ಚಾಮರಾಜನಗರ

ಚಿರತೆ ಸೆರೆಗೆ ಇಟ್ಟಿದ್ದ ಬೋನಿನಲ್ಲಿ 4 ತಾಸು ಲಾಕ್‌ ಆದ ವ್ಯಕ್ತಿ

ಯಳಂದೂರು: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ 4 ತಾಸು ಒದ್ದಾಟ ನಡೆಸಿದ ಘಟನೆ ಯಳಂದೂರು ತಾಲ್ಲೂಕಿನ ಗಂಗವಾಡಿಯಲ್ಲಿ ನಡೆದಿದೆ.

ಗಂಗವಾಡಿ ಗ್ರಾಮದ ಕಿಟ್ಟಿ ಎಂಬಾತನೇ ಬೋನಿನಲ್ಲಿ ಸಿಲುಕಿದ ವ್ಯಕ್ತಿ. ಗಂಗವಾಡಿ ಗ್ರಾಮದಲ್ಲಿ ಶನಿವಾರ ರಾತ್ರಿ ರಾಮಯ್ಯ ಎಂಬುವರಿಗೆ ಸೇರಿದ ಜಮೀನಿನಲ್ಲಿ ಚಿರತೆ ದಾಳಿ ನಡೆಸಿ ಮೂರು ಜಾನುವಾರುಗಳನ್ನು ಕೊಂದು ಹಾಕಿತ್ತು. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗಾಗಿ ಎರಡು ಕಡೆ ಬೋನನ್ನು ಇರಿಸಿದ್ದರು. ಒಂದು ರಾಮಯ್ಯನವರ ಜಮೀನಿನಲ್ಲಿ, ಮತ್ತೊಂದು ರುದ್ರ ಎಂಬುವವರ ಜಮೀನಿನಲ್ಲಿ ಬೋನು ಇರಿಸಿದ್ದರು.

ಇದನ್ನು ಓದಿ: ಮೈಸೂರು: ಬೀದಿನಾಯಿ ಹೊತ್ತೊಯ್ದ ಚಿರತೆ

ಬೋನನ್ನು ನೋಡಲು ತೆರಳಿದ ಕಿಟ್ಟಿ ಇದರ ಒಳ ಹೊಕ್ಕಿದ್ದಾರೆ. ಆಗ ಬೋನಿನ ಬಾಗಿಲು ಮುಚ್ಚಿಕೊಂಡಿದೆ. ಎಷ್ಟೇ ಪ್ರಯತ್ನ ಪಟ್ಟರೂ ಕೂಡ ಇದನ್ನು ತೆರೆಯಲು ಸಾಧ್ಯವಾಗಿಲ್ಲ. ಇವರ ಬಳಿ ಮೊಬೈಲ್‌ ಕೂಡ ಇರಲಿಲ್ಲ. ಹಾಗಾಗಿ ಇವರು ಇದರೊಳಗಿಂದಲೇ ಕಾಪಾಡಿ, ಕಾಪಾಡಿ ಎಂದು ಚೀರಾಟ ನಡೆಸಿದ್ದಾರೆ.

ಮಧ್ಯಾಹ್ನದ ವೇಳೆಗೆ ದನಗಾಯಿಗಳು, ರೈತರು ದೂರದಿಂದ ಇವರ ಕಣ್ಣಿಗೆ ಬಿದ್ದಿದ್ದಾರೆ. ಆಗ ಇವರು ಜೋರಾಗಿ ಕಿರುಚಿದ್ದಾರೆ. ಕೆಲವರು ಬೋನಿನ ಬಳಿ ಬಂದು ಕಿಟ್ಟಿ ಬೋನಿಗೆ ಸಿಲುಕಿಕೊಂಡಿರುವುದು ಗೊತ್ತಾಗಿದೆ.

ಬಳಿಕ ಗ್ರಾಮಸ್ಥರು ಬಂದು ಬೋನಿನ ಬಾಗಿಲನ್ನು ತೆರೆದು ಕಿಟ್ಟಿಯನ್ನು ಸುರಕ್ಷಿತವಾಗಿ ಹೊರಕ್ಕೆ ತಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

3 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

5 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

5 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

5 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

6 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

6 hours ago