ಚಾಮರಾಜನಗರ

ಮಹದೇಶ್ವರ ಬೆಟ್ಟ: ಜಾತ್ರಾ ಕಾಮಗಾರಿ ಪರಿಶೀಲಿಸಿದ ಎಇ ರಘು

 

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಂದಿನ ತಿಂಗಳಿನಿಂದ ನಡೆಯಲಿರುವ ಜಾತ್ರಾ ಮಹೋತ್ಸವ ಸಂಬಂಧ ಪ್ರಗತಿ ಕಾಮಗಾರಿಗಳನ್ನು ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ಪರಿಶೀಲನೆ ನಡೆಸಿದರು.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ಟೋಬರ್ ಒಂದರಿಂದ ಮೂರು ದಿನಗಳ ಕಾಲ ಮಹಾಲಯ ಅಮಾವಾಸ್ಯೆ, ಅಕ್ಟೋಬರ್ 3 ರಿಂದ ನವರಾತ್ರಿ ಪ್ರಾರಂಭ, 11ರಂದು ಮಹಾನವಮಿ ಆಯುಧ ಪೂಜೆ, 12 ವಿಜಯದಶಮಿ ನವರಾತ್ರಿ ಆಚರಣೆ, ಅಕ್ಟೋಬರ್ 29ರಿಂದ 5 ದಿನಗಳ ಕಾಲ ದೀಪಾವಳಿ ಅಮಾವಾಸ್ಯೆ, ಜಾತ್ರಾ ಮಹೋತ್ಸವ, ನವೆಂಬರ್ 4ರಿಂದ ಕಾರ್ತಿಕ ಮಾಸದ ಪ್ರಯುಕ್ತ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಮಂದಿ ಆಗಮಿಸುವ ನಿರೀಕ್ಷೆ ಇರುವುದರಿಂದ, ಜಾತ್ರಾ ಮಹೋತ್ಸವದ ವೇಳೆ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಮಾಡಲು ಸಾಧ್ಯವಾಗದೇ ಇರುವುದರಿಂದ ಆದಷ್ಟು ಬೇಗ ಜಾತ್ರಾ ಮಹೋತ್ಸವದ ಒಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ತಾಕೀತು ಮಾಡಿದರು.

500 ರೂ ವಿಶೇಷ ದರ್ಶನದ ಕ್ಯೂ ಲೈನ್ ಪರಿಶೀಲನೆ: ಅಕ್ಟೋಬರ್ ಒಂದರಿಂದ ಮೂರು ದಿನಗಳ ಕಾಲ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಮಹಾಲಯ ಅಮಾವಾಸ್ಯೆ ಪ್ರಯುಕ್ತ ಲಕ್ಷಾಂತರ ಜನರು ಆಗಮಿಸುತ್ತಾರೆ. ರಾಜಗೋಪುರ ಮುಂಭಾಗದಲ್ಲಿರುವ ವಿಶೇಷ ದರ್ಶನದ ಕ್ಯೂ ಲೈನ್ ನಲ್ಲಿ ಬರುವವರಿಗೆ ಯಾವುದೇ ನೂಕು ನುಗ್ಗಲು ಆಗದಂತೆ ಹಾಗೂ ನೆರಳಿನ ವ್ಯವಸ್ಥೆ ಮಾಡಲು ಕಿರಿಯ ಅಭಿಯಂತರ ಸೆಲ್ವ ಗಣಪತಿರವರ ಜೊತೆ ಚರ್ಚೆ ನಡೆಸಿ ಕಾಮಗಾರಿ ಪೂರ್ಣಗೊಳಿಸುವಂತೆ ತಿಳಿಸಿದರು.

ಪ್ರವಾಸಿಗರಿಗೆ ಸೌಲಭ್ಯ ಕಲ್ಪಿಸಿ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವಂತಹ ಬಹುತೇಕರು ಧರ್ಮ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಲ್ಲುವ ವೇಳೆ ಫ್ಯಾನ್ ವ್ಯವಸ್ಥೆ, ಶುದ್ಧ ಕುಡಿಯುವ ನೀರು ಸೇರಿದಂತೆ ಮೂಲ ಸೌಲಭ್ಯ ಕಲ್ಪಿಸಿ ಕೊಡಬೇಕು. ದರ್ಶನಕ್ಕೆ ಯಾವುದೇ ಅಡಚಣೆಯಾಗದಂತೆ ನೆರಳಿನ ವ್ಯವಸ್ಥೆ ಹಾಗೂ ಮರಗಳನ್ನು ಕಟ್ಟಬೇಕು ಎಂದು ಸೂಚನೆ ನೀಡಿದರು.

ಅಂತರಗಂಗೆಯಲ್ಲಿ ಸ್ವಚ್ಛತೆ ಕಾಪಾಡಿ: ಶ್ರೀ ಕ್ಷೇತ್ರಕ್ಕೆ ಬರುವವರು ಅಂತರಗಂಗೆಯಲ್ಲಿ ಪೂಜೆ ಮಾಡುವುದು ಸಂಪ್ರದಾಯ ಆದರೆ ಕೆಲವರು ಇಲ್ಲೇ ಸ್ಥಾನ ಮಾಡುತ್ತಿರುವುದರಿಂದ ನೀರು ಮಲಿನವಾಗುತ್ತಿದೆ. ಈ ನಿಟ್ಟಿನಲ್ಲಿ ಜನರು ಸ್ಥಾನಗೃಹ ಹಾಗೂ ಕಲ್ಯಾಣಿಯಲ್ಲಿಯೇ ಸ್ಥಾನ ಮಾಡಬೇಕು ಅಂತರಗಂಗೆಯಲ್ಲಿ ಯಾವುದೇ ಅರಿಶಿಣ, ಕುಂಕುಮ ಕರ್ಪೂರ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹಾಕದೆ ಸ್ವಚ್ಛತೆ ಹೆಚ್ಚಿನ ಆದ್ಯತೆ ನೀಡಬೇಕು, ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸೂಚನಾ ಫಲಕ ಹಾಕುವಂತೆ, ಅಧಿಕಾರಿಗಳಿಗೆ ತಿಳಿಸಿದರು.

