Man dies in bear attack in yalandoor
ಯಳಂದೂರು: ತಾಲ್ಲೂಕಿನ ಬಿಆರ್ಟಿ ಹುಲಿ ರಕ್ಷಿತ ಅರಣ್ಯ ಪ್ರದೇಶದಲ್ಲಿ ಕರಡಿ ದಾಳಿ ನಡೆಸಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.
ಬಿಳಿಗಿರಿರಂಗನ ಬೆಟ್ಟದ ಸೀಗೆಬೆಟ್ಟ ಪೋಡಿನ ನಿವಾಸಿ ಸಿದ್ದೇಗೌಡ (30) ಮೃತಪಟ್ಟ ವ್ಯಕ್ತಿ. ಇವರು ಸೋಮವಾರ ಮಧ್ಯಾಹ್ನ 2 ಗಂಟೆಗೆ ಬಿಆರ್ಟಿ ಅರಣ್ಯ ವ್ಯಾಪ್ತಿಯ ನೇರಿಗೇರಿ ಎಂಬ ಸ್ಥಳದಲ್ಲಿ ಕಿರು ಉತ್ಪನ್ನಗಳನ್ನು ಸಂಗ್ರಹಿಸಲು ಗುಂಪಿನೊಂದಿಗೆ ತೆರಳಿದ್ದರು. ಆ ವೇಳೆ ಕರಡಿ ದಾಳಿ ನಡೆಸಿದೆ. ಇವರೊಂದಿಗೆ ತೆರಳಿದ್ದ ಎಲ್ಲರೂ ಇಲ್ಲಿಂದ ಕಾಲ್ಕಿತ್ತರೆ ಸಿದ್ದೇಗೌಡ ಕರಡಿ ಕೈಯಲ್ಲಿ ಸಿಲುಕಿದ್ದು, ಕರಡಿ ಕಚ್ಚಿ ಗಾಯಗೊಳಿಸಿದ್ದರಿಂದ ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.
2 ವರ್ಷಗಳ ಹಿಂದೆ ಇವರ ಪತ್ನಿ ಮೃತಪಟ್ಟಿದ್ದು, ಇವರಿಗೆ ಎರಡೂವರೆ ವರ್ಷದ ಹೆಣ್ಣು ಮಗುವಿದೆ. ಈ ಸಂಬಂಧ ಅರಣ್ಯ ಇಲಾಖೆಯವರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆಯ ಸಿಬ್ಬಂಧಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ವಹಿಸಿದ್ದಾರೆ.
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…
ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…