ಗುಂಡ್ಲುಪೇಟೆ: ಮೋಟರ್ ಆನ್ ಮಾಡುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕ ಮೃತಪಟ್ಟಿರುವ ಘಟನೆ ತಾಲೂಕಿನ ತೆರಕಣಾಂಬಿ ಗ್ರಾಮದ ತೋಟವೊಂದರಲ್ಲಿ ನಡೆದಿದೆ.
ತಾಲೂಕಿನ ಅಗತಗೌಡನಹಳ್ಳಿ ಗ್ರಾಮದ ರಾಜು(52) ಮೃತ ವ್ಯಕ್ತಿ. ಈತ ಕೇರಳ ಮೂಲದ ವ್ಯಕ್ತಿಯೊಬ್ಬರ ಜಮೀನಿನಲ್ಲಿ ಕೆಲಸ ಮಾಡಿಕೊಂಡಿದ್ದು, ಬುಧವಾರ ತಡರಾತ್ರಿ ಮೋಟರ್ ಆನ್ ಮಾಡುವ ಹೋದ ವೇಳೆ ವಿದ್ಯುತ್ ಸ್ಪರ್ಶವಾಗಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ.
ಮಾಹಿತಿ ಅರಿತ ತೆರಕಣಾಂಬಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಚೆಸ್ಕಾಂ ಅಧಿಕಾರಿಗಳನ್ನು ಬರಮಾಡಿಕೊಂಡು ಜಂಟಿ ಪರಿಶೀಲನೆ ನಡೆಸಿ, ಮೃತ ದೇಹವನ್ನು ಚಾಮರಾಜನಗರದ ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ. ಈ ಸಂಬಂಧ ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪರಿಹಾರಕ್ಕೆ ಒತ್ತಾಯ:
ಜಮೀನಿನಲ್ಲಿ ಕೆಲಸ ಮಾಡಿಕೊಂಡಿದ್ದ ಕೂಲಿ ಕಾರ್ಮಿಕ ಕಡು ಬಡವನಾಗಿದ್ದಾರೆ. ವಿದ್ಯುತ್ ಮೃತಪಟ್ಟಿರುವ ಕಾರಣ ಕುಟುಂಬ ಬೀದಿಗೆ ಬೀಳುವಂತಾಗಿದ್ದು, ಸಂಬಂಧ ಪಟ್ಟವರು ಸೂಕ್ತ ಪರಿಹಾರ ನೀಡಬೇಕೆಂದು ಅಗತಗೌಡನಹಳ್ಳಿ ಗ್ರಾಮಸ್ಥರು ಹಾಗೂ ಕುಟುಂಬದವರು ಒತ್ತಾಯಿಸಿದ್ದಾರೆ.
ವರದಿ : ಮಹೇಂದ್ರ ಹಸಗೂಲಿ
ಮಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ದಿಶಾ 600ಕ್ಕೆ…
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ.…
ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶೇ.86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ https:karresults.nic.in ನಲ್ಲಿ…
ಟೆಲ್ಅವೀವ್: ಕದನ ವಿರಾಮದ ನಡುವೆಯೂ ಲೆಬನಾನ್ನಲ್ಲಿ ಇಸ್ರೇಲ್ ಏರ್ಸ್ಟೈಕ್ ನಡೆಸಿ ಹಿಜ್ಬುಲ್ಲಾ ಮುಖ್ಯಸ್ಥ ನಯಿಮ್ ಕಾಸೆಮ್ನ ಸೋದರಳಿಯ ಯೂಸುಫ್ ಹರ್ಷಿಯನ್ನು…
ಟೆಹ್ರಾನ್ : ಅಮೆರಿಕ ಮತ್ತು ಇರಾನ್ ಮಧ್ಯೆ ಕದನ ವಿರಾಮ ಘೋಷಣೆಯಾದ ಬಳಿಕ ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್…
ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಏಪ್ರಿಲ್.15ಕ್ಕೆ ಮುಂದೂಡಿಕೆಯಾಗಿದೆ. ಜನಪ್ರತಿನಿಧಿಗಳ ವಿಶೇಷ…