ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ ನೀರು ತುಂಬಿಸಿದ್ದು, ಜನ ಜಾನುವಾರುಗಳಿಗೆ ತುಂಬಾ ಅನುಕೂಲವಾಗಲಿದೆ ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿಂಗಾನಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂದುಬಾಳು ಗ್ರಾಮದ ಕೆರೆಗೆ ನೀರು ತುಂಬಿಸಿರುವ ಹಿನ್ನೆಲೆಯಲ್ಲಿ ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಆರ್ ಮಂಜುನಾಥ್ ಅವರು ಇಂದು ಪೂಜೆ ಸಲ್ಲಿಸಿ ಗಾಗಿನ ಅರ್ಪಿಸಿ ಮಾತನಾಡಿದರು.
ಬಹುತೇಕ ಈ ಪ್ರದೇಶವು ಬರ ಪೀಡಿತವಾಗಿದ್ದು, ಸರಗೂರಿನ ಕಾವೇರಿ ನದಿ ಮೂಲದಿಂದ ಬೂದುಬಾಳು ಕೆರೆಗೆ ನೀರಾವರಿ ಇಲಾಖೆ ವತಿಯಿಂದ ಪೈಪ್ ಲೈನ್ ಮೂಲಕ ಸಂಪರ್ಕ ಕಲ್ಪಿಸಿ, ಕೆರೆ ತುಂಬಿಸುವ ಕಾರ್ಯಕ್ಕೆ ಚಾಲನೆ ನೀಡಿದ್ದೆವು. ಅನಂತರ ಕೆರೆಯು ಸಂಪೂರ್ಣ ತುಂಬಿದ್ದು, ಇಂದು ಬೂದುಬಾಳು ಜಾತ್ರೆ ನಡೆಯುತ್ತಿರುವ ಹಿನ್ನೆಲೆ, ಬಾಗಿನ ಅರ್ಪಿಸಿದ್ದು ತುಂಬಾ ಖುಷಿಯಾಗಿದೆ. ಇದೀಗ ಕೆರೆ ತುಂಬಿರುವುದರಿಂದ ಸ್ಥಳೀಯವಾಗಿ ಅಂತರ್ಜಲ ಮಟ್ಟ ಹೆಚ್ಚಾಗಲಿದ್ದು ಜನ ಜಾನುವಾರುಗಳಿಗೂ ಸಹ ತುಂಬಾ ಅನುಕೂಲವಾಗಲಿದೆ ಎಂದರು.
ಬರಗಾಲದಿಂದ ತತ್ತರಿಸುತ್ತಿದ್ದ ಈ ಭಾಗದ ರೈತರು, ಜನರೆಲ್ಲಾ ಕೆರೆಗೆ ನೀರು ತುಂಬಿದ ಹಿನ್ನೆಲೆಯಲ್ಲಿ ಸಂತೋಷಗೊಂಡು ಶಾಸಕರನ್ನು ಅಭಿನಂದಿಸಿದರು.
ಈ ವೇಳೆ ಆದಿತ್ಯಸ್ವಾಮಿಯರ್, ಜೆಡಿಎಸ್ ಮುಖಂಡರಾದ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಜೆ ಶ್ರೀನಿವಾಸ್, ಶ್ರೀನಿವಾಸ್, ಡಿ ರಾಜಪ್ಪ, ಯುವ ಮುಖಂಡ ಕೃಷ್ಣ, ಸಿಂಗಾನಲ್ಲೂರು ರಾಜಣ್ಣ, ಮಂಜೇಶ್ ಗೌಡ, ವಿಜಯ್ ಕುಮಾರ್, ವೆಂಕಟೇಶ್, ಗೋಪಾಲ್ ನಾಯಕ, ಎಸ್. ಆರ್ ಮಹದೇವ್, ತಿರುಪತಿ, ಬೂದುಬಾಳು ಗ್ರಾಮದ ಮುಖಂಡರು ಮುಂತಾದವರು ಉಪಸ್ಥಿತರಿದ್ದರು.
ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…
ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಬಿಹಾರದಿಂದ…
ಬೆಂಗಳೂರು: ಅಮೇರಿಕಾ, ಇಸ್ರೇಲ್-ಇರಾನ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…
ಟೆಹರಾನ್: ಅಮೇರಿಕಾ ಹಾಗೂ ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾರ್ಚ್.10ರಂದು ಡಿನ್ನರ್ ಪಾರ್ಟಿ ಆಯೋಜನೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.6ರಂದು ಡಿ.ಕೆ.ಶಿವಕುಮಾರ್ ಕೆಪಿಸಿಸಿ…