ಎರಡು ತಿಂಗಳಿನಲ್ಲಿ ಕಾಮಗಾರಿ ಪೂರ್ಣಗೊಳಿಸಿ: ಶ್ರೀ ಕ್ಷೇತ್ರ ಮಹದೇಶ್ವರ ಬೆಟ್ಟದ ದಾಸೋಹ ಭವನದ ನೆಲ ಅಂತಸ್ತು ದುರಸ್ತಿ ಕಾಮಗಾರಿ ಪ್ರಾರಂಭವಾಗಿ ವರ್ಷಗಳೇ ಕಳೆಯುತ್ತಿದೆ. ಆದರೆ ಕಾಮಗಾರಿ ಪೂರ್ಣಗೊಳ್ಳದೆ ಇರುವುದರಿಂದ ದಾಸೋಹ ಭವನಕ್ಕೆ ಬರುವವರು ಹಾಗೂ ಗಣ್ಯರಿಗೆ ತೊಂದರೆಯಾಗುತ್ತಿದೆ ಈ ನಿಟ್ಟಿನಲ್ಲಿ ಇನ್ನು ಎರಡು ತಿಂಗಳೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಿ ಅನುಕೂಲ ಕಲ್ಪಿಸಬೇಕು ಎಂದರು.

ಪ್ರತಿಮೆ ವೀಕ್ಷಣೆಗೆ ಅವಕಾಶ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ದೀಪದಗಿರಿ ಓಟುವಿನಲ್ಲಿ ನಿರ್ಮಾಣ ಮಾಡಿರುವ 108 ಅಡಿ ಮಲೆ ಮಹದೇಶ್ವರ ಪ್ರತಿಮೆ ಆವರಣದಲ್ಲಿ ಮಾತ್ರ ಕಾಮಗಾರಿ ಬಾಕಿ ಇದ್ದು ಉಳಿದಂತೆ ಸಿಸಿ ರಸ್ತೆ, ಚರಂಡಿ, ದೀಪದ ವ್ಯವಸ್ಥೆ ಪೂರ್ಣಗೊಂಡಿದೆ. ದೀಪಾವಳಿ ಜಾತ್ರಾ ಮಹೋತ್ಸವದಲ್ಲಿ ಪ್ರತಿಮೆ ವೀಕ್ಷಣೆಗೆ ಅವಕಾಶ ಕಲ್ಪಿಸಿಕೊಡಲಾಗುವುದು, ಪ್ರತಿಮೆ ಆವರಣದ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

 

ಮುಂದಿನ ತಿಂಗಳಿಂದ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ, ನವರಾತ್ರಿ ಉತ್ಸವ, ದೀಪಾವಳಿ ಜಾತ್ರಾ ಮಹೋತ್ಸವ ಕಾರ್ತಿಕ ಮಾಸ ಜಾತ್ರೆಗೆ ಲಕ್ಷಾಂತರ ಜನರು ಆಗಮಿಸುವ ಹಿನ್ನೆಲೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಪ್ರಾಧಿಕಾರದ ವತಿಯಿಂದ ನಿರಂತರವಾಗಿ ಮೂಲಭೂತ ಸೌಲಭ್ಯ ಕಲ್ಪಿಸಲಾಗುತ್ತಿದೆ. – ಎಇ ರಘು, ಕಾರ್ಯದರ್ಶಿ ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಕೃಷಿ ಕ್ಷೇತ್ರ ಅಭಿವೃದ್ಧಿ ಅಪರಿಮಿತ ಸಾಧನೆ : ಸಚಿವ ಎನ್ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…

2 hours ago

ವಿದೇಶಿ ಉದ್ಯೋಗ ಆಮಿಷ : ವಿದ್ಯಾರ್ಥಿಗೆ 1.80 ಕೋಟಿ ವಂಚನೆ!

ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…

3 hours ago

ಟಿ20 ವಿಶ್ವಕಪ್ 2026 : ಕಣದಲ್ಲಿವೆ 20 ತಂಡಗಳು

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…

3 hours ago

ಅರಣ್ಯ ಭೂಮಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ನಿರ್ಮಿಸಿದರೆ ನಿರ್ದಾಕ್ಷಿಣ್ಯ ಕ್ರಮ : ನಿತೇಶ್‌ ಪಾಟೀಲ್‌ ಎಚ್ಚರಿಕೆ

ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…

4 hours ago

ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ ; ಆರೋಪಿ ಬಂಧನ

ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…

4 hours ago

ಯತೀಂದ್ರ ನಮ್ಮ ಹೈಕಮಾಂಡ್‌, ಅವರು ಹೇಳಿದ ಮೇಲೆ ಇನ್ನೇನಿದೆ : ಡಿಸಿಎಂ ಡಿಕೆಶಿ

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…

6 hours ago