ಚಾಮರಾಜನಗರ

ಕಗ್ಗಲಿಗುಂದಿ, ಜೀರಿಗೆಗದ್ದೆ ಗ್ರಾಮಗಳಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ್‌ ಭೇಟಿ, ಪರಿಶೀಲನೆ

ಹನೂರು: ತಾಲೂಕಿನ ಬುಡಕಟ್ಟು ಜನಾಂಗದವರು ವಾಸಿಸುವ ಕಗ್ಗಲಿಗುಂದಿ ಹಾಗೂ ಜೀರಿಗೆಗದ್ದೆ ಗ್ರಾಮಗಳಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚಿಕ್ಕಮಾಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಗ್ಗಲಿಕುಂದಿ ಗ್ರಾಮಕ್ಕೆ ಭೇಟಿ ನೀಡಿದ ಅವರು ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳು ಸಮರ್ಪಕವಾಗಿ ಸಿಗುತ್ತಿದೆಯೇ, ಪಿಂಚಣಿ ಸರಿಯಾಗಿ ಬರುತ್ತಿದೆಯೇ ಹಾಗೂ ಯಾವುದಾದರೂ ಕಾನೂನು ವ್ಯಾಜ್ಯಗಳು ನಡೆಯುತ್ತಿದೆ ಎಂದು ಗ್ರಾಮಸ್ಥರನ್ನು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ನಿವಾಸಿಗಳು ಗ್ರಾಮಕ್ಕೆ ಸಮರ್ಪಕ ಮೂಲಭೂತ ಸೌಲಭ್ಯಗಳು ಸಿಗುತ್ತಿದೆ, ಗ್ರಾಮದ ಇಬ್ಬರು ವಯೋವೃದ್ಧರಿಗೆ ಪಿಂಚಣಿ ಬರುತ್ತಿಲ್ಲ ಎಂದು ತಿಳಿಸಿದ್ದಾರೆ.

ಸ್ಥಳದಲ್ಲಿಯೇ ಇದ್ದ ಕಂದಾಯ ನಿರೀಕ್ಷಕರಾದ ಮಹದೇವಸ್ವಾಮಿ ಮಾತನಾಡಿ ಎನ್‌ಸಿಪಿ ಮ್ಯಾಪಿಂಗ್ ಆಗದೆ ಇರುವುದರಿಂದ ಸಮಸ್ಯೆಯಾಗಿದೆ, ಇನ್ನೆರಡು ದಿನಗಳಲ್ಲಿ ಸಮಸ್ಯೆ ಬಗೆಹರಿಯಲಿದೆ ಎಂದು ತಿಳಿಸಿದರು.

ಇನ್ನು ಕಗ್ಗಲಿಗುಂದಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ಇಲ್ಲದೆ ಇರುವುದರಿಂದ ದೊಡ್ಡ ಮಾಲಾಪುರ ಗ್ರಾಮಕ್ಕೆ ತೆರಳಬೇಕಾಗಿದೆ ಇದರಿಂದ ಮಕ್ಕಳು ಸರಿಯಾಗಿ ಅಂಗನವಾಡಿಗೆ ತೆರಳುತ್ತಿಲ್ಲ ಇದರಿಂದ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ನಮ್ಮ ಗ್ರಾಮದಲ್ಲಿ ಅಂಗನವಾಡಿ ನಿರ್ಮಾಣ ಮಾಡಿಕೊಡಬೇಕು ಎಂದು ಮನವಿ ಮಾಡಿದರು. ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಶೀಘ್ರವೇ ಅಂಗನವಾಡಿ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳುವುದಾಗಿ ಈಶ್ವರ್ ತಿಳಿಸಿದರು.

