ಚಾಮರಾಜನಗರ

ಎಂ ಎಂ ಹಿಲ್ಸ್‌: ಮೂರು ಗಂಟೆಗಳ ಕಾಲ ದರ್ಶನಕ್ಕಾಗಿ ಕಾದು ಹೈರಾಣಾದ ಭಕ್ತರು

ಹನೂರು: ತಾಲೂಕಿನ ಮಲೆ ಮಾದೇಶ್ವರ ಬೆಟ್ಟದಲ್ಲಿ ಉಸ್ತುವಾರಿ ಸಚಿವರ ವಿಶೇಷ ಪೂಜೆಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರಿಗೆ ಸತತ ಮೂರು ಗಂಟೆಗಳ ಕಾಲ ದರ್ಶನಕ್ಕೆ ಅವಕಾಶ ಮಾಡಿಕೊಡದ ಹಿನ್ನೆಲೆ ಭಕ್ತರು ನಿಂತಲ್ಲೇ ನಿಂತು ಹೈರಾಣ ಆಗಿದ್ದಾರೆ.

ನವರಾತ್ರಿ ಅಮಾವಾಸ್ಯೆ ಪ್ರಯುಕ್ತ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಇದಲ್ಲದೆ ನಾಳೆ ಮಲೆ ಮಾದೇಶ್ವರ ಬೆಟ್ಟದಲ್ಲಿ ಗಡಿನಾಡ ಉತ್ಸವ ಕಾರ್ಯಕ್ರಮ ಹಿನ್ನೆಲೆ ಶಿಕ್ಷಕರು ಸೇರಿದಂತೆ ಕುಟುಂಬಸ್ಥರು ಆಗಮಿಸಿದ್ದರು.

ಸಾವಿರಾರು ಸಂಖ್ಯೆಯಲ್ಲಿ ಮಲೆ ಮಾದೇಶ್ವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದರು ಸಹ ಸಚಿವರು ದರ್ಶನಕ್ಕೆ ಆಗಮಿಸುತ್ತಾರೆ ಎಂದು ಸತತ ಮೂರು ಗಂಟೆಗಳ ಕಾಲ ಯಾವೊಬ್ಬ ಭಕ್ತರನ್ನು ದೇವಾಲಯದ ಆವರಣಕ್ಕೆ ಬಿಡದ ಪರಿಣಾಮ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರು ಮಕ್ಕಳು ವಯೋ ವೃದ್ಧರು ಪ್ರಾಧಿಕಾರದ ಆಡಳಿತ ವೈಫಲ್ಯಕ್ಕೆ ಕಿಡಿ ಕಾರಿದ್ದಾರೆ.

ನಾವು ಕುಟುಂಬ ಸಮೇತ ಮಲೆಮಾದೇಶ್ವರ ಬೆಟ್ಟಕ್ಕೆ ಆಗಮಿಸಿದ್ದೆವು ಆದರೆ ಸಚಿವರು ದರ್ಶನಕ್ಕೆ ಬರುತ್ತಾರೆ ಎಂದು ದರ್ಶನಕ್ಕೆ ಅವಕಾಶ ಮಾಡಿಕೊಡದ ಹಿನ್ನೆಲೆ ಮಕ್ಕಳು ಸೇರಿದಂತೆ ಕುಟುಂಬಸ್ಥರು ನಿಂತಲ್ಲೇ ನಿಂತು ಕಾಲ ಕಳೆಯುವಂತಾಗಿತ್ತು ಇದಲ್ಲದೆ ಸಮರ್ಪಕ ಅಸನ ಹಾಗೂ ಕುಡಿಯುವ ನೀರು ವ್ಯವಸ್ಥೆ ಇಲ್ಲದೆ ಭಕ್ತರು ತೊಂದರೆ ಅನುಭವಿಸಿದರು.

andolanait

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

16 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

16 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

19 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

21 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

21 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

2 days ago