ಚಾಮರಾಜನಗರ

ಸಾಲು ಸಾಲು ರಜೆ; ಪಿಜಿ ಪಾಳ್ಯ ಸಫಾರಿ ಕೇಂದ್ರದತ್ತ ಪ್ರಾಣಿಪ್ರಿಯರ ಹೆಜ್ಜೆ

ಹನೂರು: ಮೂರು ದಿನಗಳ ಕಾಲ ಸಾಲು ಸಾಲು ಸರ್ಕಾರಿ ರಜೆಯಿದ್ದ ಹಿನ್ನೆಲೆ ಹನೂರು ತಾಲೂಕಿನ ಪಿ ಲೊಕ್ಕನಹಳ್ಳಿ ಸಫಾರಿ ಕೇಂದ್ರಕ್ಕೆ 70ಕ್ಕೂ ಹೆಚ್ಚು ಜನರು ಭೇಟಿ ನೀಡಿ ಪ್ರಕೃತಿಯ ಸೊಬಗು ಹಾಗೂ ವನ್ಯ ಪ್ರಾಣಿಗಳನ್ನು ಕಂಡು ಸಂತಸ ವ್ಯಕ್ತಪಡಿಸಿದ್ದಾರೆ.

ಎರಡನೇ ಶನಿವಾರ ಭಾನುವಾರ ಹಾಗೂ ಈದ್ ಮಿಲಾದ್ ಪ್ರಯುಕ್ತ ಸೋಮವಾರ ಸರ್ಕಾರಿ ರಜೆ ಇದ್ದ ಹಿನ್ನೆಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಗಳ ವ್ಯಾಪ್ತಿಯ ಲೊಕ್ಕನಹಳ್ಳಿ ಸಫಾರಿ ಕೇಂದ್ರಕ್ಕೆ 70 ಜನರು ಭೇಟಿ ನೀಡಿದ್ದು 25 ಸಾವಿರಕ್ಕೂ ಹೆಚ್ಚು ಆದಾಯ ಬಂದಿದೆ.

ಮೂರು ದಿನಗಳ ಅವಧಿಯಲ್ಲಿ ಬಂದಿದ್ದ ಪ್ರವಾಸಿಗರಿಗೆ ಆನೆ, ಕಾಡೆಮ್ಮೆ, ಜಿಂಕೆ ಸೇರಿದಂತೆ ವಿವಿಧ ಪ್ರಭೇದದ ಪಕ್ಷಿಗಳು ಕಂಡಿವೆ.

ಸಫಾರಿ ಕೇಂದ್ರದ ಚುಜ್ಜಲು ಕೆರೆ ಸಮೀಪ ಎರಡು ಮರಿಗಳ ಜೊತೆ ತಾಯಿ ಆನೆ ನೀರು ಕುಡಿಯುತ್ತಿರುವ ದೃಶ್ಯ ಪ್ರವಾಸಿಗರ ಕ್ಯಾಮೆರಾದಲ್ಲಿ ಸರೆಯಾಗಿದೆ. ವಡವಾರದ ಕೆರೆ ಸಮೀಪ ಕಾಡೆಮ್ಮೆ ತನ್ನ ಮರಿಗಳ ಜೊತೆ ಮೇವು ತಿನ್ನುತ್ತಿರುವುದು, ಶನಿವಾರ ಮುತ್ತನಹೊಲದ ಕೆರೆ ಸಮೀಪ ಒಂಟಿ ಸಲಗ ರಸ್ತೆ ಬದಿಯಲ್ಲಿ ನಿಂತಿರುವ ದೃಶ್ಯ ಸೆರೆಯಾಗಿದೆ.

ಇನ್ನು ಮೂರು ದಿನಗಳ ಅವಧಿಯಲ್ಲಿ ಬಂದಿದ್ದಂತಹ ಪ್ರವಾಸಿಗರಿಗೆ ವನ್ಯ ಪ್ರಾಣಿಗಳು ಸ್ವಚ್ಛಂದವಾಗಿ ಓಡಾಡುತ್ತಿರುವ ದೃಶ್ಯ ಕಾಣಸಿಕ್ಕಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ವ್ಯಾಪ್ತಿಯ ಮಲೆ ಮಹದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಡಿಸೆಂಬರ್‌ನಲ್ಲಿ ಪ್ರಾರಂಭವಾದ ಲೊಕ್ಕನಹಳ್ಳಿ ಸಫಾರಿ ಕೇಂದ್ರಕ್ಕೆ ಉತ್ತಮವಾದ ಸ್ಪಂದನೆ ಸಿಗುತ್ತಿದೆ. ಬರುವಂತಹ ಪ್ರವಾಸಿಗರಿಗೆ ಹೋಟೆಲ್, ವಾಸ್ತವ್ಯಕ್ಕೆ ಕೊಠಡಿ, ಶೌಚಾಲಯ, ಮಾಹಿತಿ ಕೇಂದ್ರ, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳು ದೊರಕಿಸಿ ಕೊಟ್ಟರೆ ಇನ್ನಷ್ಟು ಅಭಿವೃದ್ಧಿಯಾಗಲಿದೆ.

ಹನೂರು ತಾಲೂಕು ವ್ಯಾಪ್ತಿಯಲ್ಲಿ ಮಲೆ ಮಹದೇಶ್ವರ ಬೆಟ್ಟ, ಹೊಗೇನಕಲ್ ಫಾಲ್ಸ್ , ಲೊಕ್ಕನಹಳ್ಳಿ ಸಫಾರಿ ಕೇಂದ್ರ, ಗುಂಡಾಲ್ ಜಲಾಶಯ, ಉಡುತೊರೆ ಜಲಾಶಯ, ಕೌಳಿ ಹಳ್ಳ ಜಲಾಶಯ, ಟಿಬೆಟಿಯನ್ ಕ್ಯಾಂಪ್, ಟಾಟಾ ಎಸ್ಟೇಟ್ ಗೆ ಪ್ರವಾಸೋದ್ಯಮ ಇಲಾಖೆ ವತಿಯಿಂದ ಅಭಿವೃದ್ಧಿಪಡಿಸಿದರೆ ಉತ್ತಮ ಪ್ರವಾಸಿ ತಾಣವಾಗಲಿದ್ದು, ಇಲಾಖೆಗೆ ಉತ್ತಮ ಆದಾಯವು ಸಹ ಬರಲಿದೆ. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು ಕ್ಷೇತ್ರದ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಶ್ರಮಿಸಬೇಕಿದೆ.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

15 mins ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

32 mins ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

50 mins ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

2 hours ago

ಜಾನಕಿ ಅಮ್ಮ ಮೊದಲು, ಕೊನೆಯ ಹಾಡು ಹಾಡಿದ್ದು, ಗಾಯನ ನಿಲ್ಲಿಸಿದ್ದು ಮೈಸೂರಿನಲ್ಲೇ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಎಸ್‌ಐಆರ್ : ಕರ್ನಾಟಕದ ಕ್ರಮ ಬಿಜೆಪಿಗೆ ಕಹಿ ಗುಳಿಗೆ !

ಕಳೆದ ಒಂದು ವರ್ಷದಿಂದ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯದೇ ಸದ್ದು. ಇದೇನು ಹೊಸ ಬೆಳವಣಿಗೆಯಲ್ಲ. ಇದುವರೆಗೆ ಚುನಾವಣಾ ಆಯೋಗ ದೇಶದಾದ್ಯಂತ…

3 hours ago