ಚಾಮರಾಜನಗರ

ಚಲಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಬೆಂಕಿ: ಇನ್ಸ್‌ಪೆಕ್ಟರ್ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

ಹನೂರು: ಹನೂರು ಪಟ್ಟಣದ ಆರ್.ಎಸ್.ದೊಡ್ಡಿ ಗ್ರಾಮದಿಂದ ಚಿಂಚಳ್ಳಿ ಗ್ರಾಮಕ್ಕೆ ಟ್ರ್ಯಾಕ್ಟರ್‌ನಲ್ಲಿ ತುಂಬಿಕೊಂಡು ಹೋಗುತ್ತಿದ್ದ ಜೋಳದ ಕಡ್ಡಿಗೆ ಆಕಸ್ಮಿಕ ಬೆಂಕಿ ಬಿದ್ದಿದ್ದರು ವಿಚಾರ ತಿಳಿಯದೇ ಚಾಲಕ ತೆರಳುತ್ತಿದ್ದಾಗ, ಅದೇ ರಸ್ತೆಯಲ್ಲಿ ಬರುತ್ತಿದ್ದ ಹನೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆನಂದಮೂರ್ತಿ ವಿಚಾರ ತಿಳಿಸಿ ಮುಂದೆ ಆಗಬಹುದಾದ ದೊಡ್ಡ ಅನಾಹುತವೊಂದನ್ನು ತಪ್ಪಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಹನೂರು ತಾಲ್ಲೂಕಿನ ಚಿಂಚಳ್ಳಿ ಗ್ರಾಮದ ರವಿ ಎಂಬುವವರ ಟ್ರ್ಯಾಕ್ಟರ್‌ನಲ್ಲಿ ಆರ್.ಎಸ್.ದೊಡ್ಡಿ ಗ್ರಾಮದಿಂದ ಚಿಂಚಳ್ಳಿ ಗ್ರಾಮಕ್ಕೆ ಜೋಳದ ಕಡ್ಡಿಯನ್ನು ತುಂಬಿಕೊಂಡು ಹೋಗುತ್ತಿದ್ದಾಗ ಎಡಳ್ಳಿ ದೊಡ್ಡಿ ಗ್ರಾಮದ ಸಮೀಪ ಜೋಳದ ಕಡ್ಡಿಗೆ ಬೆಂಕಿ ಹೊತ್ತಿಕೊಂಡಿದೆ. ಆದರೆ ಇದನ್ನು ಗಮನಿಸದೆ ಚಾಲಕ ತೆರಳುತ್ತಿದ್ದಾಗ, ರಸ್ತೆಯಲ್ಲಿ ತೆರಳುತ್ತಿದ್ದ ಇನ್ಸ್‌ಪೆಕ್ಟರ್‌ ಆನಂದಮೂರ್ತಿ ಅವರು ಜೋಳದ ಕಡ್ಡಿಗೆ ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ್ದಾರೆ.

ಇನ್ಸ್‌ಪೆಕ್ಟರ್‌ ಆನಂದಮೂರ್ತಿ ಅವರು, ತಕ್ಷಣ ಜೀಪ್‌ನಿಂದ ಇಳಿದು ಟ್ರ್ಯಾಕ್ಟರ್‌ ನಿಲ್ಲಿಸಿ ಕೂಲಿ ಕಾರ್ಮಿಕರಾದ ಬಸವಣ್ಣ, ಮಹದೇವಸ್ವಾಮಿ, ಸಿದ್ದಪ್ಪ ಎಂಬುವವರನ್ನು ಕೆಳಗಿಳಿಸಿದ್ದಾರೆ. ರವಿ ರವರು ಸ್ವಲ್ಪ ಮುಂದೆ ಹೋಗಿ ಜೋಳದ ಕಡ್ಡಿಯನ್ನು ಕೆಳಗೆ ಸುರಿದು ಟ್ರ್ಯಾಕ್ಟರ್‌ ಮುಂದೆ ನಿಲ್ಲಿಸಿದ್ದಾರೆ. ಅಷ್ಟರಲ್ಲಿ ಜೋಳದ ಕಡ್ಡಿ ಸಂಪೂರ್ಣವಾಗಿ ಉರಿದುಹೋಗಿತ್ತು. ಜೊತೆಗೆ ಟ್ರ್ಯಾಕ್ಟರ್‌ನಲ್ಲಿ ಜೋಳದ ಕಡ್ಡಿ ತುಂಬಲು ಅಳವಡಿಸಿದ್ದ ಮರಗಳು ಸಹ ಸಂಪೂರ್ಣ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಇನ್ಸ್‌ಪೆಕ್ಟರ್ ಆನಂದಮೂರ್ತಿರವರ ಸಮಯಪ್ರಜ್ಞೆಯಿಂದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಜೋಳದ ಕಡ್ಡಿ ಸುಟ್ಟು ಭಸ್ಮವಾಗಿರುವುದರಿಂದ ಸುಮಾರು 6 ಸಾವಿರಕ್ಕೂ ಹೆಚ್ಚು ನಷ್ಟವಾಗಿದೆ ಎಂದು ತಿಳಿದುಬಂದಿದೆ.

ಆಂದೋಲನ ಡೆಸ್ಕ್

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

3 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

3 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

3 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

4 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

5 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

5 hours ago