ಚಾಮರಾಜನಗರ

ಕಗ್ಗಲಿಗುಂದಿ, ಜೀರಿಗೆಗದ್ದೆ ಗ್ರಾಮಗಳಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ್‌ ಭೇಟಿ, ಪರಿಶೀಲನೆ

ಹನೂರು: ತಾಲೂಕಿನ ಬುಡಕಟ್ಟು ಜನಾಂಗದವರು ವಾಸಿಸುವ ಕಗ್ಗಲಿಗುಂದಿ ಹಾಗೂ ಜೀರಿಗೆಗದ್ದೆ ಗ್ರಾಮಗಳಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚಿಕ್ಕಮಾಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಗ್ಗಲಿಕುಂದಿ ಗ್ರಾಮಕ್ಕೆ ಭೇಟಿ ನೀಡಿದ ಅವರು ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳು ಸಮರ್ಪಕವಾಗಿ ಸಿಗುತ್ತಿದೆಯೇ, ಪಿಂಚಣಿ ಸರಿಯಾಗಿ ಬರುತ್ತಿದೆಯೇ ಹಾಗೂ ಯಾವುದಾದರೂ ಕಾನೂನು ವ್ಯಾಜ್ಯಗಳು ನಡೆಯುತ್ತಿದೆ ಎಂದು ಗ್ರಾಮಸ್ಥರನ್ನು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ನಿವಾಸಿಗಳು ಗ್ರಾಮಕ್ಕೆ ಸಮರ್ಪಕ ಮೂಲಭೂತ ಸೌಲಭ್ಯಗಳು ಸಿಗುತ್ತಿದೆ, ಗ್ರಾಮದ ಇಬ್ಬರು ವಯೋವೃದ್ಧರಿಗೆ ಪಿಂಚಣಿ ಬರುತ್ತಿಲ್ಲ ಎಂದು ತಿಳಿಸಿದ್ದಾರೆ.

ಸ್ಥಳದಲ್ಲಿಯೇ ಇದ್ದ ಕಂದಾಯ ನಿರೀಕ್ಷಕರಾದ ಮಹದೇವಸ್ವಾಮಿ ಮಾತನಾಡಿ ಎನ್‌ಸಿಪಿ ಮ್ಯಾಪಿಂಗ್ ಆಗದೆ ಇರುವುದರಿಂದ ಸಮಸ್ಯೆಯಾಗಿದೆ, ಇನ್ನೆರಡು ದಿನಗಳಲ್ಲಿ ಸಮಸ್ಯೆ ಬಗೆಹರಿಯಲಿದೆ ಎಂದು ತಿಳಿಸಿದರು.

ಇನ್ನು ಕಗ್ಗಲಿಗುಂದಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ಇಲ್ಲದೆ ಇರುವುದರಿಂದ ದೊಡ್ಡ ಮಾಲಾಪುರ ಗ್ರಾಮಕ್ಕೆ ತೆರಳಬೇಕಾಗಿದೆ ಇದರಿಂದ ಮಕ್ಕಳು ಸರಿಯಾಗಿ ಅಂಗನವಾಡಿಗೆ ತೆರಳುತ್ತಿಲ್ಲ ಇದರಿಂದ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ನಮ್ಮ ಗ್ರಾಮದಲ್ಲಿ ಅಂಗನವಾಡಿ ನಿರ್ಮಾಣ ಮಾಡಿಕೊಡಬೇಕು ಎಂದು ಮನವಿ ಮಾಡಿದರು. ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಶೀಘ್ರವೇ ಅಂಗನವಾಡಿ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳುವುದಾಗಿ ಈಶ್ವರ್ ತಿಳಿಸಿದರು.

