ಚಾಮರಾಜನಗರ

ಹನೂರು ಕ್ಷೇತ್ರಕ್ಕೆ ನೀರಾವರಿ ವ್ಯವಸ್ಥೆ ಕಲ್ಪಿಸಲು ಸಂಸದ ಸುನೀಲ್‌ ಬೋಸ್‌ ಸೂಚನೆ: ಮಧುವನಹಳ್ಳಿ ಎಸ್.ಶಿವಕುಮಾರ್‌

ಹನೂರು: ಹನೂರು ವಿಧಾನಸಭಾ ಕ್ಷೇತ್ರ ಭೌಗೋಳಿಕವಾಗಿ ಬಹಳ ವಿಸ್ತೀರ್ಣವನ್ನು ಹೊಂದಿದ್ದು, ಹೆಚ್ಚಿನ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸಲು ಈಗಾಗಲೇ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಹೆಚ್ ಸಿ ಮಹದೇವಪ್ಪ ಸಂಸದ ಸುನೀಲ್ ಬೋಸ್ ಸೂಚನೆ ನೀಡಿದ್ದಾರೆ. ಅದರಂತೆ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಿದ್ದಾರೆ. ಹಾಗಾಗಿ ರೈತರು ಗೊಂದಲಕ್ಕೆ ಈಡಾಗುವುದು ಬೇಡ ಎಂದು ಕೆಪಿಸಿಸಿ ಜಿಲ್ಲಾ ವಕ್ತಾರ ಮಧುವನಹಳ್ಳಿ ಎಸ್.ಶಿವಕುಮಾರ್ ತಿಳಿಸಿದರು.

ಈ ಕುರಿತು ಹನೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್, ಹಾಗೂ ಸಂಸದ ಸುನೀಲ್ ಬೋಸ್ ರವರು ಧರಣಿ ಸ್ಥಳಕ್ಕೆ ಬರಲಿಲ್ಲವೆಂಬ ಕಾರಣ ಒಡ್ಡಿ ಅವರನ್ನು ಹುಡುಕಿ ತರುವಂತೆ ಪೊಲೀಸ್ ಠಾಣೆಯಲ್ಲಿ ದೂರು ನೀಡಬಾರದಾಗಿತ್ತು.

ಇದನ್ನು ಓದಿ: ಅತ್ಯಾಚಾರ ಕೇಸ್‌ನಲ್ಲಿ ಪ್ರಜ್ವಲ್‌ ರೇವಣ್ಣಗೆ ಬಿಗ್‌ ಶಾಕ್‌ ಕೊಟ್ಟ ನ್ಯಾಯಾಲಯ

ಹನೂರು ವಿಧಾನಸಭಾ ಕ್ಷೇತ್ರಕ್ಕೆ ಈಗಾಗಲೇ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸಲು ಅಧಿಕಾರಿಗಳ ಜೊತೆ ಸಮಾಲೋಚಿಸಿ ಆದಷ್ಟು ಬೇಗ ನೀರಾವರಿ ವ್ಯವಸ್ಥೆಯನ್ನು ಜಾರಿಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಕ್ರಿಯಾಯೋಜನೆ ತಯಾರಿಸಲು ಸೂಚನೆ ನೀಡಿದ್ದಾರೆ. ಅಧಿಕಾರಿಗಳು ಸಹ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ರೈತ ಸಂಘದ ಪದಾಧಿಕಾರಿಗಳು ಆತುರದ ನಿರ್ಧಾರ ತೆಗೆದುಕೊಳ್ಳದೆ ಗೊಂದಲಕ್ಕೆ ಒಳಗಾಗದೆ ತಾಳ್ಮೆಯಿಂದ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದು. ನಮ್ಮ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಲೋಕಸಭಾ ಸದಸ್ಯರು ಧರಣಿ ಸ್ಥಳಕ್ಕೆ ಬರಲಿಲ್ಲ ಎಂಬ ಒಂದೇ ಒಂದು ಕಾರಣ ಹೇಳಿ ದೂರು ನೀಡಿರುವುದು ಸರಿಯಲ್ಲ. ಅವರು ಸ್ಥಳಕ್ಕೆ ಬಾರದಿರುವ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸುವ ಬದಲು ನೀರಾವರಿ ಯೋಜನೆಗೆ ಸಂಬಂಧಪಟ್ಟಂತೆ ಏನು ಯೋಜನೆಗಳನ್ನು ರೂಪಿಸಿದ್ದಾರೆ, ಅಭಿವೃದ್ಧಿಗೆ ಪೂರಕವಾಗಿಯೇ ಕೆಲಸ ಮಾಡುತ್ತಿದ್ದಾರೆ ಎಂಬುದನ್ನು ತಿಳಿದುಕೊಳ್ಳುವುದು ಒಳ್ಳೆಯದು ಎಂದರು.

