Mango and jackfruit crops destroyed in wild elephant attack: Distressed farmer
ಹನೂರು : ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಆಣೆ ಹೊಲ ಹಾಗೂ ಕರಡಿ ಸೀಳು ಪ್ರದೇಶದಲ್ಲಿ ಕಾಡಾನೆಗಳ ದಾಳಿಗೆ ರೈತರು ಬೆಳೆದಿದ್ದ ಮಾವಿನಹಣ್ಣು, ಹಲಸು, ಬಾಳೆ ಬೆಳೆ ನಾಶವಾಗಿದೆ. ಇದರಿಂದ ಸುಮಾರು ಐವತ್ತು ಸಾವಿರಕ್ಕೂ ಹೆಚ್ಚು ನಷ್ಟವಾಗಿದೆ.
ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಣೆ ಹೊಲ ಗ್ರಾಮದ ಮಾದಯ್ಯ ಎಂಬುವರು ತಮ್ಮ ಜಮೀನಿನಲ್ಲಿ ಬಾಳೆಹಲಸು ಮಾವಿನ ಹಣ್ಣು ಪಡೆದಿದ್ದರು. ಕಳೆದ ಮೂರು ದಿನಗಳಿಂದ ಕಾಡಾನೆಗಳ ಹಿಂದು ನಿರಂತರವಾಗಿ ದಾಳಿ ಮಾಡುತ್ತಿರುವುದರಿಂದ ಒಂದು ಸಾವಿರಕ್ಕೂ ಹೆಚ್ಚು ಮಾವಿನಹಣ್ಣು, ನೂರಕ್ಕೂ ಹೆಚ್ಚು ಹಲಸಿನ ಹಣ್ಣು, ಹತ್ತಕ್ಕೂ ಹೆಚ್ಚು ಬಾಳೆಗೊನೆ ತಿಂದು ತುಳಿದು ನಾಶಪಡಿಸಿದೆ.
ಈ ಸಂಬಂಧ ಕಳೆದ ಒಂದು ತಿಂಗಳಿನಿಂದಲೂ ಮಲೆ ಮಾದೇಶ್ವರ ಬೆಟ್ಟ ಸುತ್ತಮುತ್ತಲಿನ ಗ್ರಾಮಗಳ ಸಮೀಪವೇ ಒಂಟಿ ಸಲಗ ಒಂದು ದಾಳಿ ಮಾಡುತ್ತಿದೆ. ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕಾಡಾನೆಗಳ ಹಾವಳಿ ನಿಯಂತ್ರಿಸುವಂತೆ ಹಲವಾರು ಬಾರಿ ಮನವಿ ಮಾಡಿದ್ದರು ಪ್ರಯೋಜನವಾಗಿಲ್ಲ, ಮುಂದಿನ ದಿನಗಳಲ್ಲಾದರೂ ಕಾಡುಪ್ರಾಣಿಗಳ ಹಾವಳಿ ತಪ್ಪಿಸುವಂತೆ ಮನವಿ ಮಾಡಿದ್ದಾರೆ. ಬಾಳೆ, ಮಾವು ಹಲಸು ನಷ್ಟವಾಗಿರುವ ಹಿನ್ನೆಲೆ ಅರಣ್ಯ ಇಲಾಖೆಯಿಂದ ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…