ಚಾಮರಾಜನಗರ

ಸಾಲು ಸಾಲು ರಜೆ; ಪಿಜಿ ಪಾಳ್ಯ ಸಫಾರಿ ಕೇಂದ್ರದತ್ತ ಪ್ರಾಣಿಪ್ರಿಯರ ಹೆಜ್ಜೆ

ಹನೂರು: ಮೂರು ದಿನಗಳ ಕಾಲ ಸಾಲು ಸಾಲು ಸರ್ಕಾರಿ ರಜೆಯಿದ್ದ ಹಿನ್ನೆಲೆ ಹನೂರು ತಾಲೂಕಿನ ಪಿ ಲೊಕ್ಕನಹಳ್ಳಿ ಸಫಾರಿ ಕೇಂದ್ರಕ್ಕೆ 70ಕ್ಕೂ ಹೆಚ್ಚು ಜನರು ಭೇಟಿ ನೀಡಿ ಪ್ರಕೃತಿಯ ಸೊಬಗು ಹಾಗೂ ವನ್ಯ ಪ್ರಾಣಿಗಳನ್ನು ಕಂಡು ಸಂತಸ ವ್ಯಕ್ತಪಡಿಸಿದ್ದಾರೆ.

ಎರಡನೇ ಶನಿವಾರ ಭಾನುವಾರ ಹಾಗೂ ಈದ್ ಮಿಲಾದ್ ಪ್ರಯುಕ್ತ ಸೋಮವಾರ ಸರ್ಕಾರಿ ರಜೆ ಇದ್ದ ಹಿನ್ನೆಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಗಳ ವ್ಯಾಪ್ತಿಯ ಲೊಕ್ಕನಹಳ್ಳಿ ಸಫಾರಿ ಕೇಂದ್ರಕ್ಕೆ 70 ಜನರು ಭೇಟಿ ನೀಡಿದ್ದು 25 ಸಾವಿರಕ್ಕೂ ಹೆಚ್ಚು ಆದಾಯ ಬಂದಿದೆ.

ಮೂರು ದಿನಗಳ ಅವಧಿಯಲ್ಲಿ ಬಂದಿದ್ದ ಪ್ರವಾಸಿಗರಿಗೆ ಆನೆ, ಕಾಡೆಮ್ಮೆ, ಜಿಂಕೆ ಸೇರಿದಂತೆ ವಿವಿಧ ಪ್ರಭೇದದ ಪಕ್ಷಿಗಳು ಕಂಡಿವೆ.

ಸಫಾರಿ ಕೇಂದ್ರದ ಚುಜ್ಜಲು ಕೆರೆ ಸಮೀಪ ಎರಡು ಮರಿಗಳ ಜೊತೆ ತಾಯಿ ಆನೆ ನೀರು ಕುಡಿಯುತ್ತಿರುವ ದೃಶ್ಯ ಪ್ರವಾಸಿಗರ ಕ್ಯಾಮೆರಾದಲ್ಲಿ ಸರೆಯಾಗಿದೆ. ವಡವಾರದ ಕೆರೆ ಸಮೀಪ ಕಾಡೆಮ್ಮೆ ತನ್ನ ಮರಿಗಳ ಜೊತೆ ಮೇವು ತಿನ್ನುತ್ತಿರುವುದು, ಶನಿವಾರ ಮುತ್ತನಹೊಲದ ಕೆರೆ ಸಮೀಪ ಒಂಟಿ ಸಲಗ ರಸ್ತೆ ಬದಿಯಲ್ಲಿ ನಿಂತಿರುವ ದೃಶ್ಯ ಸೆರೆಯಾಗಿದೆ.

ಇನ್ನು ಮೂರು ದಿನಗಳ ಅವಧಿಯಲ್ಲಿ ಬಂದಿದ್ದಂತಹ ಪ್ರವಾಸಿಗರಿಗೆ ವನ್ಯ ಪ್ರಾಣಿಗಳು ಸ್ವಚ್ಛಂದವಾಗಿ ಓಡಾಡುತ್ತಿರುವ ದೃಶ್ಯ ಕಾಣಸಿಕ್ಕಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ವ್ಯಾಪ್ತಿಯ ಮಲೆ ಮಹದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಡಿಸೆಂಬರ್‌ನಲ್ಲಿ ಪ್ರಾರಂಭವಾದ ಲೊಕ್ಕನಹಳ್ಳಿ ಸಫಾರಿ ಕೇಂದ್ರಕ್ಕೆ ಉತ್ತಮವಾದ ಸ್ಪಂದನೆ ಸಿಗುತ್ತಿದೆ. ಬರುವಂತಹ ಪ್ರವಾಸಿಗರಿಗೆ ಹೋಟೆಲ್, ವಾಸ್ತವ್ಯಕ್ಕೆ ಕೊಠಡಿ, ಶೌಚಾಲಯ, ಮಾಹಿತಿ ಕೇಂದ್ರ, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳು ದೊರಕಿಸಿ ಕೊಟ್ಟರೆ ಇನ್ನಷ್ಟು ಅಭಿವೃದ್ಧಿಯಾಗಲಿದೆ.

ಹನೂರು ತಾಲೂಕು ವ್ಯಾಪ್ತಿಯಲ್ಲಿ ಮಲೆ ಮಹದೇಶ್ವರ ಬೆಟ್ಟ, ಹೊಗೇನಕಲ್ ಫಾಲ್ಸ್ , ಲೊಕ್ಕನಹಳ್ಳಿ ಸಫಾರಿ ಕೇಂದ್ರ, ಗುಂಡಾಲ್ ಜಲಾಶಯ, ಉಡುತೊರೆ ಜಲಾಶಯ, ಕೌಳಿ ಹಳ್ಳ ಜಲಾಶಯ, ಟಿಬೆಟಿಯನ್ ಕ್ಯಾಂಪ್, ಟಾಟಾ ಎಸ್ಟೇಟ್ ಗೆ ಪ್ರವಾಸೋದ್ಯಮ ಇಲಾಖೆ ವತಿಯಿಂದ ಅಭಿವೃದ್ಧಿಪಡಿಸಿದರೆ ಉತ್ತಮ ಪ್ರವಾಸಿ ತಾಣವಾಗಲಿದ್ದು, ಇಲಾಖೆಗೆ ಉತ್ತಮ ಆದಾಯವು ಸಹ ಬರಲಿದೆ. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು ಕ್ಷೇತ್ರದ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಶ್ರಮಿಸಬೇಕಿದೆ.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

2 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

3 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

4 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

5 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

5 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

9 hours ago