ಚಾಮರಾಜನಗರ

ಹನೂರು | ಸರ್ಕಾರಿ ಶಾಲೆಗೆ ದಿಢೀರ್‌ ಭೇಟಿ ನೀಡಿದ ಶಾಸಕ ಎಂ.ಆರ್.ಮಂಜುನಾಥ್

ಹನೂರು: ತಾಲ್ಲೂಕಿನ ಪಳನಿಮೇಡು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಸಕ ಎಂ.ಆರ್.ಮಂಜುನಾಥ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹನೂರು ಶೈಕ್ಷಣಿಕ ವಲಯದ ಪಳನಿ ಮೇಡು ಗ್ರಾಮದ ಶಾಲೆಗೆ ಭೇಟಿ ನೀಡಿ ಪ್ರತಿ ದಿನ ಬಿಸಿಯೂಟ, ಮೊಟ್ಟೆ , ರಾಗಿ ಮಾಲ್ಟ್, ಬಾಳೆಹಣ್ಣು ನೀಡುತ್ತಿದ್ದಾರೆಯೇ ಎಂದು ವಿದ್ಯಾರ್ಥಿಗಳನ್ನು ಪ್ರಶ್ನೆ ಮಾಡಿದರು. ಈ ವೇಳೆ ವಿದ್ಯಾರ್ಥಿಗಳು ಪ್ರತಿದಿನ ಮೊಟ್ಟೆ ಊಟ ಕೊಡುತ್ತಿರುವುದಾಗಿ ತಿಳಿಸಿದರು.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಿ ವಿವಿಧ ಸೌಲಭ್ಯಗಳನ್ನು ನೀಡುತ್ತಿದೆ. ಪ್ರತಿಯೊಬ್ಬರು ಈ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಚೆನ್ನಾಗಿ ಓದಿ ತಂದೆ ತಾಯಿಗಳಿಗೆ, ಪಾಠ ಮಾಡುವ ಶಿಕ್ಷಕರಿಗೆ ಕೀರ್ತಿ ತಂದುಕೊಡಬೇಕು ಎಂದು ತಿಳಿಸಿದರು.

ಗ್ರಾಮಸ್ಥರು ಕೆಲವು ಕೊಠಡಿಗಳು ಶಿಥಿಲವಾಗಿದ್ದು, ಬಳಕೆಗೆ ಯೋಗ್ಯವಿಲ್ಲ, ವಿದ್ಯಾರ್ಥಿಗಳಿಗೆ ಮಳೆಗಾಲದಲ್ಲಿ ತೊಂದರೆಯಾಗುತ್ತಿದೆ, ಹೊಸ ಕೊಠಡಿ ನಿರ್ಮಾಣ ಮಾಡಿಕೊಡಬೇಕು ಎಂದು ಶಾಸಕರ ಬಳಿ ಮನವಿ ಮಾಡಿದರು.

ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕರು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮುಂದಿನ ದಿನಗಳಲ್ಲಿ ಹೊಸ ಕೊಠಡಿಗೆ ಹೆಚ್ಚಿನ ಅನುದಾನ ನೀಡಲಾಗುವುದು. ಈಗಾಗಲೇ ಶಿಥಿಲಗೊಂಡಿರುವ ಕೊಠಡಿಯನ್ನು ತೆರವುಗೊಳಿಸಲು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ವೇಳೆ ಮಧ್ಯಾಹ್ನದ ಬಿಸಿಯೂಟದ ಗುಣಮಟ್ಟ ಪರಿಶೀಲಿಸಲು ಶಾಸಕ ಎಂ.ಆರ್.ಮಂಜುನಾಥ್ ಅವರು, ವಿದ್ಯಾರ್ಥಿಗಳ ಜೊತೆ ಕುಳಿತು ಅನ್ನ, ಬೇಳೆ ಸಾಂಬಾರ್ ಊಟ ಸವಿದರು.

ಆಂದೋಲನ ಡೆಸ್ಕ್

Recent Posts

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

8 mins ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

3 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

4 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

4 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

5 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

6 hours ago