Mango and jackfruit crops destroyed in wild elephant attack: Distressed farmer
ಹನೂರು : ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಆಣೆ ಹೊಲ ಹಾಗೂ ಕರಡಿ ಸೀಳು ಪ್ರದೇಶದಲ್ಲಿ ಕಾಡಾನೆಗಳ ದಾಳಿಗೆ ರೈತರು ಬೆಳೆದಿದ್ದ ಮಾವಿನಹಣ್ಣು, ಹಲಸು, ಬಾಳೆ ಬೆಳೆ ನಾಶವಾಗಿದೆ. ಇದರಿಂದ ಸುಮಾರು ಐವತ್ತು ಸಾವಿರಕ್ಕೂ ಹೆಚ್ಚು ನಷ್ಟವಾಗಿದೆ.
ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಣೆ ಹೊಲ ಗ್ರಾಮದ ಮಾದಯ್ಯ ಎಂಬುವರು ತಮ್ಮ ಜಮೀನಿನಲ್ಲಿ ಬಾಳೆಹಲಸು ಮಾವಿನ ಹಣ್ಣು ಪಡೆದಿದ್ದರು. ಕಳೆದ ಮೂರು ದಿನಗಳಿಂದ ಕಾಡಾನೆಗಳ ಹಿಂದು ನಿರಂತರವಾಗಿ ದಾಳಿ ಮಾಡುತ್ತಿರುವುದರಿಂದ ಒಂದು ಸಾವಿರಕ್ಕೂ ಹೆಚ್ಚು ಮಾವಿನಹಣ್ಣು, ನೂರಕ್ಕೂ ಹೆಚ್ಚು ಹಲಸಿನ ಹಣ್ಣು, ಹತ್ತಕ್ಕೂ ಹೆಚ್ಚು ಬಾಳೆಗೊನೆ ತಿಂದು ತುಳಿದು ನಾಶಪಡಿಸಿದೆ.
ಈ ಸಂಬಂಧ ಕಳೆದ ಒಂದು ತಿಂಗಳಿನಿಂದಲೂ ಮಲೆ ಮಾದೇಶ್ವರ ಬೆಟ್ಟ ಸುತ್ತಮುತ್ತಲಿನ ಗ್ರಾಮಗಳ ಸಮೀಪವೇ ಒಂಟಿ ಸಲಗ ಒಂದು ದಾಳಿ ಮಾಡುತ್ತಿದೆ. ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕಾಡಾನೆಗಳ ಹಾವಳಿ ನಿಯಂತ್ರಿಸುವಂತೆ ಹಲವಾರು ಬಾರಿ ಮನವಿ ಮಾಡಿದ್ದರು ಪ್ರಯೋಜನವಾಗಿಲ್ಲ, ಮುಂದಿನ ದಿನಗಳಲ್ಲಾದರೂ ಕಾಡುಪ್ರಾಣಿಗಳ ಹಾವಳಿ ತಪ್ಪಿಸುವಂತೆ ಮನವಿ ಮಾಡಿದ್ದಾರೆ. ಬಾಳೆ, ಮಾವು ಹಲಸು ನಷ್ಟವಾಗಿರುವ ಹಿನ್ನೆಲೆ ಅರಣ್ಯ ಇಲಾಖೆಯಿಂದ ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…