ಚಾಮರಾಜನಗರ

ಮಹದೇಶ್ವರ ಬೆಟ್ಟ: ಜಾತ್ರಾ ಕಾಮಗಾರಿ ಪರಿಶೀಲಿಸಿದ ಎಇ ರಘು

 

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಂದಿನ ತಿಂಗಳಿನಿಂದ ನಡೆಯಲಿರುವ ಜಾತ್ರಾ ಮಹೋತ್ಸವ ಸಂಬಂಧ ಪ್ರಗತಿ ಕಾಮಗಾರಿಗಳನ್ನು ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ಪರಿಶೀಲನೆ ನಡೆಸಿದರು.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ಟೋಬರ್ ಒಂದರಿಂದ ಮೂರು ದಿನಗಳ ಕಾಲ ಮಹಾಲಯ ಅಮಾವಾಸ್ಯೆ, ಅಕ್ಟೋಬರ್ 3 ರಿಂದ ನವರಾತ್ರಿ ಪ್ರಾರಂಭ, 11ರಂದು ಮಹಾನವಮಿ ಆಯುಧ ಪೂಜೆ, 12 ವಿಜಯದಶಮಿ ನವರಾತ್ರಿ ಆಚರಣೆ, ಅಕ್ಟೋಬರ್ 29ರಿಂದ 5 ದಿನಗಳ ಕಾಲ ದೀಪಾವಳಿ ಅಮಾವಾಸ್ಯೆ, ಜಾತ್ರಾ ಮಹೋತ್ಸವ, ನವೆಂಬರ್ 4ರಿಂದ ಕಾರ್ತಿಕ ಮಾಸದ ಪ್ರಯುಕ್ತ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಮಂದಿ ಆಗಮಿಸುವ ನಿರೀಕ್ಷೆ ಇರುವುದರಿಂದ, ಜಾತ್ರಾ ಮಹೋತ್ಸವದ ವೇಳೆ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಮಾಡಲು ಸಾಧ್ಯವಾಗದೇ ಇರುವುದರಿಂದ ಆದಷ್ಟು ಬೇಗ ಜಾತ್ರಾ ಮಹೋತ್ಸವದ ಒಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ತಾಕೀತು ಮಾಡಿದರು.

500 ರೂ ವಿಶೇಷ ದರ್ಶನದ ಕ್ಯೂ ಲೈನ್ ಪರಿಶೀಲನೆ: ಅಕ್ಟೋಬರ್ ಒಂದರಿಂದ ಮೂರು ದಿನಗಳ ಕಾಲ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಮಹಾಲಯ ಅಮಾವಾಸ್ಯೆ ಪ್ರಯುಕ್ತ ಲಕ್ಷಾಂತರ ಜನರು ಆಗಮಿಸುತ್ತಾರೆ. ರಾಜಗೋಪುರ ಮುಂಭಾಗದಲ್ಲಿರುವ ವಿಶೇಷ ದರ್ಶನದ ಕ್ಯೂ ಲೈನ್ ನಲ್ಲಿ ಬರುವವರಿಗೆ ಯಾವುದೇ ನೂಕು ನುಗ್ಗಲು ಆಗದಂತೆ ಹಾಗೂ ನೆರಳಿನ ವ್ಯವಸ್ಥೆ ಮಾಡಲು ಕಿರಿಯ ಅಭಿಯಂತರ ಸೆಲ್ವ ಗಣಪತಿರವರ ಜೊತೆ ಚರ್ಚೆ ನಡೆಸಿ ಕಾಮಗಾರಿ ಪೂರ್ಣಗೊಳಿಸುವಂತೆ ತಿಳಿಸಿದರು.

ಪ್ರವಾಸಿಗರಿಗೆ ಸೌಲಭ್ಯ ಕಲ್ಪಿಸಿ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವಂತಹ ಬಹುತೇಕರು ಧರ್ಮ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಲ್ಲುವ ವೇಳೆ ಫ್ಯಾನ್ ವ್ಯವಸ್ಥೆ, ಶುದ್ಧ ಕುಡಿಯುವ ನೀರು ಸೇರಿದಂತೆ ಮೂಲ ಸೌಲಭ್ಯ ಕಲ್ಪಿಸಿ ಕೊಡಬೇಕು. ದರ್ಶನಕ್ಕೆ ಯಾವುದೇ ಅಡಚಣೆಯಾಗದಂತೆ ನೆರಳಿನ ವ್ಯವಸ್ಥೆ ಹಾಗೂ ಮರಗಳನ್ನು ಕಟ್ಟಬೇಕು ಎಂದು ಸೂಚನೆ ನೀಡಿದರು.

