, ಮಾರ್ಚ್ 9 ರಿಂದ 12 ರವರೆಗೆ ಜಾತ್ರಾ ಮಹೋತ್ಸವ ಜರುಗಲಿದೆ. ಪ್ರತಿಯೊಬ್ಬರು ಪ್ರೀತಿ ವಿಶ್ವಾಸದಿಂದ ಹಬ್ಬ ಆಚರಣೆ ಮಾಡಬೇಕು.
ಒಂದೊಮ್ಮೆ ಹಬ್ಬದ ಸಂದರ್ಭದಲ್ಲಿ ಕಾನೂನು ಪಾಲನೆ ಮಾಡದೆ ಕೋಮು ಗಲಭೆಗಳಿಗೆ ಅವಕಾಶ ಮಾಡಿಕೊಟ್ಟರೆ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು.

ಇದೇ ವೇಳೆ ಇನ್ಸ್‌ಪೆಕ್ಟರ್ ಆನಂದಮೂರ್ತಿ, ಸಬ್ ಇನ್ಸ್‌ಪೆಕ್ಟರ್‌ ಸಾಹೇಬ್ ಗೌಡ, ಆರೋಗ್ಯ ನಿರೀಕ್ಷಕ ಪ್ರಕಾಶ್, ಮುಖಂಡರಾದ ಲಿಂಗರಾಜುಗೌಡ, ರವಿ, ಶ್ರೀನಿವಾಸ್, ಮಂಜೇಶ್, ರಾಜುಗೌಡ, ಮಲ್ಲು, ಆನಂತ್, ಬಾಲರಾಜ್ ನಾಯ್ಡು, ಸಿದ್ದರಾಜು, ನಂಜಪ್ಪ, ಪ್ರಸನ್ನ ಮಹದೇವ ಸೇರಿದಂತೆ ಇನ್ನಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

11 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

11 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

12 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

12 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

12 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

13 hours ago