ಚಾಮರಾಜನಗರ

ಕೃಷಿ ಪಂಪ್‌ಸೆಟ್‌ ಆನ್‌ ಮಾಡುವಾಗ ವಿದ್ಯುತ್‌ ಸ್ಪರ್ಶ : ವ್ಯಕ್ತಿ ಸಾವು

ಗುಂಡ್ಲುಪೇಟೆ: ಮೋಟರ್ ಆನ್ ಮಾಡುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕ ಮೃತಪಟ್ಟಿರುವ ಘಟನೆ ತಾಲೂಕಿನ ತೆರಕಣಾಂಬಿ ಗ್ರಾಮದ ತೋಟವೊಂದರಲ್ಲಿ ನಡೆದಿದೆ.

ತಾಲೂಕಿನ ಅಗತಗೌಡನಹಳ್ಳಿ ಗ್ರಾಮದ ರಾಜು(52) ಮೃತ ವ್ಯಕ್ತಿ. ಈತ ಕೇರಳ ಮೂಲದ ವ್ಯಕ್ತಿಯೊಬ್ಬರ ಜಮೀನಿನಲ್ಲಿ ಕೆಲಸ ಮಾಡಿಕೊಂಡಿದ್ದು, ಬುಧವಾರ ತಡರಾತ್ರಿ ಮೋಟರ್ ಆನ್ ಮಾಡುವ ಹೋದ ವೇಳೆ ವಿದ್ಯುತ್ ಸ್ಪರ್ಶವಾಗಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ.

ಮಾಹಿತಿ ಅರಿತ ತೆರಕಣಾಂಬಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಚೆಸ್ಕಾಂ ಅಧಿಕಾರಿಗಳನ್ನು ಬರಮಾಡಿಕೊಂಡು ಜಂಟಿ ಪರಿಶೀಲನೆ ನಡೆಸಿ, ಮೃತ ದೇಹವನ್ನು ಚಾಮರಾಜನಗರದ ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ. ಈ ಸಂಬಂಧ ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪರಿಹಾರಕ್ಕೆ ಒತ್ತಾಯ:

ಜಮೀನಿನಲ್ಲಿ ಕೆಲಸ ಮಾಡಿಕೊಂಡಿದ್ದ ಕೂಲಿ ಕಾರ್ಮಿಕ ಕಡು ಬಡವನಾಗಿದ್ದಾರೆ. ವಿದ್ಯುತ್ ಮೃತಪಟ್ಟಿರುವ ಕಾರಣ ಕುಟುಂಬ ಬೀದಿಗೆ ಬೀಳುವಂತಾಗಿದ್ದು, ಸಂಬಂಧ ಪಟ್ಟವರು ಸೂಕ್ತ ಪರಿಹಾರ ನೀಡಬೇಕೆಂದು ಅಗತಗೌಡನಹಳ್ಳಿ ಗ್ರಾಮಸ್ಥರು ಹಾಗೂ ಕುಟುಂಬದವರು ಒತ್ತಾಯಿಸಿದ್ದಾರೆ.

ವರದಿ : ಮಹೇಂದ್ರ ಹಸಗೂಲಿ

ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

3 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

7 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

7 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

7 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

10 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

10 hours ago