ಚಾಮರಾಜನಗರ

ಇಪ್ಪತ್ತಕ್ಕೂ ಹೆಚ್ಚು ಕೋತಿಗಳನ್ನು ಹೊಡೆದು ವಿಷವಿತ್ತು ಕೊಂದಿರುವ ಬಗ್ಗೆ ವೈದ್ಯಕೀಯ ವರದಿಯಲ್ಲಿ ಉಲ್ಲೇಖ

ಆರೋಪಿಗಳ ವಿರುದ್ದ ಕ್ರಮಕ್ಕೆ ಪ್ರಾಣಿಪ್ರೀಯರ ಒತ್ತಾಯ

ಗುಂಡ್ಲುಪೇಟೆ: ತಾಲ್ಲೂಕಿನ ಕಂದೇಗಾಲ- ಕೊಡಸೋಗೆ ರಸ್ತೆಯಲ್ಲಿ ಸುಮಾರು ಇಪ್ಪತ್ತಕ್ಕು ಹೆಚ್ಚು ಕೋತಿಗಳನ್ನು ಕೊಂದು ಗೋಣಿ ಚೀಲದಲ್ಲಿ ತಂದು ಆರೊಪಿಗಳು ರಸ್ತೆಯ ಬದಿ ಎಸೆದು ಹೋಗಿದ್ದರು.

ಈಗ ಕೋತಿಗಳ ಮರಣೋತ್ತರ ಪರೀಕ್ಷೆಯ ನಂತರ ಆರೋಪಿಗಳು ಕೋತಿಗಳಿಗೆ ವಿಷ ನೀಡಿ ಅರೆಪ್ರಜ್ಞೆಯಲ್ಲಿದ್ದ ಕೋತಿಗಳಿಗೆ ಮಾರಣಾಂತಿಕವಾಗಿ ಹೊಡೆದು ಕೊಂದಿದ್ದಾರೆ ಎಂಬ ಬಗ್ಗೆಯೂ ಮಾಹಿತಿ ಹೊರಬಿದ್ದಿದ್ದು ಇಂತಹ ಕೃತ್ಯ ಎಸಗಿದ ಆರೋಪಿಗಳನ್ನು ಕಂಡು ಹಿಡಿದ ಶಿಕ್ಷಿಸುವಂತೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಕೇಳಿಬರುತ್ತಿದೆ.

ಹಿಂದುಗಳು ಪೂಜಿಸುವ ಆಂಜನೇಯನ  ಪ್ರತಿರೂಪವಾದ ವಾನರ ಸೈನ್ಯವನ್ನಯ ಹೊಡೆದು ವಿಷಹಾಕಿ ಕೊಂದಿರುವ ಪಾಪಿಗಳ ಮೇಲೆ ಅರಣ್ಯ ಇಲಾಖೆ ಕ್ರಮ‌ಕೈಗೊಳ್ಳಬೇಕು ಸ್ಕಂದಗಿರಿ ಪಾರ್ವತಾಂಭೆ ಸನ್ನಿದಿಯಲ್ಲಿ ಇಂತಹ ಘಟನೆ ನಡೆದಿದ್ದು ತನಿಖೆ ಚುರುಕುಗೊಳಿಸಿ ಆರೋಪಿಗಳನ್ನು ಬಂಧಿಸುವಂತೆ ಪ್ರಾಣಿ ಪ್ರೀಯರು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಗ್ರಾಮಸ್ಥ ಆನಂದ್ ಹೇಳುವ ಪ್ರಕಾರ ರಾತ್ರಿ ಕೊತಿಗಳು ಬಿದ್ದ ಜಾಗದಲ್ಲಿ ಮೊಬೈಲ್ ನೆಟ್ ವರ್ಕ್ ಚಲನವಲನ ಕಂಡು ಹಿಡಿದರೆ ಆರೋಗಳನ್ನು ಕಂಡುಹಿಡಿಯಬಹುದು ಒಟ್ಟಾರೆ ಇಪ್ಪತ್ತು ಹೆಚ್ಚು ಸತ್ತಿರುವ ಕೋತಿಗಳ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಆರೋಪಿಗಳನ್ನು ಕಂಡುಹಿಡಿಯಲೇ ಬೇಕು.

20 ಕ್ಕೂ ಹೆಚ್ಚು ಕೋತಿಗಳನ್ನು ವಿಷಹಾಕಿ ಹಾಗೂ ಹೊಡೆದು ಕೊಂದಿರುವ ಬಗ್ಗೆ ವೈದ್ಯಕೀಯ ವರದಿಯಲ್ಲಿ ಧೃಡಪಟ್ಟಿದ್ದು ಆರೊಪಿಗಳು ಯಾರು ಎಂದು ತಿಳಿದು ಬಂದಿಲ್ಲ, ಅಲ್ಲಿ ಯಾವುದೇ ಸಿಸಿ ಕ್ಯಾಮರಾಗಳ ರಸ್ತೆಗೆ ಪೊಕಸ್ ಹಾಗದೆ ಇರುವುದರಿಂದ ಆರೊಪಿಗಳ ಬಗ್ಗೆ ಮಾಹಿತಿ ಇಲ್ಲ ಆರೋಪಿಗಳನ್ನು ಕಂಡು ಹಿಡಿಯುವ ಪ್ರಯತ್ನ ಮಾಡುತಿದ್ದೇವೆ ಎಂದು ಗುಂಡ್ಲುಪೇಟೆ ಅರಣ್ಯ ವಲಯ ಅಧಿಕಾರಿ  ಶಿವಕುಮಾರ್ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

4 mins ago

ಮಹದೇಶ್ವರ ಬೆಟ್ಟದಲ್ಲಿ ಬಸ್‌ ಪಲ್ಟಿ : ಹಲವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ…

9 mins ago

ಹುಣಸೂರು| ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ: ಮೂವರಿಗೆ ಗಾಯ

ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…

5 hours ago

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡು ಹಂದಿ ರಕ್ಷಣೆ

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…

6 hours ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಏರಿಕೆ

ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.1ರಿಂದ ಜಾರಿಗೆ ಬರುವಂತೆ 993ರೂ ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ 991…

6 hours ago

ಪತ್ನಿ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…

8 hours ago