Mysore
21
overcast clouds

Social Media

ಬುಧವಾರ, 19 ಆಗಸ್ಟ್ 2026
Light
Dark

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Student Death

ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ

ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬೆಂಡರವಾಡಿ ತಾವರೆ ಕೆರೆಯಲ್ಲಿ ಮಂಗಳವಾರ ನಡೆದಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಮಾಗನೂರು ಗ್ರಾಮದ ಮಲ್ಲಿಕಾರ್ಜುನ (39)
ಮೃತಪಟ್ಟವರು.
ಬೆಳಿಗ್ಗೆ 8ಗಂಟೆಯಲ್ಲಿ ಬೈಕು, ಚಪ್ಪಲಿಯನ್ನು ದಡದಲ್ಲಿ ಬಿಟ್ಟು ಕೆರೆಗೆ ಹಾರಿದ್ದು ಈ ವಿಚಾರ ಪೊಲೀಸರಿಗೆ ಗೊತ್ತಾಗಿ ಶವವನ್ನು ಮೇಲಕ್ಕೆ ಎತ್ತಿ ಮರಣೋತ್ತರ ಪರೀಕ್ಷೆ ನಂತರ ಕುಟುಂಬ ವರ್ಗದವರಿಗೆ ಹಸ್ತಾಂತರ ಮಾಡಿದರು.
ಮೃತರು ವಿವಾಹಿತರಾಗಿದ್ದು ಮದ್ಯ ವ್ಯಸನಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬೈಕ್ ನೋಂದಣಿ ಸಂಖ್ಯೆಯಿಂದ ಇವರು ಮಂಡ್ಯ ಜಿಲ್ಲೆಯವರು ಎಂಬುದು ಕೂಡಲೇ ಗೊತ್ತಾಗಿದೆ.
ಈ ಸಂಬಂಧ ನಗರದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಘಟನಾಸ್ಥಳಕ್ಕೆ ಇನ್ಸ್ ಪೆಕ್ಟರ್ ಶೇಷಾದ್ರಿ,ಅಪರಾಧ ವಿಭಾಗದ ಎಸ್ಸೈ ಸೀಗಯ್ಯ, ಎಎಸ್ಸೈ ಚಂದ್ರಶೇಖರ ಮತ್ತು ಸಿಬ್ಬಂದಿ ಭೇಟಿ ನೀಡಿದ್ದರು.

Tags:
error: Content is protected !!