ಚಾಮರಾಜನಗರ: ಅರಿವಿನ ಕೊರತೆಯಿಂದ ಏಡ್ಸ್ ಸೋಂಕು ಹೆಚ್ಚಾಗುತ್ತಿದೆ. ಸೋಂಕಿತರನ್ನು ಸಮಾಜದಲ್ಲಿ ತಾರತಮ್ಯದಿಂದ ನೋಡಲಾಗುತ್ತಿದ್ದು ಅವರನ್ನು ಇತರರಂತೆ ಸಹಜವಾಗಿ ಕಾಣಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್ ಭಾರತಿ ಹೇಳಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಚೈತನ್ಯ ನೆಟ್ವರ್ಕ್ ಇನ್ನಿತರ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜ್ಞಾನದ ಕೊರತೆಯಿಂದ ಏಡ್ಸ್ ಸೋಂಕು ಹೆಚ್ಚಾಗುತ್ತಿದೆ. ಇದೊಂದು ಮಾರಕ ಕಾಯಿಲೆಯಾಗಿದ್ದು ಲೈಂಗಿಕ ಆಕರ್ಷಣೆಗೆ ಒಳಗಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು. ಕೆಲ ಸಂದರ್ಭದಲ್ಲಿ ಅರಿವಿಲ್ಲದೆ ಸೋಂಕು ಹರಡುತ್ತದೆ. ಇದರಿಂದ ಬಹಳ ಜಾಗರೂಕರಾಗಿರಬೇಕು. ಹೆಚ್.ಐ.ವಿ ಬಗ್ಗೆ ಯುವ ಸಮೂಹದಲ್ಲಿ ಜಾಗೃತಿ ಮೂಡಿಸುವುದು ಬಹಳ ಮುಖ್ಯ. ಈ ರೀತಿಯ ಅರಿವು ಕಾರ್ಯಕ್ರಮಗಳು ಇನ್ನೂ ಹೆಚ್ಚು ಆಗಬೇಕಿದೆ ಎಂದು ತಿಳಿಸಿದರು.
ಪ್ರಾಂಶುಪಾಲ ಡಾ. ಪಿ.ಎಸ್ ಗುರುಪ್ರಸಾದ್ ಮಾತನಾಡಿ ಹೆಚ್.ಐ.ವಿ ಸೋಂಕು ಬಗ್ಗೆ ಮುಕ್ತವಾಗಿ ಮಾತನಾಡಲು ಹಿಂಜರಿಕೆ ಇದೆ. ಇದರಿಂದ ಅರಿವು ಮೂಡಿಸಲು ಸಾಧ್ಯವಾಗುತ್ತಿಲ್ಲ. ಏಡ್ಸ್ ಬಗ್ಗೆ ಮಾತನಾಡುವುದಕ್ಕೆ ನಾಚಿಕೆ ಪಡದೆ ತಿಳಿವಳಿಕೆ ನೀಡಬೇಕು. ನಾಟಕ ಇನ್ನಿತರ ಕಾರ್ಯಕ್ರಮಗಳ ಮೂಲಕ ಸೋಂಕು ಹರಡುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.
ಸಮತಾ ಸೊಸೈಟಿಯ ದೀಪ ಬುದ್ದೆ ಮಾತನಾಡಿ, ನಮ್ಮ ಸಂಸ್ಥೆಯಿಂದ ಹೆಚ್.ಐ.ವಿ ವಿರುದ್ದ ನಿರಂತರವಾಗಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಒಬ್ಬರಿಂದ ಮತ್ತೊಬ್ಬರಿಗೆ ರಕ್ತ ನೀಡುವಾಗ ಸೂಜಿ, ಸಿರಂಜುಗಳನ್ನು ಬಳಸುವಾಗ ಜಾಗರೂಕರಾಗಿರಬೇಕು. ಜಾಗೃತಿಯಿಂದಲೇ ಹೆಚ್.ಐ.ವಿ ತಡೆಗಟ್ಟಬಹುದು. ಈ ನಿಟ್ಟಿನಲ್ಲಿ ಎಲ್ಲರ ಜವಾಬ್ದಾರಿ ಇದೆ ಎಂದು ತಿಳಿಸಿದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಹಾಗೂ ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ.ಎಂ.ಎಸ್ ರವಿಕುಮಾರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೊರೆಸ್ವಾಮಿ ನಾಯಕ್, ಪ್ರೊ. ಶಿವಸ್ವಾಮಿ, ಚೈತನ್ಯ ನೆಟ್ವರ್ಕ್ ಸಂಸ್ಥೆಯ ಭಾಗ್ಯಮ್ಮ, ಸ್ನೇಹ ಜ್ಯೋತಿ ಸಂಸ್ಥೆಯ ಚಂದ್ರಶೇಖರ ಪಾಟೀಲ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಜಿಲ್ಲಾಡಳಿತ ಭವನದ ಮುಂಭಾಗ ಏಡ್ಸ್ ಜಾಗೃತಿ ಜಾಥಾಗೆ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೀರೆಲಾಲ್, ಇನ್ನಿತರ ಗಣ್ಯರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ ಮಾತನಾಡಿ , ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ ಏಡ್ಸ್ ಹರಡುತ್ತದೆ. ಈ ರೋಗದ ಬಗ್ಗೆ ಹೆಚ್ಚು ಎಚ್ಚರಿಕೆ ವಹಿಸಬೇಕು. ಆರೋಗ್ಯಕರ ಜೀವನಕ್ಕಾಗಿ ಪ್ರತಿಯೊಬ್ಬರು ವಿಶೇಷವಾಗಿ ಜಾಗೃತರಾಗಬೇಕು ಎಂದು ಸಲಹೆ ಮಾಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಾದ ಶ್ರೀಪತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಹಾಗೂ ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ.ಎಂ.ಎಸ್ ರವಿಕುಮಾರ್, ಇನ್ನಿತರ ಅದಿಕಾರಿಗಳು ಇದ್ದರು.
ಜಾಥಾ ಬಳಿಕ ಜಿಲ್ಲಾಡಳಿತ ಭವನದ ಮುಖ್ಯದ್ವಾರದ ಬಳಿ ಕಲಾವಿದರಾದ ಶಾಂತರಾಜು ನೇತೃತ್ವದ ರಂಗದೇಗುಲ ಕಲಾ ತಂಡದವರಿಂದ ಏಡ್ಸ್ ವಿರುದ್ದ ಜಾಗೃತಿ ಬೀದಿನಾಟಕ ಪ್ರದರ್ಶನ ನಡೆಯಿತು.
ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…
ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…
ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…
ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನರಾಗಿದ್ದಾರೆ.…
ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…
ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಗ್ರಾಮದಲ್ಲಿ ತಡರಾತ್ರಿ ಭೀಕರ ಕೊಲೆ ನಡೆದಿದ್ದು, ಯುವಕನೊಬ್ಬನನ್ನು ದುಷ್ಕರ್ಮಿಗಳು ಅತ್ಯಂತ ಬರ್ಬರವಾಗಿ…