ಚಾಮರಾಜನಗರ

ಗಾಂಜಾ ಮಾರಾಟ : ಓರ್ವ ಬಂಧನ

ಹನೂರು : ಹನೂರು ಪಟ್ಟಣ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸುವಲ್ಲಿ ಹನೂರು ಪೊಲೀಸರು ಯಶಸ್ವಿಯಾಗಿದ್ದಾರೆ.

ಹನೂರು ತಾಲೂಕಿನ ಹಾವಿನ ಮೂಲೆ (ಯಜಮಾನ್ ದೊಡ್ಡಿ) ಗ್ರಾಮದ ಶಿವಣ್ಣ (34 )ಬಂಧಿತ ಆರೋಪಿಯಾಗಿದ್ದಾನೆ.

ಘಟನೆ ವಿವರ
ಹನೂರು ತಾಲೂಕಿನ ಪಿ.ಜಿ ಪಾಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾವಿನ ಮೂಲೆ ಗ್ರಾಮದ ನಿವಾಸಿ ಶಿವಣ್ಣ ಎಂಬಾತ ಹನೂರು ಪಟ್ಟಣ ವ್ಯಾಪ್ತಿಯ ಲೊಕ್ಕನಹಳ್ಳಿ ಮಾರ್ಗದ ಸೇತುವೆ ಬಳಿ ಅಕ್ರಮ ಗಾಂಜಾ ಶೇಖರಣೆ ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಕೊಳ್ಳೇಗಾಲ ಡಿಎಸ್ಪಿ ಧರ್ಮೇಂದ್ರ ಹನೂರು ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಆನಂದ್ ಮೂರ್ತಿ ಮಾರ್ಗದರ್ಶನದಲ್ಲಿ ಅಪರಾಧ ವಿಭಾಗದ ಸಬ್ ಇನ್ಸ್ಪೆಕ್ಟರ್ ರವಿ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ ವಿಚಾರಣೆ ನಡೆಸಿದಾಗ ಆತನ ಬಳಿ 260 ಗ್ರಾಂ ಗಾಂಜಾ ಇರುವುದು ಬೆಳಕಿಗೆ ಬಂದಿದೆ. ನಂತರ ಆತನನ್ನು ಬಂಧಿಸಿ ಪ್ರಕರಣ ದಾಖಲು ಮಾಡಲಾಗಿದೆ.

ದಾಳಿಯಲ್ಲಿ ಮುಖ್ಯಪೇದೆ ಚಂದ್ರು ಡಿವೈಎಸ್ಪಿ ಅಪರಾಧ ಪತ್ತೆದಾಳದ ಮುಖ್ಯಪೇದೆ ರವಿಕುಮಾರ್, ಪೇದೆಗಳಾದ ಬಿಳಿ ಗೌಡ ಸುನೀಲ್ ಪಾಲ್ಗೊಂಡಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ

ಬೆಂಗಳೂರು : ಬೆಂಗಳೂರಿನಲ್ಲಿ ಅನೇಕ ಭಾಷೆ, ಧರ್ಮಗಳಿದ್ದು, ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕನ್ನಡ ಸಂಸ್ಕೃತಿ ಇಲಾಖೆ…

2 hours ago

ಸ್ಟಾರ್ ನಟಿಯ ಜೊತೆ ಧನುಷ್ ಕಲ್ಯಾಣ? ; ವೈರಲ್ ಆಗ್ತಿದೆ ಮದುವೆಯ ಗುಸುಗುಸು!

ಚೆನ್ನೈ : ಕಾಲಿವುಡ್‌ ನಟ ಧನುಷ್ ಸ್ಟಾರ್ ನಟಿಯನ್ನು ಕೈ ಹಿಡಿಯಲು ಸಿದ್ದರಾಗಿದ್ದಾರೆ. ಹೌದು ಹೀಗೊಂದು ಸುದ್ದಿ ಸಿನಿಮಾ ಇಂಡಸ್ಟ್ರಿಯಲ್ಲಿ…

3 hours ago

ಮುಂಬೈ ಮುನ್ಸಿಪಲ್‌ ಚುನಾವಣೆಯಲ್ಲೂ ವೋಟ್‌ ಚೋರಿ : ರಾಹುಲ್‌ಗಾಂಧಿ ಗಂಭೀರ ಆರೋಪ

ಮುಂಬೈ : ವೋಟಿ ಚೋರಿ ವಿರುದ್ಧ ಸಮರ ಸಾರಿರುವ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ…

3 hours ago

ಸ್ಟಾರ್ಟ್‌ಅಪ್‌ನಿಂದ ಆರ್ಥಿಕ ಪರಿವರ್ತನೆಗೆ ನಾಂದಿ : ಎಚ್‌.ಡಿ.ಕೆ ಶ್ಲಾಘನೆ

ಬೆಂಗಳೂರು : ಕಳೆದ 10 ವರ್ಷಗಳಲ್ಲಿ ಸ್ಟಾರ್ಟ್‌ಅಪ್ ಇಂಡಿಯಾ ಭಾರತದಲ್ಲಿ ನವಯುಗದ ನಾವೀನ್ಯತೆ, ಉದ್ಯಮಶೀಲತೆ ಮತ್ತು ಆರ್ಥಿಕ ಪರಿವರ್ತನೆಗೆ ನಾಂದಿ…

4 hours ago

ದಿಲ್ಲಿ ಚಲೋ : ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರೈತ ಧ್ವನಿ

ಫೆ.7ರಿಂದ ರೈತ ಜಾಗೃತಿ ಯಾತ್ರೆ ಆರಂಭ ಮಾ.19ರಂದು ದಿಲ್ಲಿಯ ರಾಮ್‌ಲೀಲಾ ಮೈದಾನದಲ್ಲಿ ಬೃಹತ್‌ ಸಮಾವೇಶ ಮೈಸೂರು : ಕೃಷಿ ಉತ್ಪನ್ನಗಳಿಗೆ…

4 hours ago

ವಿಜ್ಞಾನಕ್ಕೆ ಕಲೆ,ಸಂಸ್ಕೃತಿ ಸಮ್ಮಿಳಿತವಾಗಬೇಕು : ನಾದಾನಂದನಾಥ ಸ್ವಾಮೀಜಿ

ಮೈಸೂರು : ಎಲ್ಲವನ್ನೂ ಸಾಧ್ಯವಾಗಿಸಿದ ವಿಜ್ಞಾನಕ್ಕೆ ಕಲೆ, ಸಂಸ್ಕೃತಿ ಕೂಡದಿದ್ದರೆ ಮೃಗೀಯ ವರ್ತನೆ ಬರುತ್ತದೆ. ಅಧುನೀಕರಣ ನಮ್ಮ ಮೂಲ ಪರಂಪರೆಯನ್ನು…

5 hours ago