ಸಮೀಪದ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಅವರು ಶಾಲೆಯಲ್ಲಿನ ಮೂಲಭೂತ ಸೌಲಭ್ಯಗಳ ಬಗ್ಗೆ ಶಿಕ್ಷಕರಿಂದ ಮಾಹಿತಿ ಪಡೆದುಕೊಂಡರು. ಈ ವೇಳೆ ಶಿಕ್ಷಕರಾದ ಲೋಕೇಶ್ ರವರು ಶಾಲೆಗೆ ಎಲ್ಲ ರೀತಿಯ ವ್ಯವಸ್ಥೆ ಇದೆ . ಆದರೆ ಕಾಂಪೌಂಡ್ ವ್ಯವಸ್ಥೆ ಇಲ್ಲ, ಕಳೆದ ಒಂದು ವರ್ಷಗಳ ಹಿಂದೆ ಚಿರತೆ ದಾಳಿಗೆ ವಿದ್ಯಾರ್ಥಿನಿ ಮೃತಪಟ್ಟಿದ್ದ ವಿಚಾರವನ್ನು ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು ಶಾಲೆಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಸಂಬಂಧಪಟ್ಟವರ ಜೊತೆ ಚರ್ಚೆ ನಡೆಸಿ ವರದಿ ನೀಡಲಾಗುವುದು ಎಂದರು.

ಜೀರಿಗೆ ಗದ್ದೆ ಬುಡಕಟ್ಟು ಆಶ್ರಮ ಶಾಲೆಗೆ ಭೇಟಿ ನೀಡಿದ ನ್ಯಾಯಾಧೀಶರು ಮಕ್ಕಳಿಗೆ ಸಮರ್ಪಕವಾಗಿ ಸರ್ಕಾರದ ಮೆನುವಿನಂತೆ ಊಟ ತಿಂಡಿ ಪೂರೈಕೆ ಮಾಡಲಾಗುತ್ತಿದೆ ಎಂದು ಪ್ರಶ್ನೆ ಮಾಡಿದ್ದಾರೆ ಈ ವೇಳೆ ವಿದ್ಯಾರ್ಥಿಗಳು ಸರಿಯಾಗಿ ಊಟ ತಿಂಡಿ ನೀಡುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಇದೇ ವೇಳೆ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟಕ್ಕೆ ತಯಾರಿಸಿದ್ದ ಅನ್ನ ಬೇಳೆ ಸಾಂಬಾರ್ ಊಟ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಹಾವಿನ ಮೂಲೆ ಹಾಗೂ ಜೀರಿಗೆ ಗದ್ದೆ ಗ್ರಾಮದ ಎರಡು ಅಂಗನವಾಡಿ ಕೇಂದ್ರಗಳಿಗೆ ಒಬ್ಬರೇ ಶಿಕ್ಷಕರು ಇರುವುದರಿಂದ ತೊಂದರೆ ಆಗುತ್ತಿದೆ. ಆದ್ದರಿಂದ ಎರಡು ಅಂಗನವಾಡಿ ಕೇಂದ್ರಗಳಿಗೆ ಪ್ರತ್ಯೇಕ ಶಿಕ್ಷಕರನ್ನು ನೇಮಕ ಮಾಡುವಂತೆ ಗ್ರಾಮಸ್ಥರು ಮನವಿ ಮಾಡಿದರು. ಈ ಸಂಬಂಧ ತಾಲೂಕು ಪರಿಶಿಷ್ಟ ಪಂಗಡ ಕಲ್ಯಾಣ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಸೂಕ್ತ ಕ್ರಮ ವಹಿಸುವುದಾಗಿ ಭರವಸೆ ನೀಡಿದ್ದಾರೆ.

ಈ ವೇಳೆ ತಹಸಿಲ್ದಾರ್ ವೈ ಕೆ ಗುರುಪ್ರಸಾದ್, ಲೊಕ್ಕನಹಳ್ಳಿ ಹೋಬಳಿ ಕಂದಾಯ ನಿರೀಕ್ಷಕ ಮಹದೇವಸ್ವಾಮಿ, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ರಾಜೇಶ್‌ ಸೇರಿದಂತೆ ಇನ್ನಿತರರು ಹಾಜರಿದ್ದರು.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

3 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

6 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

10 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

12 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

13 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

14 hours ago