ಚಾಮರಾಜನಗರ

12 ರಂದು 4 ತಾಲ್ಲೂಕುಗಳಲ್ಲಿ ಮೆಗಾ ಲೋಕ ಅದಾಲತ್

ಸುದ್ದಿಗೋಷ್ಠಿಯಲ್ಲಿ ಪ್ರಾಧಿಕಾರ ಅಧ್ಯಕ್ಷರಾದ ಬಿ.ಎಸ್.ಭಾರತಿ ವಿವರಣೆ

ಚಾಮರಾಜನಗರ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನ.೧೨ ರಂದು ಜಿಲ್ಲೆಯಲ್ಲಿ ಮೆಗಾ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಬಿ.ಎಸ್. ಭಾರತಿ ಅವರು ತಿಳಿಸಿದರು.

ಅಂದು ಬೆಳಗ್ಗೆ ೧೦.೩೦ ಗಂಟೆಗೆ ಚಾಮರಾಜನಗರ, ಗುಂಡ್ಲುಪೇಟೆ, ಯಳಂದೂರು ಮತ್ತು ಕೊಳ್ಳೇಗಾಲದ ನ್ಯಾಯಾಲಯಗಳಲ್ಲಿ ಬೈಠಕ್‌ಗಳನ್ನು ಏರ್ಪಡಿಸಲಾಗುವುದು. ಅಲ್ಲದೆ ಸಂಧಾನಕಾರರನ್ನು ನೇಮಿಸಿ ಅದಾಲತ್ ನಡೆಸಲಾಗುತ್ತದೆ ಎಂದು ಮಂಗಳವಾರ ಮಧ್ಯಾಹ್ನ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಈ ಹಿಂದೆ ನಡೆದ ಲೋಕ ಅದಾಲತ್‌ನಲ್ಲಿ ವಕೀಲರ, ಕಕ್ಷಿದಾರರ, ಪೊಲೀಸರ, ವಿಮಾ ಕಂಪನಿಗಳ ಮತ್ತು ವಿವಿಧ ಇಲಾಖೆಗಳ ಸಹಕಾರದೊಂದಿಗೆ ಯಶಸ್ವಿಯಾಗಿ ನಡೆದು ೯೨೯೩ ಪ್ರಕರಣಗಳನ್ನು ಇತ್ಯರ್ಥ ಮಾಡಲಾಯಿತು. ಅ.೧೨ ರಂದು ನಡೆಯುವ ಅದಾಲತ್‌ನಲ್ಲಿ ೧೦ ’ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದರು.

ಅದಾಲತ್‌ಗೆ ಸಂಬAಧಪಟ್ಟ ವಕೀಲರು, ಕಕ್ಷಿದಾರರು ತಮ್ಮ ಸಹಕಾರವನ್ನು ನೀಡಿದ್ದಲ್ಲಿ ಸಂಧಾನಕಾರರು ನೀಡುವ ಸಲಹೆಗಳನ್ನು ಆಲಿಸಿ, ಪರಸ್ಪರ ಒಪ್ಪಿಗೆಯಾದಲ್ಲಿ ಪ್ರಕರಣವನ್ನು ಲೋಕ ಅದಾಲತ್‌ನಲ್ಲಿ ಬಗೆಹರಿಸಿಕೊಳ್ಳಬಹುದು. ಇದರಿಂದ ಕಕ್ಷಿದಾರರ ಸಮಯ ಮತ್ತು ಹಣ ಉಳಿತಾಯವಾಗುತ್ತದೆ ಎಂದು ತಿಳಿಸಿದರು.

ಅದಾಲತ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಪ್ರಕರಣಗಳನ್ನು ಹೊರತುಪಡಿ ಸಿವಿಲ್ ಪ್ರಕರಣಗಳಾದ ದಾಂಪತ್ಯ ಹಕ್ಕುಗಳ ಪುನರ್ ಸ್ಥಾಪನೆ, ಜೀವನಾಂಶ, ಮಕ್ಕಳ ಸಂರಕ್ಷಣೆ, ವಾಹನ ಅಪಘಾತ, ಕೈಗಾರಿಕಾ ವಿವಾದ ಕಾಯ್ದೆ ಸಂಬAಧ ಹಾಗೂ ಇತರೆ ಎಲ್ಲಾ ಸ್ವರೂಪದ ಪ್ರಕರಣಗಳು ಮತ್ತು ರಾಜಿ ಯೋಗ್ಯ ಕ್ರಿಮಿನಲ್ ಪ್ರಕರಣಗಳನ್ನು ಪರಿಹರಿಸಿಕೊಳ್ಳಬಹುದು ಎಂದು ವಿವರಿಸಿದರು.

ಚೆಕ್ ಅಮಾನ್ಯ, ಕಾರ್ಮಿಕ ಕಾಯ್ದೆ ಸಂಬAಧದ ಕೇಸ್, ವಿದ್ಯುತ್ ಕಳವು, ಅಕ್ರಮ ಕಲ್ಲು, ಮರಳು ಸಾಗಾಣಿಕೆಗೆ ಸಂಬAಧಪಟ್ಟ ಅಪರಾಧಗಳು, ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಸಹ ರಾಜೀ ಮಾಡಿಕೊಳ್ಳಬಹುದು ಎಂದು ತಿಳಿಸಿದರು.

andolana

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

5 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

7 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

16 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

16 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

16 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

16 hours ago