Medical report mentions killing more than twenty monkeys with poison
ಆರೋಪಿಗಳ ವಿರುದ್ದ ಕ್ರಮಕ್ಕೆ ಪ್ರಾಣಿಪ್ರೀಯರ ಒತ್ತಾಯ
ಗುಂಡ್ಲುಪೇಟೆ: ತಾಲ್ಲೂಕಿನ ಕಂದೇಗಾಲ- ಕೊಡಸೋಗೆ ರಸ್ತೆಯಲ್ಲಿ ಸುಮಾರು ಇಪ್ಪತ್ತಕ್ಕು ಹೆಚ್ಚು ಕೋತಿಗಳನ್ನು ಕೊಂದು ಗೋಣಿ ಚೀಲದಲ್ಲಿ ತಂದು ಆರೊಪಿಗಳು ರಸ್ತೆಯ ಬದಿ ಎಸೆದು ಹೋಗಿದ್ದರು.
ಈಗ ಕೋತಿಗಳ ಮರಣೋತ್ತರ ಪರೀಕ್ಷೆಯ ನಂತರ ಆರೋಪಿಗಳು ಕೋತಿಗಳಿಗೆ ವಿಷ ನೀಡಿ ಅರೆಪ್ರಜ್ಞೆಯಲ್ಲಿದ್ದ ಕೋತಿಗಳಿಗೆ ಮಾರಣಾಂತಿಕವಾಗಿ ಹೊಡೆದು ಕೊಂದಿದ್ದಾರೆ ಎಂಬ ಬಗ್ಗೆಯೂ ಮಾಹಿತಿ ಹೊರಬಿದ್ದಿದ್ದು ಇಂತಹ ಕೃತ್ಯ ಎಸಗಿದ ಆರೋಪಿಗಳನ್ನು ಕಂಡು ಹಿಡಿದ ಶಿಕ್ಷಿಸುವಂತೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಕೇಳಿಬರುತ್ತಿದೆ.
ಹಿಂದುಗಳು ಪೂಜಿಸುವ ಆಂಜನೇಯನ ಪ್ರತಿರೂಪವಾದ ವಾನರ ಸೈನ್ಯವನ್ನಯ ಹೊಡೆದು ವಿಷಹಾಕಿ ಕೊಂದಿರುವ ಪಾಪಿಗಳ ಮೇಲೆ ಅರಣ್ಯ ಇಲಾಖೆ ಕ್ರಮಕೈಗೊಳ್ಳಬೇಕು ಸ್ಕಂದಗಿರಿ ಪಾರ್ವತಾಂಭೆ ಸನ್ನಿದಿಯಲ್ಲಿ ಇಂತಹ ಘಟನೆ ನಡೆದಿದ್ದು ತನಿಖೆ ಚುರುಕುಗೊಳಿಸಿ ಆರೋಪಿಗಳನ್ನು ಬಂಧಿಸುವಂತೆ ಪ್ರಾಣಿ ಪ್ರೀಯರು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಗ್ರಾಮಸ್ಥ ಆನಂದ್ ಹೇಳುವ ಪ್ರಕಾರ ರಾತ್ರಿ ಕೊತಿಗಳು ಬಿದ್ದ ಜಾಗದಲ್ಲಿ ಮೊಬೈಲ್ ನೆಟ್ ವರ್ಕ್ ಚಲನವಲನ ಕಂಡು ಹಿಡಿದರೆ ಆರೋಗಳನ್ನು ಕಂಡುಹಿಡಿಯಬಹುದು ಒಟ್ಟಾರೆ ಇಪ್ಪತ್ತು ಹೆಚ್ಚು ಸತ್ತಿರುವ ಕೋತಿಗಳ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಆರೋಪಿಗಳನ್ನು ಕಂಡುಹಿಡಿಯಲೇ ಬೇಕು.
20 ಕ್ಕೂ ಹೆಚ್ಚು ಕೋತಿಗಳನ್ನು ವಿಷಹಾಕಿ ಹಾಗೂ ಹೊಡೆದು ಕೊಂದಿರುವ ಬಗ್ಗೆ ವೈದ್ಯಕೀಯ ವರದಿಯಲ್ಲಿ ಧೃಡಪಟ್ಟಿದ್ದು ಆರೊಪಿಗಳು ಯಾರು ಎಂದು ತಿಳಿದು ಬಂದಿಲ್ಲ, ಅಲ್ಲಿ ಯಾವುದೇ ಸಿಸಿ ಕ್ಯಾಮರಾಗಳ ರಸ್ತೆಗೆ ಪೊಕಸ್ ಹಾಗದೆ ಇರುವುದರಿಂದ ಆರೊಪಿಗಳ ಬಗ್ಗೆ ಮಾಹಿತಿ ಇಲ್ಲ ಆರೋಪಿಗಳನ್ನು ಕಂಡು ಹಿಡಿಯುವ ಪ್ರಯತ್ನ ಮಾಡುತಿದ್ದೇವೆ ಎಂದು ಗುಂಡ್ಲುಪೇಟೆ ಅರಣ್ಯ ವಲಯ ಅಧಿಕಾರಿ ಶಿವಕುಮಾರ್ ತಿಳಿಸಿದರು.
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…
ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…