ಅಂತರಗಂಗೆಯಲ್ಲಿ ಸ್ವಚ್ಛತೆ ಕಾಪಾಡಿ: ಶ್ರೀ ಕ್ಷೇತ್ರಕ್ಕೆ ಬರುವವರು ಅಂತರಗಂಗೆಯಲ್ಲಿ ಪೂಜೆ ಮಾಡುವುದು ಸಂಪ್ರದಾಯ ಆದರೆ ಕೆಲವರು ಇಲ್ಲೇ ಸ್ಥಾನ ಮಾಡುತ್ತಿರುವುದರಿಂದ ನೀರು ಮಲಿನವಾಗುತ್ತಿದೆ. ಈ ನಿಟ್ಟಿನಲ್ಲಿ ಜನರು ಸ್ಥಾನಗೃಹ ಹಾಗೂ ಕಲ್ಯಾಣಿಯಲ್ಲಿಯೇ ಸ್ಥಾನ ಮಾಡಬೇಕು ಅಂತರಗಂಗೆಯಲ್ಲಿ ಯಾವುದೇ ಅರಿಶಿಣ, ಕುಂಕುಮ ಕರ್ಪೂರ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹಾಕದೆ ಸ್ವಚ್ಛತೆ ಹೆಚ್ಚಿನ ಆದ್ಯತೆ ನೀಡಬೇಕು, ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸೂಚನಾ ಫಲಕ ಹಾಕುವಂತೆ, ಅಧಿಕಾರಿಗಳಿಗೆ ತಿಳಿಸಿದರು.

ಎರಡು ತಿಂಗಳಿನಲ್ಲಿ ಕಾಮಗಾರಿ ಪೂರ್ಣಗೊಳಿಸಿ: ಶ್ರೀ ಕ್ಷೇತ್ರ ಮಹದೇಶ್ವರ ಬೆಟ್ಟದ ದಾಸೋಹ ಭವನದ ನೆಲ ಅಂತಸ್ತು ದುರಸ್ತಿ ಕಾಮಗಾರಿ ಪ್ರಾರಂಭವಾಗಿ ವರ್ಷಗಳೇ ಕಳೆಯುತ್ತಿದೆ. ಆದರೆ ಕಾಮಗಾರಿ ಪೂರ್ಣಗೊಳ್ಳದೆ ಇರುವುದರಿಂದ ದಾಸೋಹ ಭವನಕ್ಕೆ ಬರುವವರು ಹಾಗೂ ಗಣ್ಯರಿಗೆ ತೊಂದರೆಯಾಗುತ್ತಿದೆ ಈ ನಿಟ್ಟಿನಲ್ಲಿ ಇನ್ನು ಎರಡು ತಿಂಗಳೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಿ ಅನುಕೂಲ ಕಲ್ಪಿಸಬೇಕು ಎಂದರು.

ಪ್ರತಿಮೆ ವೀಕ್ಷಣೆಗೆ ಅವಕಾಶ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ದೀಪದಗಿರಿ ಓಟುವಿನಲ್ಲಿ ನಿರ್ಮಾಣ ಮಾಡಿರುವ 108 ಅಡಿ ಮಲೆ ಮಹದೇಶ್ವರ ಪ್ರತಿಮೆ ಆವರಣದಲ್ಲಿ ಮಾತ್ರ ಕಾಮಗಾರಿ ಬಾಕಿ ಇದ್ದು ಉಳಿದಂತೆ ಸಿಸಿ ರಸ್ತೆ, ಚರಂಡಿ, ದೀಪದ ವ್ಯವಸ್ಥೆ ಪೂರ್ಣಗೊಂಡಿದೆ. ದೀಪಾವಳಿ ಜಾತ್ರಾ ಮಹೋತ್ಸವದಲ್ಲಿ ಪ್ರತಿಮೆ ವೀಕ್ಷಣೆಗೆ ಅವಕಾಶ ಕಲ್ಪಿಸಿಕೊಡಲಾಗುವುದು, ಪ್ರತಿಮೆ ಆವರಣದ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

 

