ಚಾಮರಾಜನಗರ

ಸಾಲು ಸಾಲು ರಜೆ; ಪಿಜಿ ಪಾಳ್ಯ ಸಫಾರಿ ಕೇಂದ್ರದತ್ತ ಪ್ರಾಣಿಪ್ರಿಯರ ಹೆಜ್ಜೆ

ಹನೂರು: ಮೂರು ದಿನಗಳ ಕಾಲ ಸಾಲು ಸಾಲು ಸರ್ಕಾರಿ ರಜೆಯಿದ್ದ ಹಿನ್ನೆಲೆ ಹನೂರು ತಾಲೂಕಿನ ಪಿ ಲೊಕ್ಕನಹಳ್ಳಿ ಸಫಾರಿ ಕೇಂದ್ರಕ್ಕೆ 70ಕ್ಕೂ ಹೆಚ್ಚು ಜನರು ಭೇಟಿ ನೀಡಿ ಪ್ರಕೃತಿಯ ಸೊಬಗು ಹಾಗೂ ವನ್ಯ ಪ್ರಾಣಿಗಳನ್ನು ಕಂಡು ಸಂತಸ ವ್ಯಕ್ತಪಡಿಸಿದ್ದಾರೆ.

ಎರಡನೇ ಶನಿವಾರ ಭಾನುವಾರ ಹಾಗೂ ಈದ್ ಮಿಲಾದ್ ಪ್ರಯುಕ್ತ ಸೋಮವಾರ ಸರ್ಕಾರಿ ರಜೆ ಇದ್ದ ಹಿನ್ನೆಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಗಳ ವ್ಯಾಪ್ತಿಯ ಲೊಕ್ಕನಹಳ್ಳಿ ಸಫಾರಿ ಕೇಂದ್ರಕ್ಕೆ 70 ಜನರು ಭೇಟಿ ನೀಡಿದ್ದು 25 ಸಾವಿರಕ್ಕೂ ಹೆಚ್ಚು ಆದಾಯ ಬಂದಿದೆ.

ಮೂರು ದಿನಗಳ ಅವಧಿಯಲ್ಲಿ ಬಂದಿದ್ದ ಪ್ರವಾಸಿಗರಿಗೆ ಆನೆ, ಕಾಡೆಮ್ಮೆ, ಜಿಂಕೆ ಸೇರಿದಂತೆ ವಿವಿಧ ಪ್ರಭೇದದ ಪಕ್ಷಿಗಳು ಕಂಡಿವೆ.

ಸಫಾರಿ ಕೇಂದ್ರದ ಚುಜ್ಜಲು ಕೆರೆ ಸಮೀಪ ಎರಡು ಮರಿಗಳ ಜೊತೆ ತಾಯಿ ಆನೆ ನೀರು ಕುಡಿಯುತ್ತಿರುವ ದೃಶ್ಯ ಪ್ರವಾಸಿಗರ ಕ್ಯಾಮೆರಾದಲ್ಲಿ ಸರೆಯಾಗಿದೆ. ವಡವಾರದ ಕೆರೆ ಸಮೀಪ ಕಾಡೆಮ್ಮೆ ತನ್ನ ಮರಿಗಳ ಜೊತೆ ಮೇವು ತಿನ್ನುತ್ತಿರುವುದು, ಶನಿವಾರ ಮುತ್ತನಹೊಲದ ಕೆರೆ ಸಮೀಪ ಒಂಟಿ ಸಲಗ ರಸ್ತೆ ಬದಿಯಲ್ಲಿ ನಿಂತಿರುವ ದೃಶ್ಯ ಸೆರೆಯಾಗಿದೆ.

ಇನ್ನು ಮೂರು ದಿನಗಳ ಅವಧಿಯಲ್ಲಿ ಬಂದಿದ್ದಂತಹ ಪ್ರವಾಸಿಗರಿಗೆ ವನ್ಯ ಪ್ರಾಣಿಗಳು ಸ್ವಚ್ಛಂದವಾಗಿ ಓಡಾಡುತ್ತಿರುವ ದೃಶ್ಯ ಕಾಣಸಿಕ್ಕಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ವ್ಯಾಪ್ತಿಯ ಮಲೆ ಮಹದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಡಿಸೆಂಬರ್‌ನಲ್ಲಿ ಪ್ರಾರಂಭವಾದ ಲೊಕ್ಕನಹಳ್ಳಿ ಸಫಾರಿ ಕೇಂದ್ರಕ್ಕೆ ಉತ್ತಮವಾದ ಸ್ಪಂದನೆ ಸಿಗುತ್ತಿದೆ. ಬರುವಂತಹ ಪ್ರವಾಸಿಗರಿಗೆ ಹೋಟೆಲ್, ವಾಸ್ತವ್ಯಕ್ಕೆ ಕೊಠಡಿ, ಶೌಚಾಲಯ, ಮಾಹಿತಿ ಕೇಂದ್ರ, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳು ದೊರಕಿಸಿ ಕೊಟ್ಟರೆ ಇನ್ನಷ್ಟು ಅಭಿವೃದ್ಧಿಯಾಗಲಿದೆ.

ಹನೂರು ತಾಲೂಕು ವ್ಯಾಪ್ತಿಯಲ್ಲಿ ಮಲೆ ಮಹದೇಶ್ವರ ಬೆಟ್ಟ, ಹೊಗೇನಕಲ್ ಫಾಲ್ಸ್ , ಲೊಕ್ಕನಹಳ್ಳಿ ಸಫಾರಿ ಕೇಂದ್ರ, ಗುಂಡಾಲ್ ಜಲಾಶಯ, ಉಡುತೊರೆ ಜಲಾಶಯ, ಕೌಳಿ ಹಳ್ಳ ಜಲಾಶಯ, ಟಿಬೆಟಿಯನ್ ಕ್ಯಾಂಪ್, ಟಾಟಾ ಎಸ್ಟೇಟ್ ಗೆ ಪ್ರವಾಸೋದ್ಯಮ ಇಲಾಖೆ ವತಿಯಿಂದ ಅಭಿವೃದ್ಧಿಪಡಿಸಿದರೆ ಉತ್ತಮ ಪ್ರವಾಸಿ ತಾಣವಾಗಲಿದ್ದು, ಇಲಾಖೆಗೆ ಉತ್ತಮ ಆದಾಯವು ಸಹ ಬರಲಿದೆ. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು ಕ್ಷೇತ್ರದ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಶ್ರಮಿಸಬೇಕಿದೆ.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

10 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

11 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

11 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

11 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

11 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

12 hours ago