ಹನೂರು: ಹಣ ಡಬ್ಲಿಂಗ್ ಮಾಡಲು ತಮಿಳುನಾಡಿನ ಕಡೆ ಬಿಳಿ ಬಣ್ಣದ ಕಾರಿನಲ್ಲಿ ವಂಚನೆ ಮಾಡುವ ನೋಟು ಹಾಗೂ ಹಣ ಎಣಿಕೆ ಮಾಡುವ ಯಂತ್ರ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹನೂರು ತಾಲೂಕಿನ ದಂಟಳ್ಳಿ ಗ್ರಾಮದ ಶೇಖರ್, ಚಾಮರಾಜನಗರ ತಾಲ್ಲೂಕಿನ ಸಂತೆಮರಳ್ಳಿ ಗ್ರಾಮದ ಮಾದೇಶ್, ಸುಖೇಶ್ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.
ಘಟನೆ ವಿವರ: ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಇಂದು ಸಂಜೆ ಆನೆ ತಲೆ ದಿಂಬದ ಬಳಿ ವಾಹನಗಳನ್ನು ಪರಿಶೀಲನೆ ನಡೆಸುತ್ತಿದ್ದಾಗ, ಪೊಲೀಸರ ವಾಹನ ಕಂಡು ಗ್ರಾಂಡ್ ವಿಟ್ರಾ ಕಾರಿನ ಚಾಲಕ ಕಾರು ನಿಲ್ಲಿಸಿ ಪರಾರಿಯಾಗಿದ್ದಾನೆ. ಅನುಮಾನಗೊಂಡ ಪೊಲೀಸರು ಕಾರು ಸುತ್ತುವರಿದು ಕಾರಿನಲ್ಲಿದ್ದ ಆರೋಪಿ ಶೇಖರ್ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪರಿಶೀಲನೆ ವೇಳೆ ಕಾರಿನ ಒಳಗೆ ಒಂದು ಬ್ಯಾಗಿನಲ್ಲಿ 500 ನೋಟುಗಳಿಗೆ ಹೋಲುವ ಕಪ್ಪು ಬಣ್ಣದ 370 ಬಂಡಲ್ ಪೇಪರ್ ಕಟ್ಟುಗಳಿದ್ದು, ಒಂದು ಬಂಡಲ್ ನಲ್ಲಿ 100 ಹಾಳೆಗಳು, ಎರಡು ಖಾಲಿ ಬ್ಯಾಗ್, ನೋಟುಗಳು ಎಣಿಸುವ ಮಿಷನ್ ಪತ್ತೆಯಾಗಿದೆ. ಬಂಧಿತ ಆರೋಪಿಯಿಂದ 500 ರೂ ಬೆಲೆಯ 1,11,500 ರೂಪಾಯಿ ಹಣ ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ, ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಧರ್ಮೇಂದ್ರ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಜಗದೀಶ್ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ನಾಪತ್ತೆಯಾಗಿರುವ ಇಬ್ಬರು ಆರೋಪಿಗಳನ್ನು ಬಂಧಿಸಲು ಈಗಾಗಲೇ ತಂಡ ರಚನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…