ಸಮೀಪದ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಅವರು ಶಾಲೆಯಲ್ಲಿನ ಮೂಲಭೂತ ಸೌಲಭ್ಯಗಳ ಬಗ್ಗೆ ಶಿಕ್ಷಕರಿಂದ ಮಾಹಿತಿ ಪಡೆದುಕೊಂಡರು. ಈ ವೇಳೆ ಶಿಕ್ಷಕರಾದ ಲೋಕೇಶ್ ರವರು ಶಾಲೆಗೆ ಎಲ್ಲ ರೀತಿಯ ವ್ಯವಸ್ಥೆ ಇದೆ . ಆದರೆ ಕಾಂಪೌಂಡ್ ವ್ಯವಸ್ಥೆ ಇಲ್ಲ, ಕಳೆದ ಒಂದು ವರ್ಷಗಳ ಹಿಂದೆ ಚಿರತೆ ದಾಳಿಗೆ ವಿದ್ಯಾರ್ಥಿನಿ ಮೃತಪಟ್ಟಿದ್ದ ವಿಚಾರವನ್ನು ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು ಶಾಲೆಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಸಂಬಂಧಪಟ್ಟವರ ಜೊತೆ ಚರ್ಚೆ ನಡೆಸಿ ವರದಿ ನೀಡಲಾಗುವುದು ಎಂದರು.

ಜೀರಿಗೆ ಗದ್ದೆ ಬುಡಕಟ್ಟು ಆಶ್ರಮ ಶಾಲೆಗೆ ಭೇಟಿ ನೀಡಿದ ನ್ಯಾಯಾಧೀಶರು ಮಕ್ಕಳಿಗೆ ಸಮರ್ಪಕವಾಗಿ ಸರ್ಕಾರದ ಮೆನುವಿನಂತೆ ಊಟ ತಿಂಡಿ ಪೂರೈಕೆ ಮಾಡಲಾಗುತ್ತಿದೆ ಎಂದು ಪ್ರಶ್ನೆ ಮಾಡಿದ್ದಾರೆ ಈ ವೇಳೆ ವಿದ್ಯಾರ್ಥಿಗಳು ಸರಿಯಾಗಿ ಊಟ ತಿಂಡಿ ನೀಡುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಇದೇ ವೇಳೆ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟಕ್ಕೆ ತಯಾರಿಸಿದ್ದ ಅನ್ನ ಬೇಳೆ ಸಾಂಬಾರ್ ಊಟ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಹಾವಿನ ಮೂಲೆ ಹಾಗೂ ಜೀರಿಗೆ ಗದ್ದೆ ಗ್ರಾಮದ ಎರಡು ಅಂಗನವಾಡಿ ಕೇಂದ್ರಗಳಿಗೆ ಒಬ್ಬರೇ ಶಿಕ್ಷಕರು ಇರುವುದರಿಂದ ತೊಂದರೆ ಆಗುತ್ತಿದೆ. ಆದ್ದರಿಂದ ಎರಡು ಅಂಗನವಾಡಿ ಕೇಂದ್ರಗಳಿಗೆ ಪ್ರತ್ಯೇಕ ಶಿಕ್ಷಕರನ್ನು ನೇಮಕ ಮಾಡುವಂತೆ ಗ್ರಾಮಸ್ಥರು ಮನವಿ ಮಾಡಿದರು. ಈ ಸಂಬಂಧ ತಾಲೂಕು ಪರಿಶಿಷ್ಟ ಪಂಗಡ ಕಲ್ಯಾಣ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಸೂಕ್ತ ಕ್ರಮ ವಹಿಸುವುದಾಗಿ ಭರವಸೆ ನೀಡಿದ್ದಾರೆ.

ಈ ವೇಳೆ ತಹಸಿಲ್ದಾರ್ ವೈ ಕೆ ಗುರುಪ್ರಸಾದ್, ಲೊಕ್ಕನಹಳ್ಳಿ ಹೋಬಳಿ ಕಂದಾಯ ನಿರೀಕ್ಷಕ ಮಹದೇವಸ್ವಾಮಿ, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ರಾಜೇಶ್‌ ಸೇರಿದಂತೆ ಇನ್ನಿತರರು ಹಾಜರಿದ್ದರು.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

3 hours ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

3 hours ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

4 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

4 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

4 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

4 hours ago