ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಅಂತರ್ಜಲ ಮಟ್ಟ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮಳೆಯ ನೀರು ಸಂಗ್ರಹಿಸಲು ನಿರ್ಮಾಣ ಮಾಡಲಾಗಿದ್ದ ಚೆಕ್ ಡ್ಯಾಂ ತಡೆಗೋಡೆಯನ್ನು ಒಡೆದು ಹಾಕಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರಜ್ಞಾವಂತ ನಾಗರಿಕರು ಮನವಿ ಮಾಡಿದ್ದಾರೆ.
ಹನೂರು ತಾಲ್ಲೂಕಿನ ಮಣಗಳ್ಳಿ ಗ್ರಾಮದ ಹಾಸ್ಟೆಲ್ ಹಿಂಭಾಗ ಹಳ್ಳದಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಹಲವು ವರ್ಷಗಳ ಹಿಂದೆ ಚೆಕ್ ಡ್ಯಾಮ್ ನಿರ್ಮಾಣ ಮಾಡಲಾಗಿತ್ತು.
ಆದರೆ ಹಲವು ವರ್ಷಗಳಿಂದ ಸಮರ್ಪಕ ಮಳೆಯಾಗದ ಪರಿಣಾಮ ಚೆಕ್ ಡ್ಯಾಂ ಖಾಲಿಯಾಗಿತ್ತು. ಕಳೆದ ತಿಂಗಳು ಶಾಸಕ ಎಂ.ಆರ್.ಮಂಜುನಾಥ್ ಅವರು ಕಾವೇರಿ ನದಿ ಮೂಲದಿಂದ ರಾಮನ ಗುಡ್ಡ ಜಲಾಶಯಕ್ಕೆ ನೀರು ತುಂಬಿಸಿದ ನಂತರ ಹಳ್ಳದ ಮೂಲಕ ನೀರು ಹರಿಸಿದ್ದರು.
ಈ ನೀರು ಚಿಂಚಳ್ಳಿ ಮಾರ್ಗವಾಗಿ ಮಣಗಳ್ಳಿ ಗ್ರಾಮದ ಡ್ಯಾಂಗಳೆಲ್ಲ ಭರ್ತಿಯಾಗಿ ನೀರು ಮುಂದೆ ಹರಿದು ಹೋಗಿ ಹಾಸ್ಟೆಲ್ ಸಮೀಪದ ಚೆಕ್ ಡ್ಯಾಂ ಬರ್ತಿಯಾಗುತ್ತಿತ್ತು. ಆದರೆ ಇದನ್ನು ಸಹಿಸದ ತೋಮಿಯರ್ ಪಾಳ್ಯ ಹಾಗೂ ಸಮೀಪದ ರೈತ ಮುಖಂಡರುಗಳು ಚೆಕ್ ಡ್ಯಾಂ ಧ್ವಂಸಗೊಳಿಸಿದ್ದಾರೆ.
ಸರ್ಕಾರದ ಆಸ್ತಿ ನಾಶ ಮಾಡಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಚೆಕ್ ಡ್ಯಾಂ ಮರು ನಿರ್ಮಾಣ ಮಾಡುವಂತೆ ಮನವಿ ಮಾಡಿದ್ದಾರೆ.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…