arrest
ಹನೂರು : ಹನೂರು ಪಟ್ಟಣ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸುವಲ್ಲಿ ಹನೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಹನೂರು ತಾಲೂಕಿನ ಹಾವಿನ ಮೂಲೆ (ಯಜಮಾನ್ ದೊಡ್ಡಿ) ಗ್ರಾಮದ ಶಿವಣ್ಣ (34 )ಬಂಧಿತ ಆರೋಪಿಯಾಗಿದ್ದಾನೆ.
ಘಟನೆ ವಿವರ
ಹನೂರು ತಾಲೂಕಿನ ಪಿ.ಜಿ ಪಾಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾವಿನ ಮೂಲೆ ಗ್ರಾಮದ ನಿವಾಸಿ ಶಿವಣ್ಣ ಎಂಬಾತ ಹನೂರು ಪಟ್ಟಣ ವ್ಯಾಪ್ತಿಯ ಲೊಕ್ಕನಹಳ್ಳಿ ಮಾರ್ಗದ ಸೇತುವೆ ಬಳಿ ಅಕ್ರಮ ಗಾಂಜಾ ಶೇಖರಣೆ ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಕೊಳ್ಳೇಗಾಲ ಡಿಎಸ್ಪಿ ಧರ್ಮೇಂದ್ರ ಹನೂರು ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಆನಂದ್ ಮೂರ್ತಿ ಮಾರ್ಗದರ್ಶನದಲ್ಲಿ ಅಪರಾಧ ವಿಭಾಗದ ಸಬ್ ಇನ್ಸ್ಪೆಕ್ಟರ್ ರವಿ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ ವಿಚಾರಣೆ ನಡೆಸಿದಾಗ ಆತನ ಬಳಿ 260 ಗ್ರಾಂ ಗಾಂಜಾ ಇರುವುದು ಬೆಳಕಿಗೆ ಬಂದಿದೆ. ನಂತರ ಆತನನ್ನು ಬಂಧಿಸಿ ಪ್ರಕರಣ ದಾಖಲು ಮಾಡಲಾಗಿದೆ.
ದಾಳಿಯಲ್ಲಿ ಮುಖ್ಯಪೇದೆ ಚಂದ್ರು ಡಿವೈಎಸ್ಪಿ ಅಪರಾಧ ಪತ್ತೆದಾಳದ ಮುಖ್ಯಪೇದೆ ರವಿಕುಮಾರ್, ಪೇದೆಗಳಾದ ಬಿಳಿ ಗೌಡ ಸುನೀಲ್ ಪಾಲ್ಗೊಂಡಿದ್ದರು.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…