ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು 

ಹನೂರು: ಪಟ್ಟಣದಿಂದ ಬಂಡಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಶಾಸಕ ಎಂ.ಆರ್.ಮಂಜುನಾಥ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹನೂರು ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಸಮೀಪದಿಂದ ಬಂಡಳ್ಳಿ ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹಳ್ಳ ಕೊಳ್ಳಗಳಿಂದ ಕೂಡಿದ್ದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ಸಂಚರಿಸಲು ತೊಂದರೆಯಾಗಿತ್ತು. ಇದಲ್ಲದೆ ಹಲವಾರು ಅಪಘಾತಗಳಾಗಿ ಸಾವು ನೋವುಗಳು ಸಹ ಸಂಭವಿಸಿತ್ತು. ಇದಲ್ಲದೆ ಗರ್ಭಿಣಿಯೊಬ್ಬರಿಗೆ ಗರ್ಭಪಾತವೂ ಸಹ ಆಗಿ ಹಲವಾರು ಜನರು ಕೈಕಾಲು ಮುರಿದುಕೊಂಡಿದ್ದರು.

ಚುನಾವಣಾ ಪೂರ್ವದಲ್ಲಿ ಮಣಗಳ್ಳಿ, ಬಂಡಳ್ಳಿ, ಅಲಗಾಪುರ ಗ್ರಾಮಗಳಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ಶಾಸಕ ಎಂಆರ್ ಮಂಜುನಾಥ್ ರವರು ಹನೂರು ಪಟ್ಟಣದಿಂದ ಬಂಡಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಅಭಿವೃದ್ಧಿಪಡಿಸುವುದಾಗಿ ಭರವಸೆ ನೀಡಿದ್ದರು. ಅದರಂತೆ ಶಾಸಕರಾಗಿ ಆಯ್ಕೆಯಾದ ನಂತರ ರಸ್ತೆ ಅಭಿವೃದ್ಧಿಯನ್ನು ಮಾಡಲು ಕಳೆದ ಹಲವಾರು ತಿಂಗಳ ಹಿಂದೆ ಭೂಮಿ ಪೂಜೆ ನೆರವೇರಿಸಿದ್ದರು.

ಇದೀಗ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಶಾಸಕ ಎಂಆರ್ ಮಂಜುನಾಥ್ ಭೇಟಿ ನೀಡಿ ಆತೀ ಶೀಘ್ರದಲ್ಲಿಯೇ ಪಟ್ಟಣ ವ್ಯಾಪ್ತಿಯಲ್ಲಿ ಕಾಮಗಾರಿಯನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕು. ಶಾಲಾ-ಕಾಲೇಜು ವಿದ್ಯಾರ್ಥಿಗಳು ಈ ರಸ್ತೆಯಲ್ಲಿ ಸಂಚರಿಸುವುದರಿಂದ ಪ್ರತಿನಿತ್ಯ ನೀರು ಹಾಕಿ ದೂಳು ಬಾರದಂತೆ ಕ್ರಮ ವಹಿಸಬೇಕು ಎಂದು ತಾಕೀತು ಮಾಡಿದರು.

ಈ ವೇಳೆ ಶಾಸಕರು ಸಂಬಂಧಪಟ್ಟ ಪೊಲೀಸ್ ಸಿಬ್ಬಂದಿಗಳಿಗೆ ಸೂಚನೆ ನೀಡಿ ಟ್ರಾಫಿಕ್ ಸಮಸ್ಯೆ ಉಂಟಾಗದಂತೆ ಕ್ರಮ ವಹಿಸುವುದಾಗಿ ಭರವಸೆ ನೀಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

7 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

8 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

8 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

9 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

10 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

14 hours ago