ಚಾಮರಾಜನಗರ

ಚಿರತೆ ಸೆರೆಗೆ ಇಟ್ಟಿದ್ದ ಬೋನಿನಲ್ಲಿ 4 ತಾಸು ಲಾಕ್‌ ಆದ ವ್ಯಕ್ತಿ

ಯಳಂದೂರು: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ 4 ತಾಸು ಒದ್ದಾಟ ನಡೆಸಿದ ಘಟನೆ ಯಳಂದೂರು ತಾಲ್ಲೂಕಿನ ಗಂಗವಾಡಿಯಲ್ಲಿ ನಡೆದಿದೆ.

ಗಂಗವಾಡಿ ಗ್ರಾಮದ ಕಿಟ್ಟಿ ಎಂಬಾತನೇ ಬೋನಿನಲ್ಲಿ ಸಿಲುಕಿದ ವ್ಯಕ್ತಿ. ಗಂಗವಾಡಿ ಗ್ರಾಮದಲ್ಲಿ ಶನಿವಾರ ರಾತ್ರಿ ರಾಮಯ್ಯ ಎಂಬುವರಿಗೆ ಸೇರಿದ ಜಮೀನಿನಲ್ಲಿ ಚಿರತೆ ದಾಳಿ ನಡೆಸಿ ಮೂರು ಜಾನುವಾರುಗಳನ್ನು ಕೊಂದು ಹಾಕಿತ್ತು. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗಾಗಿ ಎರಡು ಕಡೆ ಬೋನನ್ನು ಇರಿಸಿದ್ದರು. ಒಂದು ರಾಮಯ್ಯನವರ ಜಮೀನಿನಲ್ಲಿ, ಮತ್ತೊಂದು ರುದ್ರ ಎಂಬುವವರ ಜಮೀನಿನಲ್ಲಿ ಬೋನು ಇರಿಸಿದ್ದರು.

ಇದನ್ನು ಓದಿ: ಮೈಸೂರು: ಬೀದಿನಾಯಿ ಹೊತ್ತೊಯ್ದ ಚಿರತೆ

ಬೋನನ್ನು ನೋಡಲು ತೆರಳಿದ ಕಿಟ್ಟಿ ಇದರ ಒಳ ಹೊಕ್ಕಿದ್ದಾರೆ. ಆಗ ಬೋನಿನ ಬಾಗಿಲು ಮುಚ್ಚಿಕೊಂಡಿದೆ. ಎಷ್ಟೇ ಪ್ರಯತ್ನ ಪಟ್ಟರೂ ಕೂಡ ಇದನ್ನು ತೆರೆಯಲು ಸಾಧ್ಯವಾಗಿಲ್ಲ. ಇವರ ಬಳಿ ಮೊಬೈಲ್‌ ಕೂಡ ಇರಲಿಲ್ಲ. ಹಾಗಾಗಿ ಇವರು ಇದರೊಳಗಿಂದಲೇ ಕಾಪಾಡಿ, ಕಾಪಾಡಿ ಎಂದು ಚೀರಾಟ ನಡೆಸಿದ್ದಾರೆ.

ಮಧ್ಯಾಹ್ನದ ವೇಳೆಗೆ ದನಗಾಯಿಗಳು, ರೈತರು ದೂರದಿಂದ ಇವರ ಕಣ್ಣಿಗೆ ಬಿದ್ದಿದ್ದಾರೆ. ಆಗ ಇವರು ಜೋರಾಗಿ ಕಿರುಚಿದ್ದಾರೆ. ಕೆಲವರು ಬೋನಿನ ಬಳಿ ಬಂದು ಕಿಟ್ಟಿ ಬೋನಿಗೆ ಸಿಲುಕಿಕೊಂಡಿರುವುದು ಗೊತ್ತಾಗಿದೆ.

ಬಳಿಕ ಗ್ರಾಮಸ್ಥರು ಬಂದು ಬೋನಿನ ಬಾಗಿಲನ್ನು ತೆರೆದು ಕಿಟ್ಟಿಯನ್ನು ಸುರಕ್ಷಿತವಾಗಿ ಹೊರಕ್ಕೆ ತಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮತ್ತೆ ಗ್ರಾಹಕರಿಗೆ ಶಾಕ್ ; ಪೆಟ್ರೋಲ್, ಡೀಸೆಲ್ ದರ 95 ಪೈಸೆ ಹೆಚ್ಚಳ

ಹೊಸದಿಲ್ಲಿ : ಇರಾನ್ ಮೇಲಿನ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ…

22 mins ago

2008ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್‌

ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ.…

29 mins ago

ಹಕ್ಕು ಪತ್ರ ವಿತರಣೆಯಲ್ಲಿ ದಾಖಲೆ ನಿರ್ಮಾಣ ಮಾಡಿದ ಕಂದಾಯ ಇಲಾಖೆ

ತುಮಕೂರು : ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆ-ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಏಕಕಾಲಕ್ಕೆ ಕಂದಾಯ ಇಲಾಖೆಯಿಂದ ಅತ್ಯಧಿಕ ಹಕ್ಕು…

33 mins ago

ಸಂಶೋಧನೆಗೆ ಸಂಕಟ | ಶಿಷ್ಯವೇತನಕ್ಕೆ ಆಗ್ರಹಿಸಿ ಮೈ.ವಿ.ವಿ ಸಂಶೋಧಕರ ಪ್ರತಿಭಟನೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಂಶೋಧಕರುಗಳಿಗೆ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಶಿಷ್ಯವೇತನರಹಿತ ಸಂಶೋಧಕರ ಬಳಗದ ವತಿಯಿಂದ ಮೈಸೂರು ವಿ.ವಿ…

39 mins ago

ಪ್ರಶ್ನೆ ಪತ್ರಿಕೆ ಸೋರಿಕೆ | ನೀಟ್‌ ರದ್ದು, ವಿದ್ಯಾರ್ಥಿಗಳ ಆತಹತ್ಯೆಗೆ ಮೋದಿ ಕಾರಣ ; ಸಿಎಂ ಆರೋಪ

ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ…

1 hour ago

ಕೊಟ್ಟ ಮಾತಿನಂತೆ ನಡೆಯುತ್ತಿದ್ದೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ತುಮಕೂರು : ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯದ ಜನತೆಗೆ ಪ್ರಣಾಳಿಕೆಯಲ್ಲಿ ನೀಡಿದ್ದ 580 ಭರವಸೆಗಳ ಪೈಕಿ 290ಕ್ಕೂ ಹೆಚ್ಚು ಭರವಸೆಗಳನ್ನು…

1 hour ago