ಚಾಮರಾಜನಗರ

ಏಡ್ಸ್ ವಿರುದ್ದ ಹೆಚ್ಚು ಅರಿವು ಅಗತ್ಯ : ನ್ಯಾ. ಬಿ.ಎಸ್ ಭಾರತಿ ಅಭಿಮತ

ಚಾಮರಾಜನಗರ: ಅರಿವಿನ ಕೊರತೆಯಿಂದ ಏಡ್ಸ್ ಸೋಂಕು ಹೆಚ್ಚಾಗುತ್ತಿದೆ. ಸೋಂಕಿತರನ್ನು ಸಮಾಜದಲ್ಲಿ ತಾರತಮ್ಯದಿಂದ ನೋಡಲಾಗುತ್ತಿದ್ದು ಅವರನ್ನು ಇತರರಂತೆ ಸಹಜವಾಗಿ ಕಾಣಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್ ಭಾರತಿ ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಚೈತನ್ಯ ನೆಟ್‌ವರ್ಕ್ ಇನ್ನಿತರ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜ್ಞಾನದ ಕೊರತೆಯಿಂದ ಏಡ್ಸ್ ಸೋಂಕು ಹೆಚ್ಚಾಗುತ್ತಿದೆ. ಇದೊಂದು ಮಾರಕ ಕಾಯಿಲೆಯಾಗಿದ್ದು ಲೈಂಗಿಕ ಆಕರ್ಷಣೆಗೆ ಒಳಗಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು. ಕೆಲ ಸಂದರ್ಭದಲ್ಲಿ ಅರಿವಿಲ್ಲದೆ ಸೋಂಕು ಹರಡುತ್ತದೆ. ಇದರಿಂದ ಬಹಳ ಜಾಗರೂಕರಾಗಿರಬೇಕು. ಹೆಚ್.ಐ.ವಿ ಬಗ್ಗೆ ಯುವ ಸಮೂಹದಲ್ಲಿ ಜಾಗೃತಿ ಮೂಡಿಸುವುದು ಬಹಳ ಮುಖ್ಯ. ಈ ರೀತಿಯ ಅರಿವು ಕಾರ್ಯಕ್ರಮಗಳು ಇನ್ನೂ ಹೆಚ್ಚು ಆಗಬೇಕಿದೆ ಎಂದು ತಿಳಿಸಿದರು.

ಪ್ರಾಂಶುಪಾಲ ಡಾ. ಪಿ.ಎಸ್ ಗುರುಪ್ರಸಾದ್ ಮಾತನಾಡಿ ಹೆಚ್.ಐ.ವಿ ಸೋಂಕು ಬಗ್ಗೆ ಮುಕ್ತವಾಗಿ ಮಾತನಾಡಲು ಹಿಂಜರಿಕೆ ಇದೆ. ಇದರಿಂದ ಅರಿವು ಮೂಡಿಸಲು ಸಾಧ್ಯವಾಗುತ್ತಿಲ್ಲ. ಏಡ್ಸ್ ಬಗ್ಗೆ ಮಾತನಾಡುವುದಕ್ಕೆ ನಾಚಿಕೆ ಪಡದೆ ತಿಳಿವಳಿಕೆ ನೀಡಬೇಕು. ನಾಟಕ ಇನ್ನಿತರ ಕಾರ್ಯಕ್ರಮಗಳ ಮೂಲಕ ಸೋಂಕು ಹರಡುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.

ಸಮತಾ ಸೊಸೈಟಿಯ ದೀಪ ಬುದ್ದೆ  ಮಾತನಾಡಿ, ನಮ್ಮ ಸಂಸ್ಥೆಯಿಂದ ಹೆಚ್.ಐ.ವಿ ವಿರುದ್ದ ನಿರಂತರವಾಗಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಒಬ್ಬರಿಂದ ಮತ್ತೊಬ್ಬರಿಗೆ ರಕ್ತ ನೀಡುವಾಗ ಸೂಜಿ, ಸಿರಂಜುಗಳನ್ನು ಬಳಸುವಾಗ ಜಾಗರೂಕರಾಗಿರಬೇಕು. ಜಾಗೃತಿಯಿಂದಲೇ ಹೆಚ್.ಐ.ವಿ ತಡೆಗಟ್ಟಬಹುದು. ಈ ನಿಟ್ಟಿನಲ್ಲಿ ಎಲ್ಲರ ಜವಾಬ್ದಾರಿ ಇದೆ ಎಂದು ತಿಳಿಸಿದರು.

ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಹಾಗೂ ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ.ಎಂ.ಎಸ್ ರವಿಕುಮಾರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೊರೆಸ್ವಾಮಿ ನಾಯಕ್, ಪ್ರೊ. ಶಿವಸ್ವಾಮಿ, ಚೈತನ್ಯ ನೆಟ್‌ವರ್ಕ್ ಸಂಸ್ಥೆಯ ಭಾಗ್ಯಮ್ಮ, ಸ್ನೇಹ ಜ್ಯೋತಿ ಸಂಸ್ಥೆಯ ಚಂದ್ರಶೇಖರ ಪಾಟೀಲ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಜಿಲ್ಲಾಡಳಿತ ಭವನದ ಮುಂಭಾಗ ಏಡ್ಸ್ ಜಾಗೃತಿ ಜಾಥಾಗೆ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೀರೆಲಾಲ್, ಇನ್ನಿತರ ಗಣ್ಯರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ  ಮಾತನಾಡಿ , ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ ಏಡ್ಸ್ ಹರಡುತ್ತದೆ. ಈ ರೋಗದ ಬಗ್ಗೆ ಹೆಚ್ಚು ಎಚ್ಚರಿಕೆ ವಹಿಸಬೇಕು. ಆರೋಗ್ಯಕರ ಜೀವನಕ್ಕಾಗಿ ಪ್ರತಿಯೊಬ್ಬರು ವಿಶೇಷವಾಗಿ ಜಾಗೃತರಾಗಬೇಕು ಎಂದು ಸಲಹೆ ಮಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಾದ ಶ್ರೀಪತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಹಾಗೂ ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ.ಎಂ.ಎಸ್ ರವಿಕುಮಾರ್, ಇನ್ನಿತರ ಅದಿಕಾರಿಗಳು ಇದ್ದರು.

ಜಾಥಾ ಬಳಿಕ ಜಿಲ್ಲಾಡಳಿತ ಭವನದ ಮುಖ್ಯದ್ವಾರದ ಬಳಿ ಕಲಾವಿದರಾದ ಶಾಂತರಾಜು ನೇತೃತ್ವದ ರಂಗದೇಗುಲ ಕಲಾ ತಂಡದವರಿಂದ ಏಡ್ಸ್ ವಿರುದ್ದ ಜಾಗೃತಿ ಬೀದಿನಾಟಕ ಪ್ರದರ್ಶನ ನಡೆಯಿತು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

4 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

7 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

8 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

8 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

9 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

10 hours ago