ಹನೂರು: ಮೂರು ದಿನಗಳ ಕಾಲ ಸಾಲು ಸಾಲು ಸರ್ಕಾರಿ ರಜೆಯಿದ್ದ ಹಿನ್ನೆಲೆ ಹನೂರು ತಾಲೂಕಿನ ಪಿ ಲೊಕ್ಕನಹಳ್ಳಿ ಸಫಾರಿ ಕೇಂದ್ರಕ್ಕೆ 70ಕ್ಕೂ ಹೆಚ್ಚು ಜನರು ಭೇಟಿ ನೀಡಿ ಪ್ರಕೃತಿಯ ಸೊಬಗು ಹಾಗೂ ವನ್ಯ ಪ್ರಾಣಿಗಳನ್ನು ಕಂಡು ಸಂತಸ ವ್ಯಕ್ತಪಡಿಸಿದ್ದಾರೆ.
ಎರಡನೇ ಶನಿವಾರ ಭಾನುವಾರ ಹಾಗೂ ಈದ್ ಮಿಲಾದ್ ಪ್ರಯುಕ್ತ ಸೋಮವಾರ ಸರ್ಕಾರಿ ರಜೆ ಇದ್ದ ಹಿನ್ನೆಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಗಳ ವ್ಯಾಪ್ತಿಯ ಲೊಕ್ಕನಹಳ್ಳಿ ಸಫಾರಿ ಕೇಂದ್ರಕ್ಕೆ 70 ಜನರು ಭೇಟಿ ನೀಡಿದ್ದು 25 ಸಾವಿರಕ್ಕೂ ಹೆಚ್ಚು ಆದಾಯ ಬಂದಿದೆ.
ಮೂರು ದಿನಗಳ ಅವಧಿಯಲ್ಲಿ ಬಂದಿದ್ದ ಪ್ರವಾಸಿಗರಿಗೆ ಆನೆ, ಕಾಡೆಮ್ಮೆ, ಜಿಂಕೆ ಸೇರಿದಂತೆ ವಿವಿಧ ಪ್ರಭೇದದ ಪಕ್ಷಿಗಳು ಕಂಡಿವೆ.
ಸಫಾರಿ ಕೇಂದ್ರದ ಚುಜ್ಜಲು ಕೆರೆ ಸಮೀಪ ಎರಡು ಮರಿಗಳ ಜೊತೆ ತಾಯಿ ಆನೆ ನೀರು ಕುಡಿಯುತ್ತಿರುವ ದೃಶ್ಯ ಪ್ರವಾಸಿಗರ ಕ್ಯಾಮೆರಾದಲ್ಲಿ ಸರೆಯಾಗಿದೆ. ವಡವಾರದ ಕೆರೆ ಸಮೀಪ ಕಾಡೆಮ್ಮೆ ತನ್ನ ಮರಿಗಳ ಜೊತೆ ಮೇವು ತಿನ್ನುತ್ತಿರುವುದು, ಶನಿವಾರ ಮುತ್ತನಹೊಲದ ಕೆರೆ ಸಮೀಪ ಒಂಟಿ ಸಲಗ ರಸ್ತೆ ಬದಿಯಲ್ಲಿ ನಿಂತಿರುವ ದೃಶ್ಯ ಸೆರೆಯಾಗಿದೆ.
ಇನ್ನು ಮೂರು ದಿನಗಳ ಅವಧಿಯಲ್ಲಿ ಬಂದಿದ್ದಂತಹ ಪ್ರವಾಸಿಗರಿಗೆ ವನ್ಯ ಪ್ರಾಣಿಗಳು ಸ್ವಚ್ಛಂದವಾಗಿ ಓಡಾಡುತ್ತಿರುವ ದೃಶ್ಯ ಕಾಣಸಿಕ್ಕಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ವ್ಯಾಪ್ತಿಯ ಮಲೆ ಮಹದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಡಿಸೆಂಬರ್ನಲ್ಲಿ ಪ್ರಾರಂಭವಾದ ಲೊಕ್ಕನಹಳ್ಳಿ ಸಫಾರಿ ಕೇಂದ್ರಕ್ಕೆ ಉತ್ತಮವಾದ ಸ್ಪಂದನೆ ಸಿಗುತ್ತಿದೆ. ಬರುವಂತಹ ಪ್ರವಾಸಿಗರಿಗೆ ಹೋಟೆಲ್, ವಾಸ್ತವ್ಯಕ್ಕೆ ಕೊಠಡಿ, ಶೌಚಾಲಯ, ಮಾಹಿತಿ ಕೇಂದ್ರ, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳು ದೊರಕಿಸಿ ಕೊಟ್ಟರೆ ಇನ್ನಷ್ಟು ಅಭಿವೃದ್ಧಿಯಾಗಲಿದೆ.
ಹನೂರು ತಾಲೂಕು ವ್ಯಾಪ್ತಿಯಲ್ಲಿ ಮಲೆ ಮಹದೇಶ್ವರ ಬೆಟ್ಟ, ಹೊಗೇನಕಲ್ ಫಾಲ್ಸ್ , ಲೊಕ್ಕನಹಳ್ಳಿ ಸಫಾರಿ ಕೇಂದ್ರ, ಗುಂಡಾಲ್ ಜಲಾಶಯ, ಉಡುತೊರೆ ಜಲಾಶಯ, ಕೌಳಿ ಹಳ್ಳ ಜಲಾಶಯ, ಟಿಬೆಟಿಯನ್ ಕ್ಯಾಂಪ್, ಟಾಟಾ ಎಸ್ಟೇಟ್ ಗೆ ಪ್ರವಾಸೋದ್ಯಮ ಇಲಾಖೆ ವತಿಯಿಂದ ಅಭಿವೃದ್ಧಿಪಡಿಸಿದರೆ ಉತ್ತಮ ಪ್ರವಾಸಿ ತಾಣವಾಗಲಿದ್ದು, ಇಲಾಖೆಗೆ ಉತ್ತಮ ಆದಾಯವು ಸಹ ಬರಲಿದೆ. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು ಕ್ಷೇತ್ರದ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಶ್ರಮಿಸಬೇಕಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…