ಕೊಳ್ಳೇಗಾಲ : ಹಳೇ ವೈಷಮ್ಯ ಹಿನ್ನೆಲೆ ವ್ಯಕ್ತಿಯೋರ್ವನನ್ನು ಪತಿ ಪತ್ನಿ ಇಬ್ಬರು ಮಾರಕಾಸ್ತ್ರದಿಂದ ಹೊಡೆದು ಭೀಕರವಾಗಿ ಹತ್ಯೆಗೈದಿರುವ ಘಟನೆ ತಾಲ್ಲೂಕಿನ ಚನ್ನೀಪುರದೊಡ್ಡಿ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಜರುಗಿದೆ.
ಚನ್ನೀಪುರದೊಡ್ಡಿ ಗ್ರಾಮದ ಹಾಲಿನ ಡೈರಿ ಕಾರ್ಯದರ್ಶಿ ಹಾಗೂ ವ್ಯವಸಾಯ ಮಾಡುತ್ತಿದ್ದ ಉಮೇಶ್(50) ಕೊಲೆಯಾದ ವ್ಯಕ್ತಿ. ಅದೇ ಗ್ರಾಮದ ಸ್ವಾಮಿಗೌಡ(60) ಹಾಗೂ ನಾಗಮ್ಮ(50) ಎನ್ನುವರು ಕೊಲೆ ಮಾಡಿದ ಆರೋಪಿ.
ಚನ್ನೀಪುರ ಗ್ರಾಮದಲ್ಲಿ ಹಾಲಿನ ಡೈರಿ ಇಟ್ಟಿದ್ದ ಉಮೇಶ್ ಎನ್ನುವನು ಆರೋಪಿ ಸ್ವಾಮಿಗೌಡನಿಗೆ ಹಿಂದೆ ಒಂದು ಲಕ್ಷ ಹಣವನ್ನು ವಯಕ್ತಿಕವಾಗಿ ನೀಡಿದ್ದನು. ಕಳೆದ ಒಂದು ವರ್ಷದಿಂದ ಉಮೇಶ್ ನ ಡೈರಿಗೆ ಹಾಲು ಹಾಕದೇ ಪಕ್ಕದ ಹೊಸಹಳ್ಳಿ ನಿಂಗಯ್ಯದೊಡ್ಡಿ ಗ್ರಾಮದ ಡೈರಿ ಹಾಲು ಹಾಕುತ್ತಿದ್ದನು. ಮೊನ್ನೆ ತಾನು ನೀಡಿದ್ದ ಹಣವನ್ನು ಕೇಳಲು ಹೋಗಿದ್ದ ಉಮೇಶ್ ನ ಜೊತೆ ಆರೋಪಿ ಗಲಾಟೆ ಮಾಡಿದ್ದನು.
ಇಂದು ಮಧ್ಯಾಹ್ನ ಉಮೇಶ್ ಆರೋಪಿ ಮನೆ ಮುಂದೆ ನಡೆದುಕೊಂಡು ಹೋಗುವಾಗ ಆರೋಪಿ ಸ್ವಾಮಿಗೌಡ ಹಾಗೂ ಆತನ ಹೆಂಡತಿ ನಾಗಮ್ಮ ಇವರಿಬ್ಬರು ಉಮೇಶ್ ನ ಮೇಲೆ ಗಲಾಟೆ ಮಾಡಿ ಲಾಂಗ್ ಮಚ್ಚು ಮಾರಕಾಸ್ತ್ರದಿಂದ ತಲೆ ಹಾಗೂ ಕತ್ತು ಭಾಗಕ್ಕೆ ಹೊಡೆದು ಪಕ್ಕದ ಚಾನಲ್ ಗೆ ಬಿಸಾಡಿದ್ದಾನೆ.
ಗಲಾಟೆ ತಿಳಿದು ಸ್ಥಳಕ್ಕೆ ಆಗಮಿಸಿದ್ದ ಮಹದೇವ ಚಾನಲ್ ಬಿದ್ದಿದ್ದ ಉಮೇಶ್ ನನ್ನು ನೋಡಿದಾಗ ಉಸಿರಾಡುವುದನ್ನು ಕಂಡು ತಕ್ಷಣ ಕಾರಿನಲ್ಲಿ ಗಾಯಾಳುವನ್ನು ಕೊಳ್ಳೇಗಾಲ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸುವಷ್ಟರಲ್ಲಿ ಸಾವನ್ನಪ್ಪಿದ್ದಾನೆ. ವಿಚಾರ ತಿಳಿದು ಆಸ್ಪತ್ರೆಗೆ ಪೊಲೀಸ್ ವರಿಷ್ಠಾಧಿಕಾರಿ ಡಾ.ಕವಿತಾ ಭೇಟಿ ನೀಡಿ ಬಳಿಕ ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದರು.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಆರೋಪಿ ಪತ್ತೆಗೆ ಬಲೆಬೀಸಿದ್ದಾರೆ. ಮೃತ್ತದೇಹವನ್ನು ಚಾ.ನಗರ ಸಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದ್ದು ನಾಳೆ ಮರಣೋತ್ತರ ಪರೀಕ್ಷೆ ನಡೆಯಲಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…