Student Death
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ
ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬೆಂಡರವಾಡಿ ತಾವರೆ ಕೆರೆಯಲ್ಲಿ ಮಂಗಳವಾರ ನಡೆದಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಮಾಗನೂರು ಗ್ರಾಮದ ಮಲ್ಲಿಕಾರ್ಜುನ (39)
ಮೃತಪಟ್ಟವರು.
ಬೆಳಿಗ್ಗೆ 8ಗಂಟೆಯಲ್ಲಿ ಬೈಕು, ಚಪ್ಪಲಿಯನ್ನು ದಡದಲ್ಲಿ ಬಿಟ್ಟು ಕೆರೆಗೆ ಹಾರಿದ್ದು ಈ ವಿಚಾರ ಪೊಲೀಸರಿಗೆ ಗೊತ್ತಾಗಿ ಶವವನ್ನು ಮೇಲಕ್ಕೆ ಎತ್ತಿ ಮರಣೋತ್ತರ ಪರೀಕ್ಷೆ ನಂತರ ಕುಟುಂಬ ವರ್ಗದವರಿಗೆ ಹಸ್ತಾಂತರ ಮಾಡಿದರು.
ಮೃತರು ವಿವಾಹಿತರಾಗಿದ್ದು ಮದ್ಯ ವ್ಯಸನಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬೈಕ್ ನೋಂದಣಿ ಸಂಖ್ಯೆಯಿಂದ ಇವರು ಮಂಡ್ಯ ಜಿಲ್ಲೆಯವರು ಎಂಬುದು ಕೂಡಲೇ ಗೊತ್ತಾಗಿದೆ.
ಈ ಸಂಬಂಧ ನಗರದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಘಟನಾಸ್ಥಳಕ್ಕೆ ಇನ್ಸ್ ಪೆಕ್ಟರ್ ಶೇಷಾದ್ರಿ,ಅಪರಾಧ ವಿಭಾಗದ ಎಸ್ಸೈ ಸೀಗಯ್ಯ, ಎಎಸ್ಸೈ ಚಂದ್ರಶೇಖರ ಮತ್ತು ಸಿಬ್ಬಂದಿ ಭೇಟಿ ನೀಡಿದ್ದರು.
ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…
ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…
ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…
ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…
ನವೀನ್ ಡಿಸೋಜ ಕೊಡಗಿನಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ೩,೦೦,೩೬೯ ಮಂದಿಗೆ ನಮೂನೆ ವಿತರಣೆ; ೯,೧೨೫ ನಮೂನೆಗಳ ಡಿಜಿಟಲೀಕರಣ ಮಡಿಕೇರಿ:…