ಚಾಮರಾಜನಗರ

ಚಿರತೆ ಸೆರೆಗೆ ಇಟ್ಟಿದ್ದ ಬೋನಿನಲ್ಲಿ 4 ತಾಸು ಲಾಕ್‌ ಆದ ವ್ಯಕ್ತಿ

ಯಳಂದೂರು: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ 4 ತಾಸು ಒದ್ದಾಟ ನಡೆಸಿದ ಘಟನೆ ಯಳಂದೂರು ತಾಲ್ಲೂಕಿನ ಗಂಗವಾಡಿಯಲ್ಲಿ ನಡೆದಿದೆ.

ಗಂಗವಾಡಿ ಗ್ರಾಮದ ಕಿಟ್ಟಿ ಎಂಬಾತನೇ ಬೋನಿನಲ್ಲಿ ಸಿಲುಕಿದ ವ್ಯಕ್ತಿ. ಗಂಗವಾಡಿ ಗ್ರಾಮದಲ್ಲಿ ಶನಿವಾರ ರಾತ್ರಿ ರಾಮಯ್ಯ ಎಂಬುವರಿಗೆ ಸೇರಿದ ಜಮೀನಿನಲ್ಲಿ ಚಿರತೆ ದಾಳಿ ನಡೆಸಿ ಮೂರು ಜಾನುವಾರುಗಳನ್ನು ಕೊಂದು ಹಾಕಿತ್ತು. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗಾಗಿ ಎರಡು ಕಡೆ ಬೋನನ್ನು ಇರಿಸಿದ್ದರು. ಒಂದು ರಾಮಯ್ಯನವರ ಜಮೀನಿನಲ್ಲಿ, ಮತ್ತೊಂದು ರುದ್ರ ಎಂಬುವವರ ಜಮೀನಿನಲ್ಲಿ ಬೋನು ಇರಿಸಿದ್ದರು.

ಇದನ್ನು ಓದಿ: ಮೈಸೂರು: ಬೀದಿನಾಯಿ ಹೊತ್ತೊಯ್ದ ಚಿರತೆ

ಬೋನನ್ನು ನೋಡಲು ತೆರಳಿದ ಕಿಟ್ಟಿ ಇದರ ಒಳ ಹೊಕ್ಕಿದ್ದಾರೆ. ಆಗ ಬೋನಿನ ಬಾಗಿಲು ಮುಚ್ಚಿಕೊಂಡಿದೆ. ಎಷ್ಟೇ ಪ್ರಯತ್ನ ಪಟ್ಟರೂ ಕೂಡ ಇದನ್ನು ತೆರೆಯಲು ಸಾಧ್ಯವಾಗಿಲ್ಲ. ಇವರ ಬಳಿ ಮೊಬೈಲ್‌ ಕೂಡ ಇರಲಿಲ್ಲ. ಹಾಗಾಗಿ ಇವರು ಇದರೊಳಗಿಂದಲೇ ಕಾಪಾಡಿ, ಕಾಪಾಡಿ ಎಂದು ಚೀರಾಟ ನಡೆಸಿದ್ದಾರೆ.

ಮಧ್ಯಾಹ್ನದ ವೇಳೆಗೆ ದನಗಾಯಿಗಳು, ರೈತರು ದೂರದಿಂದ ಇವರ ಕಣ್ಣಿಗೆ ಬಿದ್ದಿದ್ದಾರೆ. ಆಗ ಇವರು ಜೋರಾಗಿ ಕಿರುಚಿದ್ದಾರೆ. ಕೆಲವರು ಬೋನಿನ ಬಳಿ ಬಂದು ಕಿಟ್ಟಿ ಬೋನಿಗೆ ಸಿಲುಕಿಕೊಂಡಿರುವುದು ಗೊತ್ತಾಗಿದೆ.

ಬಳಿಕ ಗ್ರಾಮಸ್ಥರು ಬಂದು ಬೋನಿನ ಬಾಗಿಲನ್ನು ತೆರೆದು ಕಿಟ್ಟಿಯನ್ನು ಸುರಕ್ಷಿತವಾಗಿ ಹೊರಕ್ಕೆ ತಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜಕೀಯ ಮೇಲಾಟ ನಿಲ್ಲಲಿ; ಸಾಮಾನ್ಯರ ವಿಷಯ ಚರ್ಚೆಯಾಗಲಿ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಕೇಂದ್ರ ಬಿಂದುವಾಗಿದ್ದು,…

2 hours ago

ಪ್ರೇಮವೂ ಬಂಡಾಯದ ದನಿಯೇ – ಅಮೃತಾ ಪ್ರೀತಮ್

ರೇಣುಕಾ ನಿಡಗುಂದಿ ಮತ್ತೆ ಸಿಗುವೆ.. ಆದರೆ ಎಲ್ಲಿ? ಹೇಗೆ ನನಗೂ ತಿಳಿಯದು, ಈ ನಶ್ವರ ಲೋಕದ ಹಂಗು ಆತ್ಮಕ್ಕಿಲ್ಲ ನಾ…

2 hours ago

ನೀರಸವಾಯಿತು ರಾಜ್ಯ ವಿಧಾನಮಂಡಲ ಅಧಿವೇಶನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಈ ಬಾರಿಯ ರಾಜ್ಯ ವಿಧಾನಮಂಡಲ ಅಧಿವೇಶನ ನಾಡಿನ ಜನರಿಗೆ ರವಾನಿಸಿರುವ ಸಂದೇಶ ಏನು? ಇಂತಹದೊಂದು…

2 hours ago

ಪ್ರಕೃತಿ ಪ್ರಿಯರನ್ನು ಸೆಳೆಯುತ್ತಿರುವ ಮೇದುರ ಜಲಪಾತ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಪಶ್ಚಿಮ ಘಟ್ಟದ ಸಾಲಿನಲ್ಲಿ ಮಳೆಯ ಅಬ್ಬರ ಹೆಚ್ಚಾಗುತ್ತಿದ್ದಂತೆ ಕೊಡಗಿನ ಜಲಪಾತಗಳು ಮೈದುಂಬಿ ಹರಿಯುತ್ತಿದ್ದು, ಪ್ರಕೃತಿ ಸೌಂದರ್ಯಕ್ಕೆ…

2 hours ago

ಮಳೆ ಕೊರತೆ; ಹುಣಸೂರು ತಾಲ್ಲೂಕಿನಲ್ಲಿ ರೈತರಿಗೆ ಸಂಕಷ್ಟ

ಎಂ.ಯೋಗಾನಂದ ಬಿತ್ತನೆ ಮಾಡಿದ ಬೆಳೆಗಳು ಕೈ ಸೇರದೆ ಆತಂಕ, ಸೂಕ್ತ ಬೆಳೆ ನಷ್ಟ ಪರಿಹಾರಕ್ಕೆ ಆಗ್ರಹ ಹುಣಸೂರು: ತಾಲ್ಲೂಕಿನಲ್ಲಿ ಈ…

2 hours ago

ಸರ್ವರ್ ಸಮಸ್ಯೆ; ಪಡಿತರ ಪಡೆಯಲು ಪಡಿಪಾಟಲು

ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳಲ್ಲಿ ಸರ್ವರ್ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಆಗ್ರಹ  ಕೆ.ಆರ್.ನಗರ: ಕೇಂದ್ರ ಸರ್ಕಾರದ ನಿರ್ದೇಶನದಂತೆ ಆಗಸ್ಟ್…

2 hours ago