ಚಾಮರಾಜನಗರ

ಚಲಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಬೆಂಕಿ: ಇನ್ಸ್‌ಪೆಕ್ಟರ್ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

ಹನೂರು: ಹನೂರು ಪಟ್ಟಣದ ಆರ್.ಎಸ್.ದೊಡ್ಡಿ ಗ್ರಾಮದಿಂದ ಚಿಂಚಳ್ಳಿ ಗ್ರಾಮಕ್ಕೆ ಟ್ರ್ಯಾಕ್ಟರ್‌ನಲ್ಲಿ ತುಂಬಿಕೊಂಡು ಹೋಗುತ್ತಿದ್ದ ಜೋಳದ ಕಡ್ಡಿಗೆ ಆಕಸ್ಮಿಕ ಬೆಂಕಿ ಬಿದ್ದಿದ್ದರು ವಿಚಾರ ತಿಳಿಯದೇ ಚಾಲಕ ತೆರಳುತ್ತಿದ್ದಾಗ, ಅದೇ ರಸ್ತೆಯಲ್ಲಿ ಬರುತ್ತಿದ್ದ ಹನೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆನಂದಮೂರ್ತಿ ವಿಚಾರ ತಿಳಿಸಿ ಮುಂದೆ ಆಗಬಹುದಾದ ದೊಡ್ಡ ಅನಾಹುತವೊಂದನ್ನು ತಪ್ಪಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಹನೂರು ತಾಲ್ಲೂಕಿನ ಚಿಂಚಳ್ಳಿ ಗ್ರಾಮದ ರವಿ ಎಂಬುವವರ ಟ್ರ್ಯಾಕ್ಟರ್‌ನಲ್ಲಿ ಆರ್.ಎಸ್.ದೊಡ್ಡಿ ಗ್ರಾಮದಿಂದ ಚಿಂಚಳ್ಳಿ ಗ್ರಾಮಕ್ಕೆ ಜೋಳದ ಕಡ್ಡಿಯನ್ನು ತುಂಬಿಕೊಂಡು ಹೋಗುತ್ತಿದ್ದಾಗ ಎಡಳ್ಳಿ ದೊಡ್ಡಿ ಗ್ರಾಮದ ಸಮೀಪ ಜೋಳದ ಕಡ್ಡಿಗೆ ಬೆಂಕಿ ಹೊತ್ತಿಕೊಂಡಿದೆ. ಆದರೆ ಇದನ್ನು ಗಮನಿಸದೆ ಚಾಲಕ ತೆರಳುತ್ತಿದ್ದಾಗ, ರಸ್ತೆಯಲ್ಲಿ ತೆರಳುತ್ತಿದ್ದ ಇನ್ಸ್‌ಪೆಕ್ಟರ್‌ ಆನಂದಮೂರ್ತಿ ಅವರು ಜೋಳದ ಕಡ್ಡಿಗೆ ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ್ದಾರೆ.

ಇನ್ಸ್‌ಪೆಕ್ಟರ್‌ ಆನಂದಮೂರ್ತಿ ಅವರು, ತಕ್ಷಣ ಜೀಪ್‌ನಿಂದ ಇಳಿದು ಟ್ರ್ಯಾಕ್ಟರ್‌ ನಿಲ್ಲಿಸಿ ಕೂಲಿ ಕಾರ್ಮಿಕರಾದ ಬಸವಣ್ಣ, ಮಹದೇವಸ್ವಾಮಿ, ಸಿದ್ದಪ್ಪ ಎಂಬುವವರನ್ನು ಕೆಳಗಿಳಿಸಿದ್ದಾರೆ. ರವಿ ರವರು ಸ್ವಲ್ಪ ಮುಂದೆ ಹೋಗಿ ಜೋಳದ ಕಡ್ಡಿಯನ್ನು ಕೆಳಗೆ ಸುರಿದು ಟ್ರ್ಯಾಕ್ಟರ್‌ ಮುಂದೆ ನಿಲ್ಲಿಸಿದ್ದಾರೆ. ಅಷ್ಟರಲ್ಲಿ ಜೋಳದ ಕಡ್ಡಿ ಸಂಪೂರ್ಣವಾಗಿ ಉರಿದುಹೋಗಿತ್ತು. ಜೊತೆಗೆ ಟ್ರ್ಯಾಕ್ಟರ್‌ನಲ್ಲಿ ಜೋಳದ ಕಡ್ಡಿ ತುಂಬಲು ಅಳವಡಿಸಿದ್ದ ಮರಗಳು ಸಹ ಸಂಪೂರ್ಣ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಇನ್ಸ್‌ಪೆಕ್ಟರ್ ಆನಂದಮೂರ್ತಿರವರ ಸಮಯಪ್ರಜ್ಞೆಯಿಂದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಜೋಳದ ಕಡ್ಡಿ ಸುಟ್ಟು ಭಸ್ಮವಾಗಿರುವುದರಿಂದ ಸುಮಾರು 6 ಸಾವಿರಕ್ಕೂ ಹೆಚ್ಚು ನಷ್ಟವಾಗಿದೆ ಎಂದು ತಿಳಿದುಬಂದಿದೆ.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

13 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

13 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

14 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

15 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

20 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

20 hours ago