ಚಾಮರಾಜನಗರ

12 ರಂದು 4 ತಾಲ್ಲೂಕುಗಳಲ್ಲಿ ಮೆಗಾ ಲೋಕ ಅದಾಲತ್

ಸುದ್ದಿಗೋಷ್ಠಿಯಲ್ಲಿ ಪ್ರಾಧಿಕಾರ ಅಧ್ಯಕ್ಷರಾದ ಬಿ.ಎಸ್.ಭಾರತಿ ವಿವರಣೆ

ಚಾಮರಾಜನಗರ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನ.೧೨ ರಂದು ಜಿಲ್ಲೆಯಲ್ಲಿ ಮೆಗಾ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಬಿ.ಎಸ್. ಭಾರತಿ ಅವರು ತಿಳಿಸಿದರು.

ಅಂದು ಬೆಳಗ್ಗೆ ೧೦.೩೦ ಗಂಟೆಗೆ ಚಾಮರಾಜನಗರ, ಗುಂಡ್ಲುಪೇಟೆ, ಯಳಂದೂರು ಮತ್ತು ಕೊಳ್ಳೇಗಾಲದ ನ್ಯಾಯಾಲಯಗಳಲ್ಲಿ ಬೈಠಕ್‌ಗಳನ್ನು ಏರ್ಪಡಿಸಲಾಗುವುದು. ಅಲ್ಲದೆ ಸಂಧಾನಕಾರರನ್ನು ನೇಮಿಸಿ ಅದಾಲತ್ ನಡೆಸಲಾಗುತ್ತದೆ ಎಂದು ಮಂಗಳವಾರ ಮಧ್ಯಾಹ್ನ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಈ ಹಿಂದೆ ನಡೆದ ಲೋಕ ಅದಾಲತ್‌ನಲ್ಲಿ ವಕೀಲರ, ಕಕ್ಷಿದಾರರ, ಪೊಲೀಸರ, ವಿಮಾ ಕಂಪನಿಗಳ ಮತ್ತು ವಿವಿಧ ಇಲಾಖೆಗಳ ಸಹಕಾರದೊಂದಿಗೆ ಯಶಸ್ವಿಯಾಗಿ ನಡೆದು ೯೨೯೩ ಪ್ರಕರಣಗಳನ್ನು ಇತ್ಯರ್ಥ ಮಾಡಲಾಯಿತು. ಅ.೧೨ ರಂದು ನಡೆಯುವ ಅದಾಲತ್‌ನಲ್ಲಿ ೧೦ ’ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದರು.

ಅದಾಲತ್‌ಗೆ ಸಂಬAಧಪಟ್ಟ ವಕೀಲರು, ಕಕ್ಷಿದಾರರು ತಮ್ಮ ಸಹಕಾರವನ್ನು ನೀಡಿದ್ದಲ್ಲಿ ಸಂಧಾನಕಾರರು ನೀಡುವ ಸಲಹೆಗಳನ್ನು ಆಲಿಸಿ, ಪರಸ್ಪರ ಒಪ್ಪಿಗೆಯಾದಲ್ಲಿ ಪ್ರಕರಣವನ್ನು ಲೋಕ ಅದಾಲತ್‌ನಲ್ಲಿ ಬಗೆಹರಿಸಿಕೊಳ್ಳಬಹುದು. ಇದರಿಂದ ಕಕ್ಷಿದಾರರ ಸಮಯ ಮತ್ತು ಹಣ ಉಳಿತಾಯವಾಗುತ್ತದೆ ಎಂದು ತಿಳಿಸಿದರು.

