ಚಾಮರಾಜನಗರ

ಚಾಮರಾಜನಗರ: ಟೊಮೊಟೋ ಫಸಲನ್ನು ಕಿತ್ತು ಬಿಸಾಡಿದ ದುಷ್ಕರ್ಮಿಗಳು

ಚಾಮರಾಜನಗರ: ತಾಲೂಕಿನ ಸೊತ್ತನಹುಂಡಿ( ಗಣಿಗನೂರು ಸರ್ವೇ ನಂ) ಗ್ರಾಮದಲ್ಲಿ ದ್ವೇಷದ ಕಾರಣಕ್ಕೋ ಮತ್ತೀನ್ಯಾವ ಕಾರಣಕ್ಕೋ ರೈತನ ಟೊಮೆಟೋ ಫಸಲ ಅನ್ನು ನಾಶ ಮಾಡಿರುವ ಘಟನೆ ನಡೆದಿದ್ದು, ರೈತ ಕಂಗಲಾಗಿದ್ದಾರೆ.

ಚಾಮರಾಜನಗರ ತಾಲ್ಲೂಕಿನ ಸೊತ್ತನಹುಂಡಿ ಗ್ರಾಮದಲ್ಲಿ ಓರ್ವ ರೈತ ಕಷ್ಟಪಟ್ಟು ಬೆಳೆದಿದ್ದ ಟೊಮೊಟೋ ಹಣ್ಣನ್ನು ಇಂದು(ಫೆಬ್ರವರಿ.22) ಯಾರೋ ದುಷ್ಕರ್ಮಿಗಳು ಕಿತ್ತು ಬಿಸಾಡಿದ್ದಾರೆ.

ಈ ದುರ್ಘಟನೆ ರೈತ ಮಹೇಶ್ ಎಂಬವರಿಗೆ ಸೇರಿದ್ದ ಜಮೀನಿನಲ್ಲಿ ನಡೆದಿದ್ದು, ಮುಕ್ಕಾಲು ಎಕರೆ ಫಸಲು ನಾಶವಾಗಿದೆ. ಟೊಮೊಟೋ ಫಸಲು ಇನ್ನೊಂದು ತಿಂಗಳಲ್ಲಿ ಕಟಾವಿನ ಹಂತಕ್ಕೆ ಬರುತ್ತಿತ್ತು. ಆದರೆ ಇದನ್ನು ಸಹಿಸದ ಕಿಡಿಗೇಡಿಗಳು ಟೊಮೆಟೊ ಗಿಡಗಳನ್ನು ಕಿತ್ತು ಹಾಕಿದ್ದಾರೆ.

ಇನ್ನು ತಿಂಗಳಲ್ಲಿ ಬಂಪರ್ ಆದಾಯ ನಿರೀಕ್ಷೆ ಮಾಡಿದ್ದ ಮಹೇಶ್ ಅವರಿಗೆ ಅಂದಾಜು 3 ಲಕ್ಷ ರೂ. ರಷ್ಟು ನಷ್ಟ ಉಂಟಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅರ್ಚನ ಎಸ್‌ ಎಸ್

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

7 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

9 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

9 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

9 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

10 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

10 hours ago