ರೈತರ ಪರ ಸರ್ಕಾರ : ನಮ್ಮ ಕಾಂಗ್ರೆಸ್ ಸರ್ಕಾರ ರೈತ ಪರವಾದಂತಹ ಸರ್ಕಾರವಾಗಿದೆ. ರೈತರಿಗೆ ಎಲ್ಲಾ ರೀತಿಯ ನೆರವನ್ನು ನೀಡಲು ಸಿದ್ಧವಾಗಿದೆ. ಇದೀಗ ಕಲಾಪಗಳು ಆರಂಭವಾಗಿರುವುದರಿಂದ ಕಲಾಪಗಳು ಮುಗಿದ ಬಳಿಕ ನಿಮ್ಮಲ್ಲಿಗೆ ಸಂಸದರು ಆಗುತ್ತಿಲ್ಲ ಮಂತ್ರಿಗಳು ಬಂದು ಸಮಸ್ಯೆಗಳನ್ನು ಕೇಳಲಿದ್ದಾರೆ ಎಂದರು.

ಹಲವಾರು ವರ್ಷಗಳಿಂದ ಮಾಜಿ ಸಚಿವ ದಿ. ರಾಜುಗೌಡ, ಸಂಸದರಾದ ದಿ ಶ್ರೀನಿವಾಸ್ ಪ್ರಸಾದ್, ಆರ್ ಧ್ರುವ ನಾರಾಯಣ ಮಾಜಿ ಶಾಸಕರಾದ ಆರ್ ನರೇಂದ್ರ ರವರು ಕಳೆದ ಹಲವಾರು ವರ್ಷಗಳಿಂದ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಭೌಗೋಳಿಕವಾಗಿ ವಿಸ್ತೀರ್ಣ ಹೊಂದಿರುವುದರಿಂದ ಅನುದಾನದ ಕೊರತೆಯಿಂದ ಕಾಮಗಾರಿಗಳು ವಿಳಂಬವಾಗಿದೆ. ಇದೀಗ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್ ಸಿ ಮಹದೇವಪ್ಪ ಹಾಗೂ ಸಂಸದ ಸುನೀಲ್ ಬೋಸ್ ರವರು ಸಭೆ ನಡೆಸಿ 25 ಸಾವಿರ ಎಕರೆ ಪ್ರದೇಶಗಳಿಗೆ ನೀರಾವರಿ ಯೋಜನೆ ಕಲ್ಪಿಸಲು ಡಿಪಿಆರ್ ಸಿದ್ದಪಡಿಸಲು ಸೂಚನೆ ನೀಡಿದ್ದಾರೆ. ಇದಲ್ಲದೆ ಸರ್ವೆ ಕಾರ್ಯವು ಪ್ರಗತಿಯಲ್ಲಿರುವುದರಿಂದ ರೈತ ಮುಖಂಡರುಗಳು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

5 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

5 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

5 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

5 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

6 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

6 hours ago