ಹನೂರು: ತಾಲೂಕಿನ ಪ್ರಸಿದ್ದ ಧಾರ್ಮಿಕ ಸ್ಥಳವಾದ ಮಲೆಮಹದೇಶ್ವರ ಬೆಟ್ಟದ ಮಲೆಮಹದೇಶ್ವರ ಸ್ವಾಮಿ ದೇವಾಲಯದ ಗೋಪುರದ ಮೇಲೆ ಏರಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನೆಡೆದಿದೆ. ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ಮೂಲದ ಮೃತ್ಯುಂಜಯ ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿದ ಮಾನಸಿಕ ಅಸ್ವಸ್ಥ ಎಂದು ಹೇಳಲಾಗಿದೆ.
ಶ್ರೀ ಕ್ಷೇತ್ರದ ಮಾದಪ್ಪ ದೇವಾಲಯದ ಗೋಪುರ ಏರಿದ ಆತನನ್ನು ನೆರೆದಿದ್ದ ಭಕ್ತ ಸಮೂಹ ಕೆಳಗಿಳಿಯುವಂತೆ ಕೇಳಿಕೊಂಡರು ಯಾವುದಕ್ಕೂ ಕಿವಿಗೊಡದೆ ಗೋಪುರದ ಮೇಲೆ ಮೇಲೆ ಏರುತಿದ್ದ.ಈ ಬಗ್ಗೆ ಮಾಹಿತಿ ತಿಳಿದ ಮಹದೇಶ್ವರಬೆಟ್ಟ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ನೆರೆದಿದ್ದ ಭಕ್ತರ ಸಹಕಾರದೊಂದಿಗೆ ಆತನನ್ನು ಮನವೊಲಿಸಿ ಕೆಳಗಿಸುವಲ್ಲಿ
ಯಶಸ್ವಿಯಾಗಿದ್ದಾರೆ.
ಈ ವೇಳೆ ವ್ಯಕ್ತಿ ಪಂಚೆ ಬಿಟ್ಟರೆ ಮೈಮೇಲೆ ಮತ್ಯಾವ ಬಟ್ಟೆ ಇಲ್ಲದೆ ಮಾನಸಿಕ ಅಸ್ವಸ್ಥನಂತೆ ವರ್ತಿಸಿದ್ದ ಎನ್ನಲಾಗಿದೆ. ನಂತರ ಪೊಲೀಸರೇ ಬಟ್ಟೆ ಕೊಡಿಸಿ, ಬಸ್ ಚಾರ್ಜ್ ಗೆ ಹಣ ನೀಡಿ ಗ್ರಾಮಕ್ಕೆ ವಾಪಸ್ ಕಳಿಸಿಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮಾನಸಿಕ ಅಸ್ವಸ್ಥ ವ್ಯಕ್ತಿಯಾಗಲಿ, ಜೀವನದಲ್ಲಿ ಜಿಗಪ್ಸೆ ಹೊಂದಿದವರಾಗಲಿ, ಮಲೆ ಮಹದೇಶ್ವರ ಬೆಟ್ಟದ ರಾಜಗೋಪುರ ಹಾಗೂ ಇನ್ನಿತರ ಗೋಪುರಗಳಿಗೆ ಹೇರಿ ಹುಚ್ಛಾಟ ಮೆರೆಯಬಾರದು.ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವಂತಹ ಭಕ್ತಾದಿಗಳು ತಮ್ಮ ಕಷ್ಟ ಕಾರ್ಪಣ್ಯಗಳನ್ನು ಈಡೇರಿಸುವಂತೆ ಕೋರಿಕೆ ಮಾಡಲು ಬರುವುದು ವಾಡಿಕೆ ಅದರಂತೆ ಮಾದಪ್ಪನ ಬೆಟ್ಟಕ್ಕೆ ಕೆಟ್ಟ ಹೆಸರು ತರಬಾರದು ಎಂದು ಪೊನ್ನಾಚಿ ಸ್ನೇಹಜೀವಿ ರಾಜು ಮನವಿ ಮಾಡಿದ್ದಾರೆ.
ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು…
ಮಂಡ್ಯ: ಜಿಲ್ಲೆಯಲ್ಲಿ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿದ್ದು ಯುವಜನತೆಯ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶವನ್ನು ಕಲ್ಪಿಸುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷವಾಗಿ ಕಾಳಜಿ ವಹಿಸಿದ್ದೇನೆ…
ಮೈಸೂರು: ಕೆಲಸ ಇಲ್ಲದವರ ಆರೋಪಕ್ಕೆ ಉತ್ತರ ಕೊಡಲ್ಲ ಎಂಬ ಎಂಎಲ್ಸಿ ಹಾಗೂ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಮಾಜಿ…
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್…
ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…