ಮೈಸೂರು: ಲೋಕಸಭಾ ಚುನಾವಣೆಗೆ ತಡವಾಗಿ ಟಿಕೆಟ್ ಸಿಕ್ಕಿದ್ದಕ್ಕೆ ಯಾವುದೇ ಬೇಸರವಿಲ್ಲ. ನಮ್ಮ ರೀತಿಯಲ್ಲಿಯೇ ಪಕ್ಷದಲ್ಲಿ ಆಕಾಂಕ್ಷಿಗಳು ಹೆಚ್ಚಿನ ಪ್ರಮಾಣದಲ್ಲಿರುತ್ತಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ಟಿಕೆಟ್ ಸಿಗಲಿದೆ ಎಂಬ ವಿಶ್ವಾಸವಿತ್ತು ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಹೇಳಿದ್ದಾರೆ.
ನಾನು ರಾಜಕಾರಣಕ್ಕೆ ಅಪರಿಚಿತನೇನೂ ಅಲ್ಲ ಮೂರು ಲೋಕಸಭಾ, ಮೂರು ವಿಧಾನ ಪರಿಷತ್ ಮತ್ತು ನಮ್ಮ ತಂದೆಯ ನಾಲ್ಕು ವಿಧಾನಸಭಾ ಚುನಾವಣೆ ಮಾಡಿರುವ ಅನುಭವ ನನಗಿದೆ ಎಂದರು.
ಚಾಮರಾಜನಗರದ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿರುವುದನ್ನು ಉಲ್ಲೇಖಿಸಿದ ಸುನೀಲ್, ರಾಜಕಾರಣ ಯಾವತ್ತಿಗೂ ನಿಂತ ನೀರಲ್ಲ, ಪ್ರಸಾದ್ ಅವರನ್ನು ನಮ್ಮ ಬಾಲ್ಯದಿಂದ ನೋಡುತ್ತಾ ಬೆಳೆದಿದ್ದೇವೆ. ತನ್ನ ತಂದೆಯವರಿಗಾಗಲೀ ಅಥವಾ ತನಗಾಗಲೀ ಅವರ ವಿರುದ್ಧ ವೈಯಕ್ತಿಕವಾಗಿ ಏನೂ ವೈರತ್ವವಿಲ್ಲ. ಸಿದ್ದಾಂತ ಎಂದು ಬಂದಾಗ ನಾವು ವಿರೋಧಿಗಳಾಗಿದ್ದೇವೆ ಎಂದು ಹೇಳಿದರು.
50 ವರ್ಷಗಳ ಕಾಲ ಸುದೀರ್ಘ ರಾಜಕಾರಣ ಬಳಿಕ ನಿವೃತ್ತಿ ಘೋಷಿಸಿರುವ ಪ್ರಸಾದ್ ಅವರು ನನಗೆ ಒಳ್ಳೆಯದಾಗಲಿ ಅಂತ ಹರಸಿ ಕಳಿಸಿದ್ದಾರೆ ಎಂದು ಟಿವಿ9 ಜೊತೆ ಮಾತನಾಡುವಾಗ ಸುನೀಲ್ ಬೋಸ್ ಮಾಹಿತಿ ಹಂಚಿಕೊಂಡಿದ್ದಾರೆ.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…