ಚಾಮರಾಜನಗರ

ಚಾಮರಾಜನಗರ: ಟೊಮೊಟೋ ಫಸಲನ್ನು ಕಿತ್ತು ಬಿಸಾಡಿದ ದುಷ್ಕರ್ಮಿಗಳು

ಚಾಮರಾಜನಗರ: ತಾಲೂಕಿನ ಸೊತ್ತನಹುಂಡಿ( ಗಣಿಗನೂರು ಸರ್ವೇ ನಂ) ಗ್ರಾಮದಲ್ಲಿ ದ್ವೇಷದ ಕಾರಣಕ್ಕೋ ಮತ್ತೀನ್ಯಾವ ಕಾರಣಕ್ಕೋ ರೈತನ ಟೊಮೆಟೋ ಫಸಲ ಅನ್ನು ನಾಶ ಮಾಡಿರುವ ಘಟನೆ ನಡೆದಿದ್ದು, ರೈತ ಕಂಗಲಾಗಿದ್ದಾರೆ.

ಚಾಮರಾಜನಗರ ತಾಲ್ಲೂಕಿನ ಸೊತ್ತನಹುಂಡಿ ಗ್ರಾಮದಲ್ಲಿ ಓರ್ವ ರೈತ ಕಷ್ಟಪಟ್ಟು ಬೆಳೆದಿದ್ದ ಟೊಮೊಟೋ ಹಣ್ಣನ್ನು ಇಂದು(ಫೆಬ್ರವರಿ.22) ಯಾರೋ ದುಷ್ಕರ್ಮಿಗಳು ಕಿತ್ತು ಬಿಸಾಡಿದ್ದಾರೆ.

ಈ ದುರ್ಘಟನೆ ರೈತ ಮಹೇಶ್ ಎಂಬವರಿಗೆ ಸೇರಿದ್ದ ಜಮೀನಿನಲ್ಲಿ ನಡೆದಿದ್ದು, ಮುಕ್ಕಾಲು ಎಕರೆ ಫಸಲು ನಾಶವಾಗಿದೆ. ಟೊಮೊಟೋ ಫಸಲು ಇನ್ನೊಂದು ತಿಂಗಳಲ್ಲಿ ಕಟಾವಿನ ಹಂತಕ್ಕೆ ಬರುತ್ತಿತ್ತು. ಆದರೆ ಇದನ್ನು ಸಹಿಸದ ಕಿಡಿಗೇಡಿಗಳು ಟೊಮೆಟೊ ಗಿಡಗಳನ್ನು ಕಿತ್ತು ಹಾಕಿದ್ದಾರೆ.

ಇನ್ನು ತಿಂಗಳಲ್ಲಿ ಬಂಪರ್ ಆದಾಯ ನಿರೀಕ್ಷೆ ಮಾಡಿದ್ದ ಮಹೇಶ್ ಅವರಿಗೆ ಅಂದಾಜು 3 ಲಕ್ಷ ರೂ. ರಷ್ಟು ನಷ್ಟ ಉಂಟಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅರ್ಚನ ಎಸ್‌ ಎಸ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

5 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

7 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

16 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

16 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

16 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

16 hours ago