ಚಾಮರಾಜನಗರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಅವರು ಒಳ್ಳೇಯದಾಗಲಿ ಎಂದು ಹರಸಿದ್ದಾರೆ: ಸುನೀಲ್‌ ಬೋಸ್‌

ಮೈಸೂರು: ಲೋಕಸಭಾ ಚುನಾವಣೆಗೆ ತಡವಾಗಿ ಟಿಕೆಟ್‌ ಸಿಕ್ಕಿದ್ದಕ್ಕೆ ಯಾವುದೇ ಬೇಸರವಿಲ್ಲ. ನಮ್ಮ ರೀತಿಯಲ್ಲಿಯೇ ಪಕ್ಷದಲ್ಲಿ ಆಕಾಂಕ್ಷಿಗಳು ಹೆಚ್ಚಿನ ಪ್ರಮಾಣದಲ್ಲಿರುತ್ತಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ಟಿಕೆಟ್‌ ಸಿಗಲಿದೆ ಎಂಬ ವಿಶ್ವಾಸವಿತ್ತು ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ ಹೇಳಿದ್ದಾರೆ.

ನಾನು ರಾಜಕಾರಣಕ್ಕೆ ಅಪರಿಚಿತನೇನೂ ಅಲ್ಲ ಮೂರು ಲೋಕಸಭಾ, ಮೂರು ವಿಧಾನ ಪರಿಷತ್ ಮತ್ತು ನಮ್ಮ ತಂದೆಯ ನಾಲ್ಕು ವಿಧಾನಸಭಾ ಚುನಾವಣೆ ಮಾಡಿರುವ ಅನುಭವ ನನಗಿದೆ ಎಂದರು.

ಚಾಮರಾಜನಗರದ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿರುವುದನ್ನು ಉಲ್ಲೇಖಿಸಿದ ಸುನೀಲ್, ರಾಜಕಾರಣ ಯಾವತ್ತಿಗೂ ನಿಂತ ನೀರಲ್ಲ, ಪ್ರಸಾದ್ ಅವರನ್ನು ನಮ್ಮ ಬಾಲ್ಯದಿಂದ ನೋಡುತ್ತಾ ಬೆಳೆದಿದ್ದೇವೆ. ತನ್ನ ತಂದೆಯವರಿಗಾಗಲೀ ಅಥವಾ ತನಗಾಗಲೀ ಅವರ ವಿರುದ್ಧ ವೈಯಕ್ತಿಕವಾಗಿ ಏನೂ ವೈರತ್ವವಿಲ್ಲ. ಸಿದ್ದಾಂತ ಎಂದು ಬಂದಾಗ ನಾವು ವಿರೋಧಿಗಳಾಗಿದ್ದೇವೆ ಎಂದು ಹೇಳಿದರು.

50 ವರ್ಷಗಳ ಕಾಲ ಸುದೀರ್ಘ ರಾಜಕಾರಣ ಬಳಿಕ ನಿವೃತ್ತಿ ಘೋಷಿಸಿರುವ ಪ್ರಸಾದ್ ಅವರು ನನಗೆ ಒಳ್ಳೆಯದಾಗಲಿ ಅಂತ ಹರಸಿ ಕಳಿಸಿದ್ದಾರೆ ಎಂದು ಟಿವಿ9 ಜೊತೆ ಮಾತನಾಡುವಾಗ ಸುನೀಲ್‌ ಬೋಸ್‌ ಮಾಹಿತಿ ಹಂಚಿಕೊಂಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

6 mins ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

13 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

13 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

13 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

13 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

13 hours ago