ಚಾಮರಾಜನಗರ

ಇಪ್ಪತ್ತಕ್ಕೂ ಹೆಚ್ಚು ಕೋತಿಗಳನ್ನು ಹೊಡೆದು ವಿಷವಿತ್ತು ಕೊಂದಿರುವ ಬಗ್ಗೆ ವೈದ್ಯಕೀಯ ವರದಿಯಲ್ಲಿ ಉಲ್ಲೇಖ

ಆರೋಪಿಗಳ ವಿರುದ್ದ ಕ್ರಮಕ್ಕೆ ಪ್ರಾಣಿಪ್ರೀಯರ ಒತ್ತಾಯ

ಗುಂಡ್ಲುಪೇಟೆ: ತಾಲ್ಲೂಕಿನ ಕಂದೇಗಾಲ- ಕೊಡಸೋಗೆ ರಸ್ತೆಯಲ್ಲಿ ಸುಮಾರು ಇಪ್ಪತ್ತಕ್ಕು ಹೆಚ್ಚು ಕೋತಿಗಳನ್ನು ಕೊಂದು ಗೋಣಿ ಚೀಲದಲ್ಲಿ ತಂದು ಆರೊಪಿಗಳು ರಸ್ತೆಯ ಬದಿ ಎಸೆದು ಹೋಗಿದ್ದರು.

ಈಗ ಕೋತಿಗಳ ಮರಣೋತ್ತರ ಪರೀಕ್ಷೆಯ ನಂತರ ಆರೋಪಿಗಳು ಕೋತಿಗಳಿಗೆ ವಿಷ ನೀಡಿ ಅರೆಪ್ರಜ್ಞೆಯಲ್ಲಿದ್ದ ಕೋತಿಗಳಿಗೆ ಮಾರಣಾಂತಿಕವಾಗಿ ಹೊಡೆದು ಕೊಂದಿದ್ದಾರೆ ಎಂಬ ಬಗ್ಗೆಯೂ ಮಾಹಿತಿ ಹೊರಬಿದ್ದಿದ್ದು ಇಂತಹ ಕೃತ್ಯ ಎಸಗಿದ ಆರೋಪಿಗಳನ್ನು ಕಂಡು ಹಿಡಿದ ಶಿಕ್ಷಿಸುವಂತೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಕೇಳಿಬರುತ್ತಿದೆ.

ಹಿಂದುಗಳು ಪೂಜಿಸುವ ಆಂಜನೇಯನ  ಪ್ರತಿರೂಪವಾದ ವಾನರ ಸೈನ್ಯವನ್ನಯ ಹೊಡೆದು ವಿಷಹಾಕಿ ಕೊಂದಿರುವ ಪಾಪಿಗಳ ಮೇಲೆ ಅರಣ್ಯ ಇಲಾಖೆ ಕ್ರಮ‌ಕೈಗೊಳ್ಳಬೇಕು ಸ್ಕಂದಗಿರಿ ಪಾರ್ವತಾಂಭೆ ಸನ್ನಿದಿಯಲ್ಲಿ ಇಂತಹ ಘಟನೆ ನಡೆದಿದ್ದು ತನಿಖೆ ಚುರುಕುಗೊಳಿಸಿ ಆರೋಪಿಗಳನ್ನು ಬಂಧಿಸುವಂತೆ ಪ್ರಾಣಿ ಪ್ರೀಯರು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಗ್ರಾಮಸ್ಥ ಆನಂದ್ ಹೇಳುವ ಪ್ರಕಾರ ರಾತ್ರಿ ಕೊತಿಗಳು ಬಿದ್ದ ಜಾಗದಲ್ಲಿ ಮೊಬೈಲ್ ನೆಟ್ ವರ್ಕ್ ಚಲನವಲನ ಕಂಡು ಹಿಡಿದರೆ ಆರೋಗಳನ್ನು ಕಂಡುಹಿಡಿಯಬಹುದು ಒಟ್ಟಾರೆ ಇಪ್ಪತ್ತು ಹೆಚ್ಚು ಸತ್ತಿರುವ ಕೋತಿಗಳ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಆರೋಪಿಗಳನ್ನು ಕಂಡುಹಿಡಿಯಲೇ ಬೇಕು.

20 ಕ್ಕೂ ಹೆಚ್ಚು ಕೋತಿಗಳನ್ನು ವಿಷಹಾಕಿ ಹಾಗೂ ಹೊಡೆದು ಕೊಂದಿರುವ ಬಗ್ಗೆ ವೈದ್ಯಕೀಯ ವರದಿಯಲ್ಲಿ ಧೃಡಪಟ್ಟಿದ್ದು ಆರೊಪಿಗಳು ಯಾರು ಎಂದು ತಿಳಿದು ಬಂದಿಲ್ಲ, ಅಲ್ಲಿ ಯಾವುದೇ ಸಿಸಿ ಕ್ಯಾಮರಾಗಳ ರಸ್ತೆಗೆ ಪೊಕಸ್ ಹಾಗದೆ ಇರುವುದರಿಂದ ಆರೊಪಿಗಳ ಬಗ್ಗೆ ಮಾಹಿತಿ ಇಲ್ಲ ಆರೋಪಿಗಳನ್ನು ಕಂಡು ಹಿಡಿಯುವ ಪ್ರಯತ್ನ ಮಾಡುತಿದ್ದೇವೆ ಎಂದು ಗುಂಡ್ಲುಪೇಟೆ ಅರಣ್ಯ ವಲಯ ಅಧಿಕಾರಿ  ಶಿವಕುಮಾರ್ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

6 mins ago

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…

31 mins ago

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

57 mins ago

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

1 hour ago

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…

2 hours ago

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

2 hours ago