ಕೊಳ್ಳೇಗಾಲ : ಹಳೇ ವೈಷಮ್ಯ ಹಿನ್ನೆಲೆ ವ್ಯಕ್ತಿಯೋರ್ವನನ್ನು ಪತಿ ಪತ್ನಿ ಇಬ್ಬರು ಮಾರಕಾಸ್ತ್ರದಿಂದ ಹೊಡೆದು ಭೀಕರವಾಗಿ ಹತ್ಯೆಗೈದಿರುವ ಘಟನೆ ತಾಲ್ಲೂಕಿನ ಚನ್ನೀಪುರದೊಡ್ಡಿ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಜರುಗಿದೆ.
ಚನ್ನೀಪುರದೊಡ್ಡಿ ಗ್ರಾಮದ ಹಾಲಿನ ಡೈರಿ ಕಾರ್ಯದರ್ಶಿ ಹಾಗೂ ವ್ಯವಸಾಯ ಮಾಡುತ್ತಿದ್ದ ಉಮೇಶ್(50) ಕೊಲೆಯಾದ ವ್ಯಕ್ತಿ. ಅದೇ ಗ್ರಾಮದ ಸ್ವಾಮಿಗೌಡ(60) ಹಾಗೂ ನಾಗಮ್ಮ(50) ಎನ್ನುವರು ಕೊಲೆ ಮಾಡಿದ ಆರೋಪಿ.
ಚನ್ನೀಪುರ ಗ್ರಾಮದಲ್ಲಿ ಹಾಲಿನ ಡೈರಿ ಇಟ್ಟಿದ್ದ ಉಮೇಶ್ ಎನ್ನುವನು ಆರೋಪಿ ಸ್ವಾಮಿಗೌಡನಿಗೆ ಹಿಂದೆ ಒಂದು ಲಕ್ಷ ಹಣವನ್ನು ವಯಕ್ತಿಕವಾಗಿ ನೀಡಿದ್ದನು. ಕಳೆದ ಒಂದು ವರ್ಷದಿಂದ ಉಮೇಶ್ ನ ಡೈರಿಗೆ ಹಾಲು ಹಾಕದೇ ಪಕ್ಕದ ಹೊಸಹಳ್ಳಿ ನಿಂಗಯ್ಯದೊಡ್ಡಿ ಗ್ರಾಮದ ಡೈರಿ ಹಾಲು ಹಾಕುತ್ತಿದ್ದನು. ಮೊನ್ನೆ ತಾನು ನೀಡಿದ್ದ ಹಣವನ್ನು ಕೇಳಲು ಹೋಗಿದ್ದ ಉಮೇಶ್ ನ ಜೊತೆ ಆರೋಪಿ ಗಲಾಟೆ ಮಾಡಿದ್ದನು.
ಇಂದು ಮಧ್ಯಾಹ್ನ ಉಮೇಶ್ ಆರೋಪಿ ಮನೆ ಮುಂದೆ ನಡೆದುಕೊಂಡು ಹೋಗುವಾಗ ಆರೋಪಿ ಸ್ವಾಮಿಗೌಡ ಹಾಗೂ ಆತನ ಹೆಂಡತಿ ನಾಗಮ್ಮ ಇವರಿಬ್ಬರು ಉಮೇಶ್ ನ ಮೇಲೆ ಗಲಾಟೆ ಮಾಡಿ ಲಾಂಗ್ ಮಚ್ಚು ಮಾರಕಾಸ್ತ್ರದಿಂದ ತಲೆ ಹಾಗೂ ಕತ್ತು ಭಾಗಕ್ಕೆ ಹೊಡೆದು ಪಕ್ಕದ ಚಾನಲ್ ಗೆ ಬಿಸಾಡಿದ್ದಾನೆ.
ಗಲಾಟೆ ತಿಳಿದು ಸ್ಥಳಕ್ಕೆ ಆಗಮಿಸಿದ್ದ ಮಹದೇವ ಚಾನಲ್ ಬಿದ್ದಿದ್ದ ಉಮೇಶ್ ನನ್ನು ನೋಡಿದಾಗ ಉಸಿರಾಡುವುದನ್ನು ಕಂಡು ತಕ್ಷಣ ಕಾರಿನಲ್ಲಿ ಗಾಯಾಳುವನ್ನು ಕೊಳ್ಳೇಗಾಲ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸುವಷ್ಟರಲ್ಲಿ ಸಾವನ್ನಪ್ಪಿದ್ದಾನೆ. ವಿಚಾರ ತಿಳಿದು ಆಸ್ಪತ್ರೆಗೆ ಪೊಲೀಸ್ ವರಿಷ್ಠಾಧಿಕಾರಿ ಡಾ.ಕವಿತಾ ಭೇಟಿ ನೀಡಿ ಬಳಿಕ ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದರು.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಆರೋಪಿ ಪತ್ತೆಗೆ ಬಲೆಬೀಸಿದ್ದಾರೆ. ಮೃತ್ತದೇಹವನ್ನು ಚಾ.ನಗರ ಸಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದ್ದು ನಾಳೆ ಮರಣೋತ್ತರ ಪರೀಕ್ಷೆ ನಡೆಯಲಿದೆ.
ಕೊಡಗು: ಅನ್ಯಕೋಮಿನ ಯುವಕರು ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಪ್ರಕರಣವನ್ನು ಕಾಂಗ್ರೆಸ್ ಶಾಸಕ ಮಂಥರ್ ಗೌಡ ಖಂಡಿಸಿದ್ದಾರೆ. ಈ…
ಮಂಗಳೂರು: ಮಾರ್ಚ್.3ರಂದು ಈ ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದೆ. ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ದರ್ಶನ ಸಮಯ…
ಬೆಂಗಳೂರು: ಕಾಂಗ್ರೆಸ್ ಶಾಸಕರ ನಿಧನದ ಕಾರಣ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಘೋಷಣೆ ಆಗಲಿದೆ.…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಬಣದ ಕೆಲ ಶಾಸಕರು ಖಾಸಗಿ ಹೋಟೆಲ್ನಲ್ಲಿ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ…
ಬೆಂಗಳೂರು: ಮಾರ್ಚ್.3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ…
ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್ ಎಂಬಾತನ…