ಚಾಮರಾಜನಗರ

ಇಪ್ಪತ್ತಕ್ಕೂ ಹೆಚ್ಚು ಕೋತಿಗಳನ್ನು ಹೊಡೆದು ವಿಷವಿತ್ತು ಕೊಂದಿರುವ ಬಗ್ಗೆ ವೈದ್ಯಕೀಯ ವರದಿಯಲ್ಲಿ ಉಲ್ಲೇಖ

ಆರೋಪಿಗಳ ವಿರುದ್ದ ಕ್ರಮಕ್ಕೆ ಪ್ರಾಣಿಪ್ರೀಯರ ಒತ್ತಾಯ

ಗುಂಡ್ಲುಪೇಟೆ: ತಾಲ್ಲೂಕಿನ ಕಂದೇಗಾಲ- ಕೊಡಸೋಗೆ ರಸ್ತೆಯಲ್ಲಿ ಸುಮಾರು ಇಪ್ಪತ್ತಕ್ಕು ಹೆಚ್ಚು ಕೋತಿಗಳನ್ನು ಕೊಂದು ಗೋಣಿ ಚೀಲದಲ್ಲಿ ತಂದು ಆರೊಪಿಗಳು ರಸ್ತೆಯ ಬದಿ ಎಸೆದು ಹೋಗಿದ್ದರು.

ಈಗ ಕೋತಿಗಳ ಮರಣೋತ್ತರ ಪರೀಕ್ಷೆಯ ನಂತರ ಆರೋಪಿಗಳು ಕೋತಿಗಳಿಗೆ ವಿಷ ನೀಡಿ ಅರೆಪ್ರಜ್ಞೆಯಲ್ಲಿದ್ದ ಕೋತಿಗಳಿಗೆ ಮಾರಣಾಂತಿಕವಾಗಿ ಹೊಡೆದು ಕೊಂದಿದ್ದಾರೆ ಎಂಬ ಬಗ್ಗೆಯೂ ಮಾಹಿತಿ ಹೊರಬಿದ್ದಿದ್ದು ಇಂತಹ ಕೃತ್ಯ ಎಸಗಿದ ಆರೋಪಿಗಳನ್ನು ಕಂಡು ಹಿಡಿದ ಶಿಕ್ಷಿಸುವಂತೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಕೇಳಿಬರುತ್ತಿದೆ.

ಹಿಂದುಗಳು ಪೂಜಿಸುವ ಆಂಜನೇಯನ  ಪ್ರತಿರೂಪವಾದ ವಾನರ ಸೈನ್ಯವನ್ನಯ ಹೊಡೆದು ವಿಷಹಾಕಿ ಕೊಂದಿರುವ ಪಾಪಿಗಳ ಮೇಲೆ ಅರಣ್ಯ ಇಲಾಖೆ ಕ್ರಮ‌ಕೈಗೊಳ್ಳಬೇಕು ಸ್ಕಂದಗಿರಿ ಪಾರ್ವತಾಂಭೆ ಸನ್ನಿದಿಯಲ್ಲಿ ಇಂತಹ ಘಟನೆ ನಡೆದಿದ್ದು ತನಿಖೆ ಚುರುಕುಗೊಳಿಸಿ ಆರೋಪಿಗಳನ್ನು ಬಂಧಿಸುವಂತೆ ಪ್ರಾಣಿ ಪ್ರೀಯರು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಗ್ರಾಮಸ್ಥ ಆನಂದ್ ಹೇಳುವ ಪ್ರಕಾರ ರಾತ್ರಿ ಕೊತಿಗಳು ಬಿದ್ದ ಜಾಗದಲ್ಲಿ ಮೊಬೈಲ್ ನೆಟ್ ವರ್ಕ್ ಚಲನವಲನ ಕಂಡು ಹಿಡಿದರೆ ಆರೋಗಳನ್ನು ಕಂಡುಹಿಡಿಯಬಹುದು ಒಟ್ಟಾರೆ ಇಪ್ಪತ್ತು ಹೆಚ್ಚು ಸತ್ತಿರುವ ಕೋತಿಗಳ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಆರೋಪಿಗಳನ್ನು ಕಂಡುಹಿಡಿಯಲೇ ಬೇಕು.

20 ಕ್ಕೂ ಹೆಚ್ಚು ಕೋತಿಗಳನ್ನು ವಿಷಹಾಕಿ ಹಾಗೂ ಹೊಡೆದು ಕೊಂದಿರುವ ಬಗ್ಗೆ ವೈದ್ಯಕೀಯ ವರದಿಯಲ್ಲಿ ಧೃಡಪಟ್ಟಿದ್ದು ಆರೊಪಿಗಳು ಯಾರು ಎಂದು ತಿಳಿದು ಬಂದಿಲ್ಲ, ಅಲ್ಲಿ ಯಾವುದೇ ಸಿಸಿ ಕ್ಯಾಮರಾಗಳ ರಸ್ತೆಗೆ ಪೊಕಸ್ ಹಾಗದೆ ಇರುವುದರಿಂದ ಆರೊಪಿಗಳ ಬಗ್ಗೆ ಮಾಹಿತಿ ಇಲ್ಲ ಆರೋಪಿಗಳನ್ನು ಕಂಡು ಹಿಡಿಯುವ ಪ್ರಯತ್ನ ಮಾಡುತಿದ್ದೇವೆ ಎಂದು ಗುಂಡ್ಲುಪೇಟೆ ಅರಣ್ಯ ವಲಯ ಅಧಿಕಾರಿ  ಶಿವಕುಮಾರ್ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

7 hours ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

8 hours ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

9 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

9 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

9 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

10 hours ago