ಹನೂರು: ಹನೂರು ವಿಧಾನಸಭಾ ಕ್ಷೇತ್ರ ಭೌಗೋಳಿಕವಾಗಿ ಬಹಳ ವಿಸ್ತೀರ್ಣವನ್ನು ಹೊಂದಿದ್ದು, ಹೆಚ್ಚಿನ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸಲು ಈಗಾಗಲೇ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಹೆಚ್ ಸಿ ಮಹದೇವಪ್ಪ ಸಂಸದ ಸುನೀಲ್ ಬೋಸ್ ಸೂಚನೆ ನೀಡಿದ್ದಾರೆ. ಅದರಂತೆ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಿದ್ದಾರೆ. ಹಾಗಾಗಿ ರೈತರು ಗೊಂದಲಕ್ಕೆ ಈಡಾಗುವುದು ಬೇಡ ಎಂದು ಕೆಪಿಸಿಸಿ ಜಿಲ್ಲಾ ವಕ್ತಾರ ಮಧುವನಹಳ್ಳಿ ಎಸ್.ಶಿವಕುಮಾರ್ ತಿಳಿಸಿದರು.
ಈ ಕುರಿತು ಹನೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್, ಹಾಗೂ ಸಂಸದ ಸುನೀಲ್ ಬೋಸ್ ರವರು ಧರಣಿ ಸ್ಥಳಕ್ಕೆ ಬರಲಿಲ್ಲವೆಂಬ ಕಾರಣ ಒಡ್ಡಿ ಅವರನ್ನು ಹುಡುಕಿ ತರುವಂತೆ ಪೊಲೀಸ್ ಠಾಣೆಯಲ್ಲಿ ದೂರು ನೀಡಬಾರದಾಗಿತ್ತು.
ಇದನ್ನು ಓದಿ: ಅತ್ಯಾಚಾರ ಕೇಸ್ನಲ್ಲಿ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ಕೊಟ್ಟ ನ್ಯಾಯಾಲಯ
ಹನೂರು ವಿಧಾನಸಭಾ ಕ್ಷೇತ್ರಕ್ಕೆ ಈಗಾಗಲೇ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸಲು ಅಧಿಕಾರಿಗಳ ಜೊತೆ ಸಮಾಲೋಚಿಸಿ ಆದಷ್ಟು ಬೇಗ ನೀರಾವರಿ ವ್ಯವಸ್ಥೆಯನ್ನು ಜಾರಿಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಕ್ರಿಯಾಯೋಜನೆ ತಯಾರಿಸಲು ಸೂಚನೆ ನೀಡಿದ್ದಾರೆ. ಅಧಿಕಾರಿಗಳು ಸಹ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ರೈತ ಸಂಘದ ಪದಾಧಿಕಾರಿಗಳು ಆತುರದ ನಿರ್ಧಾರ ತೆಗೆದುಕೊಳ್ಳದೆ ಗೊಂದಲಕ್ಕೆ ಒಳಗಾಗದೆ ತಾಳ್ಮೆಯಿಂದ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದು. ನಮ್ಮ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಲೋಕಸಭಾ ಸದಸ್ಯರು ಧರಣಿ ಸ್ಥಳಕ್ಕೆ ಬರಲಿಲ್ಲ ಎಂಬ ಒಂದೇ ಒಂದು ಕಾರಣ ಹೇಳಿ ದೂರು ನೀಡಿರುವುದು ಸರಿಯಲ್ಲ. ಅವರು ಸ್ಥಳಕ್ಕೆ ಬಾರದಿರುವ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸುವ ಬದಲು ನೀರಾವರಿ ಯೋಜನೆಗೆ ಸಂಬಂಧಪಟ್ಟಂತೆ ಏನು ಯೋಜನೆಗಳನ್ನು ರೂಪಿಸಿದ್ದಾರೆ, ಅಭಿವೃದ್ಧಿಗೆ ಪೂರಕವಾಗಿಯೇ ಕೆಲಸ ಮಾಡುತ್ತಿದ್ದಾರೆ ಎಂಬುದನ್ನು ತಿಳಿದುಕೊಳ್ಳುವುದು ಒಳ್ಳೆಯದು ಎಂದರು.
ರೈತರ ಪರ ಸರ್ಕಾರ : ನಮ್ಮ ಕಾಂಗ್ರೆಸ್ ಸರ್ಕಾರ ರೈತ ಪರವಾದಂತಹ ಸರ್ಕಾರವಾಗಿದೆ. ರೈತರಿಗೆ ಎಲ್ಲಾ ರೀತಿಯ ನೆರವನ್ನು ನೀಡಲು ಸಿದ್ಧವಾಗಿದೆ. ಇದೀಗ ಕಲಾಪಗಳು ಆರಂಭವಾಗಿರುವುದರಿಂದ ಕಲಾಪಗಳು ಮುಗಿದ ಬಳಿಕ ನಿಮ್ಮಲ್ಲಿಗೆ ಸಂಸದರು ಆಗುತ್ತಿಲ್ಲ ಮಂತ್ರಿಗಳು ಬಂದು ಸಮಸ್ಯೆಗಳನ್ನು ಕೇಳಲಿದ್ದಾರೆ ಎಂದರು.
ಹಲವಾರು ವರ್ಷಗಳಿಂದ ಮಾಜಿ ಸಚಿವ ದಿ. ರಾಜುಗೌಡ, ಸಂಸದರಾದ ದಿ ಶ್ರೀನಿವಾಸ್ ಪ್ರಸಾದ್, ಆರ್ ಧ್ರುವ ನಾರಾಯಣ ಮಾಜಿ ಶಾಸಕರಾದ ಆರ್ ನರೇಂದ್ರ ರವರು ಕಳೆದ ಹಲವಾರು ವರ್ಷಗಳಿಂದ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಭೌಗೋಳಿಕವಾಗಿ ವಿಸ್ತೀರ್ಣ ಹೊಂದಿರುವುದರಿಂದ ಅನುದಾನದ ಕೊರತೆಯಿಂದ ಕಾಮಗಾರಿಗಳು ವಿಳಂಬವಾಗಿದೆ. ಇದೀಗ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್ ಸಿ ಮಹದೇವಪ್ಪ ಹಾಗೂ ಸಂಸದ ಸುನೀಲ್ ಬೋಸ್ ರವರು ಸಭೆ ನಡೆಸಿ 25 ಸಾವಿರ ಎಕರೆ ಪ್ರದೇಶಗಳಿಗೆ ನೀರಾವರಿ ಯೋಜನೆ ಕಲ್ಪಿಸಲು ಡಿಪಿಆರ್ ಸಿದ್ದಪಡಿಸಲು ಸೂಚನೆ ನೀಡಿದ್ದಾರೆ. ಇದಲ್ಲದೆ ಸರ್ವೆ ಕಾರ್ಯವು ಪ್ರಗತಿಯಲ್ಲಿರುವುದರಿಂದ ರೈತ ಮುಖಂಡರುಗಳು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…
ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…
ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…