ಅದಾಲತ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಪ್ರಕರಣಗಳನ್ನು ಹೊರತುಪಡಿ ಸಿವಿಲ್ ಪ್ರಕರಣಗಳಾದ ದಾಂಪತ್ಯ ಹಕ್ಕುಗಳ ಪುನರ್ ಸ್ಥಾಪನೆ, ಜೀವನಾಂಶ, ಮಕ್ಕಳ ಸಂರಕ್ಷಣೆ, ವಾಹನ ಅಪಘಾತ, ಕೈಗಾರಿಕಾ ವಿವಾದ ಕಾಯ್ದೆ ಸಂಬAಧ ಹಾಗೂ ಇತರೆ ಎಲ್ಲಾ ಸ್ವರೂಪದ ಪ್ರಕರಣಗಳು ಮತ್ತು ರಾಜಿ ಯೋಗ್ಯ ಕ್ರಿಮಿನಲ್ ಪ್ರಕರಣಗಳನ್ನು ಪರಿಹರಿಸಿಕೊಳ್ಳಬಹುದು ಎಂದು ವಿವರಿಸಿದರು.

ಚೆಕ್ ಅಮಾನ್ಯ, ಕಾರ್ಮಿಕ ಕಾಯ್ದೆ ಸಂಬAಧದ ಕೇಸ್, ವಿದ್ಯುತ್ ಕಳವು, ಅಕ್ರಮ ಕಲ್ಲು, ಮರಳು ಸಾಗಾಣಿಕೆಗೆ ಸಂಬAಧಪಟ್ಟ ಅಪರಾಧಗಳು, ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಸಹ ರಾಜೀ ಮಾಡಿಕೊಳ್ಳಬಹುದು ಎಂದು ತಿಳಿಸಿದರು.

andolana

Recent Posts

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

13 mins ago

ಓದುಗರ ಪತ್ರ: ಡಿಕೆಶಿ ಸೂಚನೆ ಸ್ವಾಗತಾರ್ಹ

ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ…

3 hours ago

ಓದುಗರ ಪತ್ರ: ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೇ ದಾಖಲಿಸಲಿ

ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ…

3 hours ago

ಓದುಗರ ಪತ್ರ: ಮಲತಾಯಿ ಧೋರಣೆ ಏಕೆ?

ರಾಜ್ಯದಲ್ಲಿ ಕ್ರಿಕೆಟ್ ಗೀಳಿನ ಅಬ್ಬರದಲ್ಲಿ ಫುಟ್ಬಾಲ್ ಕ್ರೀಡೆ ಧೂಳೀಪಟ ವಾಗುತ್ತಿರುವುದು ಅತ್ಯಂತ ಆಘಾತಕಾರಿ. ಶೇ. ೯೦ ಕ್ಕೂ ಹೆಚ್ಚು ಫುಟ್ಬಾಲ್…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಇಂದು ಜಗತ್ತಿಗೆ ಗಾಂಧಿ ಚಿಂತನೆ ಹೆಚ್ಚು ಪ್ರಸ್ತುತ:  ಗಾಂಧಿ ಎಂದರೆ ಕೇವಲ ಇತಿಹಾಸದ ಪುಟಗಳಲ್ಲಿ ಉಳಿದಿರುವ ಸ್ವಾತಂತ್ರ್ಯ ಹೋರಾಟಗಾರ ಮಾತ್ರ ಅಲ್ಲ. ಸದಾ…

4 hours ago

ಗಾಂಧಿ ಅನುಸಂಧಾನದ ವೈರುಧ್ಯಗಳು

ಡಾ.ರಹಮತ್ ತರೀಕೆರೆ ಕರ್ನಾಟಕದಲ್ಲಿ ಗಾಂಧಿಗೆ ಸಂಬಂಧಿಸಿದಂತೆ ಪರಸ್ಪರ ವಿರುದ್ಧವೆನಿಸುವ ವಿದ್ಯಮಾನಗಳು ಜರುಗುತ್ತಿವೆ. ಉದಾ ಹರಣೆಗೆ- ೧. ಗಾಂಧಿ ಹಂತಕ ಗೋಡ್ಸೆ ಮತ್ತು…

4 hours ago