ಹನೂರು: ತಾಲೂಕಿನ ಮಲೆ ಮಾದೇಶ್ವರ ಬೆಟ್ಟದಲ್ಲಿ ಉಸ್ತುವಾರಿ ಸಚಿವರ ವಿಶೇಷ ಪೂಜೆಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರಿಗೆ ಸತತ ಮೂರು ಗಂಟೆಗಳ ಕಾಲ ದರ್ಶನಕ್ಕೆ ಅವಕಾಶ ಮಾಡಿಕೊಡದ ಹಿನ್ನೆಲೆ ಭಕ್ತರು ನಿಂತಲ್ಲೇ ನಿಂತು ಹೈರಾಣ ಆಗಿದ್ದಾರೆ.
ನವರಾತ್ರಿ ಅಮಾವಾಸ್ಯೆ ಪ್ರಯುಕ್ತ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಇದಲ್ಲದೆ ನಾಳೆ ಮಲೆ ಮಾದೇಶ್ವರ ಬೆಟ್ಟದಲ್ಲಿ ಗಡಿನಾಡ ಉತ್ಸವ ಕಾರ್ಯಕ್ರಮ ಹಿನ್ನೆಲೆ ಶಿಕ್ಷಕರು ಸೇರಿದಂತೆ ಕುಟುಂಬಸ್ಥರು ಆಗಮಿಸಿದ್ದರು.
ಸಾವಿರಾರು ಸಂಖ್ಯೆಯಲ್ಲಿ ಮಲೆ ಮಾದೇಶ್ವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದರು ಸಹ ಸಚಿವರು ದರ್ಶನಕ್ಕೆ ಆಗಮಿಸುತ್ತಾರೆ ಎಂದು ಸತತ ಮೂರು ಗಂಟೆಗಳ ಕಾಲ ಯಾವೊಬ್ಬ ಭಕ್ತರನ್ನು ದೇವಾಲಯದ ಆವರಣಕ್ಕೆ ಬಿಡದ ಪರಿಣಾಮ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರು ಮಕ್ಕಳು ವಯೋ ವೃದ್ಧರು ಪ್ರಾಧಿಕಾರದ ಆಡಳಿತ ವೈಫಲ್ಯಕ್ಕೆ ಕಿಡಿ ಕಾರಿದ್ದಾರೆ.
ನಾವು ಕುಟುಂಬ ಸಮೇತ ಮಲೆಮಾದೇಶ್ವರ ಬೆಟ್ಟಕ್ಕೆ ಆಗಮಿಸಿದ್ದೆವು ಆದರೆ ಸಚಿವರು ದರ್ಶನಕ್ಕೆ ಬರುತ್ತಾರೆ ಎಂದು ದರ್ಶನಕ್ಕೆ ಅವಕಾಶ ಮಾಡಿಕೊಡದ ಹಿನ್ನೆಲೆ ಮಕ್ಕಳು ಸೇರಿದಂತೆ ಕುಟುಂಬಸ್ಥರು ನಿಂತಲ್ಲೇ ನಿಂತು ಕಾಲ ಕಳೆಯುವಂತಾಗಿತ್ತು ಇದಲ್ಲದೆ ಸಮರ್ಪಕ ಅಸನ ಹಾಗೂ ಕುಡಿಯುವ ನೀರು ವ್ಯವಸ್ಥೆ ಇಲ್ಲದೆ ಭಕ್ತರು ತೊಂದರೆ ಅನುಭವಿಸಿದರು.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…