ಮುಂದಿನ ತಿಂಗಳಿಂದ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ, ನವರಾತ್ರಿ ಉತ್ಸವ, ದೀಪಾವಳಿ ಜಾತ್ರಾ ಮಹೋತ್ಸವ ಕಾರ್ತಿಕ ಮಾಸ ಜಾತ್ರೆಗೆ ಲಕ್ಷಾಂತರ ಜನರು ಆಗಮಿಸುವ ಹಿನ್ನೆಲೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಪ್ರಾಧಿಕಾರದ ವತಿಯಿಂದ ನಿರಂತರವಾಗಿ ಮೂಲಭೂತ ಸೌಲಭ್ಯ ಕಲ್ಪಿಸಲಾಗುತ್ತಿದೆ. – ಎಇ ರಘು, ಕಾರ್ಯದರ್ಶಿ ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಚಾರಣದಲ್ಲಿ ಮಾರ್ಗಸೂಚಿ ಕಟ್ಟುನಿಟ್ಟು ಅನುಸರಣೆಗೆ ಕ್ರಮ ಅಗತ್ಯ

ರಾಜ್ಯದ ಅರಣ್ಯ ಪ್ರದೇಶ ಒಂದು ವಾರದ ಅಂತರದಲ್ಲಿ ಕೇರಳ ರಾಜ್ಯದ ಇಬ್ಬರು ಹೆಣ್ಣುಮಕ್ಕಳ ಪೈಕಿ ಒಬ್ಬಾಕೆಯ ಪ್ರಾಣವನ್ನೇ ಬಲಿತೆಗೆದುಕೊಂಡರೆ, ಇನ್ನೊಬ್ಬಾಕೆಯ…

1 min ago

ಐತಿಹಾಸಿಕ ಸಂಸತ್ ಅಧಿವೇಶನಕ್ಕೆ ದಿನಗಣನೆ!

ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.೩೩ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ನಿರ್ಧಾರ  ಏಪ್ರಿಲ್ ೧೬ರಿಂದ ೧೮ರವರೆಗೆ ಮೂರು ದಿನಗಳ ಕಾಲ ಸಂಸತ್ತಿನ…

6 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್, ಬಿಜೆಪಿ ಪಾಳೆಯದಲ್ಲಿ ಮಿಶ್ರಭಾವನೆ ಹುಟ್ಟು ಹಾಕಿದ ಉಪಚುನಾವಣೆ

ಅಭ್ಯರ್ಥಿಗಳ ಗೆಲುವಿಗಾಗಿ ಸ್ವತಃ ಫೀಲ್ಡಿಗಿಳಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಆಡಳಿತಾರೂಢ ಕಾಂಗ್ರೆಸ್ ಮತ್ತು…

13 mins ago

ಬಿಸಿಲ ಝಳಕ್ಕೆ ನೀರಿಗಿಳಿಯುವ ಮುನ್ನಇರಲಿ ಎಚ್ಚರ..!

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಇವೆ ಅಪಾಯಕಾರಿ ಸ್ಥಳಗಳು; ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ಮಡಿಕೇರಿ:ಬೇಸಿಗೆಯಲ್ಲಿ ಬಿಸಿಲ ಝಳಕ್ಕೆ ನೀರಿಗಿಳಿದು…

3 hours ago

ಹಾಲಿ-ಮಾಜಿ ಶಾಸಕರಿಗೆ ಕ್ಷೇತ್ರ ಪುನರ್‌ವಿಂಗಡಣೆ ಗುಮ್ಮ!

ಕೆ.ಬಿ.ರಮೇಶನಾಯಕ ಶೇ.೩೩ ಮಹಿಳಾ ಮೀಸಲು ಜಾರಿಯಾದರೆ ಐದು ಸ್ಥಾನ ಮೀಸಲು  ಚಾಮುಂಡೇಶ್ವರಿ, ಕೃಷ್ಣರಾಜ, ನರಸಿಂಹರಾಜ ಕ್ಷೇತ್ರದ ಕೆಲ ಭಾಗಗಳನ್ನು ಬೇರ್ಪಡಿಸಿ…

3 hours ago

150 ವರ್ಷಕ್ಕೆ ಸಾಕ್ಷಿಯಾದ ಸರ್ಕಾರಿ ಶಾಲೆ!

ಹೇಮಂತ್‌ಕುಮಾರ್ ಮಂಡ್ಯ: ಜಿಲ್ಲೆಯ ಮೇಲುಕೋಟೆ ಪ್ರಖ್ಯಾತ ಧಾರ್ಮಿಕ ಮತ್ತು ಐತಿಹಾಸಿಕ ಕ್ಷೇತ್ರವಾಗಿದ್ದು, ಹತ್ತಾರು ಶತಮಾನಗಳ ವಿಶೇಷತೆಗಳನ್ನು ಒಳಗೊಂಡಿದೆ. ಈ ಪಟ್ಟಿಯಲ್ಲಿ…

3 hours ago