Medical report mentions killing more than twenty monkeys with poison
ಆರೋಪಿಗಳ ವಿರುದ್ದ ಕ್ರಮಕ್ಕೆ ಪ್ರಾಣಿಪ್ರೀಯರ ಒತ್ತಾಯ
ಗುಂಡ್ಲುಪೇಟೆ: ತಾಲ್ಲೂಕಿನ ಕಂದೇಗಾಲ- ಕೊಡಸೋಗೆ ರಸ್ತೆಯಲ್ಲಿ ಸುಮಾರು ಇಪ್ಪತ್ತಕ್ಕು ಹೆಚ್ಚು ಕೋತಿಗಳನ್ನು ಕೊಂದು ಗೋಣಿ ಚೀಲದಲ್ಲಿ ತಂದು ಆರೊಪಿಗಳು ರಸ್ತೆಯ ಬದಿ ಎಸೆದು ಹೋಗಿದ್ದರು.
ಈಗ ಕೋತಿಗಳ ಮರಣೋತ್ತರ ಪರೀಕ್ಷೆಯ ನಂತರ ಆರೋಪಿಗಳು ಕೋತಿಗಳಿಗೆ ವಿಷ ನೀಡಿ ಅರೆಪ್ರಜ್ಞೆಯಲ್ಲಿದ್ದ ಕೋತಿಗಳಿಗೆ ಮಾರಣಾಂತಿಕವಾಗಿ ಹೊಡೆದು ಕೊಂದಿದ್ದಾರೆ ಎಂಬ ಬಗ್ಗೆಯೂ ಮಾಹಿತಿ ಹೊರಬಿದ್ದಿದ್ದು ಇಂತಹ ಕೃತ್ಯ ಎಸಗಿದ ಆರೋಪಿಗಳನ್ನು ಕಂಡು ಹಿಡಿದ ಶಿಕ್ಷಿಸುವಂತೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಕೇಳಿಬರುತ್ತಿದೆ.
ಹಿಂದುಗಳು ಪೂಜಿಸುವ ಆಂಜನೇಯನ ಪ್ರತಿರೂಪವಾದ ವಾನರ ಸೈನ್ಯವನ್ನಯ ಹೊಡೆದು ವಿಷಹಾಕಿ ಕೊಂದಿರುವ ಪಾಪಿಗಳ ಮೇಲೆ ಅರಣ್ಯ ಇಲಾಖೆ ಕ್ರಮಕೈಗೊಳ್ಳಬೇಕು ಸ್ಕಂದಗಿರಿ ಪಾರ್ವತಾಂಭೆ ಸನ್ನಿದಿಯಲ್ಲಿ ಇಂತಹ ಘಟನೆ ನಡೆದಿದ್ದು ತನಿಖೆ ಚುರುಕುಗೊಳಿಸಿ ಆರೋಪಿಗಳನ್ನು ಬಂಧಿಸುವಂತೆ ಪ್ರಾಣಿ ಪ್ರೀಯರು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಗ್ರಾಮಸ್ಥ ಆನಂದ್ ಹೇಳುವ ಪ್ರಕಾರ ರಾತ್ರಿ ಕೊತಿಗಳು ಬಿದ್ದ ಜಾಗದಲ್ಲಿ ಮೊಬೈಲ್ ನೆಟ್ ವರ್ಕ್ ಚಲನವಲನ ಕಂಡು ಹಿಡಿದರೆ ಆರೋಗಳನ್ನು ಕಂಡುಹಿಡಿಯಬಹುದು ಒಟ್ಟಾರೆ ಇಪ್ಪತ್ತು ಹೆಚ್ಚು ಸತ್ತಿರುವ ಕೋತಿಗಳ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಆರೋಪಿಗಳನ್ನು ಕಂಡುಹಿಡಿಯಲೇ ಬೇಕು.
20 ಕ್ಕೂ ಹೆಚ್ಚು ಕೋತಿಗಳನ್ನು ವಿಷಹಾಕಿ ಹಾಗೂ ಹೊಡೆದು ಕೊಂದಿರುವ ಬಗ್ಗೆ ವೈದ್ಯಕೀಯ ವರದಿಯಲ್ಲಿ ಧೃಡಪಟ್ಟಿದ್ದು ಆರೊಪಿಗಳು ಯಾರು ಎಂದು ತಿಳಿದು ಬಂದಿಲ್ಲ, ಅಲ್ಲಿ ಯಾವುದೇ ಸಿಸಿ ಕ್ಯಾಮರಾಗಳ ರಸ್ತೆಗೆ ಪೊಕಸ್ ಹಾಗದೆ ಇರುವುದರಿಂದ ಆರೊಪಿಗಳ ಬಗ್ಗೆ ಮಾಹಿತಿ ಇಲ್ಲ ಆರೋಪಿಗಳನ್ನು ಕಂಡು ಹಿಡಿಯುವ ಪ್ರಯತ್ನ ಮಾಡುತಿದ್ದೇವೆ ಎಂದು ಗುಂಡ್ಲುಪೇಟೆ ಅರಣ್ಯ ವಲಯ ಅಧಿಕಾರಿ ಶಿವಕುಮಾರ್ ತಿಳಿಸಿದರು.
ಮಂಡ್ಯ: ಎಲ್ಲರೂ ಸಾಮರಸ್ಯದಿಂದ ಮತ್ತು ಸಮಾನತೆಯಿಂದ ಬದುಕಬೇಕು ಮತ್ತು ನಾವೆಲ್ಲರೂ ಒಂದೇ ಎಂಬ ಭಾವನೆಯಿಂದ ಬಾಳಬೇಕು. ಇದರಿಂದ ಮಾದರಿ ಸಮಾಜ…
ಮೈಸೂರು: ರಾಜ್ಯದ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ, ವಿತ್ತೀಯ ಹೊಣೆಗಾರಿಕೆ ಕಾಯ್ದೆಯ ಮಾನದಂಡಗಳ ಮಿತಿಯಲ್ಲೇ…
ಮೈಸೂರು: ಹೈಕಮಾಂಡ್ ಇರು ಎಂದರೆ ಇರುತ್ತೇನೆ. ಮುಂದುವರೆಯಿರಿ ಎಂದರೇ ಮುಂದುವರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ. ಸಿಎಂ ಬದಲಾವಣೆ ವಿಚಾರಕ್ಕೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಸ್ವಾತಂತ್ರ ಬಂದು 78 ವರ್ಷ ಪೂರ್ಣಗೊಂಡಿದ್ದರು ವಿದ್ಯುತ್ ಬೆಳಕು ನೋಡದೆ…
ಮಂಡ್ಯ: ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಈ ಕುರಿತು…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷದ ನಡುವೆಯೇ ಭಾರತದಲ್ಲಿ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. 14.2 ಕಿಲೋ ಗ್ರಾಂ ತೂಕದ ಗೃಹ ಬಳಕೆಯ…